AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಸ್ತೆ ಗುಂಡಿ ಮುಚ್ಚಿದ ಬೆಂಗಳೂರಿನ ಟ್ರಾಫಿಕ್ ಪೊಲೀಸ್; ವೈರಲ್ ವಿಡಿಯೋಗೆ ಗೃಹ ಸಚಿವರಿಂದಲೂ ಮೆಚ್ಚುಗೆ

Bangalore Traffic Police | ಸಾಮಾನ್ಯ ಜನರು ಮಾತ್ರವಲ್ಲದೆ ಕರ್ನಾಟಕದ ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡ ಈ ವಿಡಿಯೋವನ್ನು ಶೇರ್ ಮಾಡಿಕೊಂಡು, ಟ್ರಾಫಿಕ್ ಪೊಲೀಸ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Viral Video: ರಸ್ತೆ ಗುಂಡಿ ಮುಚ್ಚಿದ ಬೆಂಗಳೂರಿನ ಟ್ರಾಫಿಕ್ ಪೊಲೀಸ್; ವೈರಲ್ ವಿಡಿಯೋಗೆ ಗೃಹ ಸಚಿವರಿಂದಲೂ ಮೆಚ್ಚುಗೆ
ರಸ್ತೆ ಗುಂಡಿಗಳನ್ನು ಮುಚ್ಚಿದ ಟ್ರಾಫಿಕ್ ಪೊಲೀಸ್
TV9 Web
| Edited By: |

Updated on:Sep 13, 2021 | 8:41 PM

Share

ಬೆಂಗಳೂರು: ಬೆಂಗಳೂರಿನ ಟ್ರಾಫಿಕ್ ಪೊಲೀಸ್ ಖುದ್ದಾಗಿ ನಿಂತು ರಸ್ತೆಯ ಗುಂಡಿಗಳನ್ನು ತುಂಬುತ್ತಿರುವ ವಿಡಿಯೋ ಭಾರೀ ವೈರಲ್ ಆಗಿದೆ. ಆ ಟ್ರಾಫಿಕ್ ಪೊಲೀಸ್ ಕಾರ್ಯಕ್ಕೆ ಮೆಚ್ಚುಗೆಯೂ ವ್ಯಕ್ತವಾಗಿದೆ. ಸಾಮಾನ್ಯ ಜನರು ಮಾತ್ರವಲ್ಲದೆ ಕರ್ನಾಟಕದ ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡ ಈ ವಿಡಿಯೋವನ್ನು ಶೇರ್ ಮಾಡಿಕೊಂಡು, ಟ್ರಾಫಿಕ್ ಪೊಲೀಸ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ‘ಟ್ರಾಫಿಕ್ ಸುಗಮವಾಗಿರುವಂತೆ ನೋಡಿಕೊಳ್ಳುವುದು ಟ್ರಾಫಿಕ್ ಪೊಲೀಸರ ಕೆಲಸ. ಆದರೆ, ನಮ್ಮ ಟ್ರಾಫಿಕ್ ಪೊಲೀಸ್ ರಸ್ತೆಗಳ ಗುಂಡಿಗಳನ್ನು ಕೂಡ ಮುಚ್ಚುವ ಮೂಲಕ ವಾಹನ ಸವಾರರು ಸಲೀಸಾಗಿ ಸಂಚರಿಸಲು ಸಹಾಯ ಮಾಡಿದ್ದಾರೆ. ಸಾರ್ವಜನಿಕರಿಗಾಗಿ ಹಗಲಿರುಳು ಕೆಲಸ ಮಾಡುತ್ತಿರುವ ಟ್ರಾಫಿಕ್ ಪೊಲೀಸರಿಗೆ ಅಭಿನಂದನೆಗಳು’ ಎಂದು ಬರೆದುಕೊಂಡಿದ್ದಾರೆ.

ಸೆ. 9ರಂದು ಈ ಘಟನೆ ನಡೆದಿದ್ದು, ಸಂತೋಷ್ ಎಂ. ಎಂಬ ಬೆಂಗಳೂರಿನ ಬ್ಯಾಟರಾಯನಪುರದ ಟ್ರಾಫಿಕ್ ಪೊಲೀಸ್ ಹಾಗೂ ಅವರ ತಂಡ ಈ ರೀತಿ ಟ್ರಾಫಿಕ್​ನಲ್ಲಿ ಜನರಿಗೆ ತೊಂದರೆಯಾಗದಂತೆ ಮಾಡಲು, ರಸ್ತೆಗಳಲ್ಲಿ ಇರುವ ಅಡೆತಡೆಗಳನ್ನು ತಡೆಯಲು ಹಲವು ಕೆಲಸಗಳನ್ನು ಮಾಡುತ್ತಿದ್ದಾರೆ. ಟ್ರಾಫಿಕ್ ಪೊಲೀಸ್ ರಸ್ತೆ ಗುಂಡಿಗಳನ್ನು ತುಂಬುತ್ತಿರುವುದನ್ನು ಯಾರೋ ವಿಡಿಯೋ ಮಾಡಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದಾರೆ. ಇದಕ್ಕೂ ಮೊದಲು ಕೂಡ ಅವರು ಈ ರೀತಿಯ ಹಲವು ಉತ್ತಮ ಕೆಲಸಗಳನ್ನು ಮಾಡಿದ್ದಾರೆ ಎಂದು ಟ್ರಾಫಿಕ್ ವಿಭಾಗದ ಡಿಸಿಪಿ ಕುಲದೀಪ್ ಕೆ. ಜೈನ್ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಹಿರಿಯ ನಾಗರಿಕರೊಬ್ಬರ ಸ್ಕೂಟರ್ ರಸ್ತೆ ಗುಂಡಿಗೆ ಸಿಲುಕಿ ಕೆಳಗೆ ಬಿದ್ದಿತ್ತು. ಈ ವೇಳೆ ಆ ವ್ಯಕ್ತಿಯ ತಲೆಗೆ ಪೆಟ್ಟಾಗಿ ಸಾವನ್ನಪ್ಪಿದ್ದರು. ಇಂತಹ ದುರಂತಗಳನ್ನು ತಪ್ಪಿಸಲು ಎಲ್ಲರೂ ಎಚ್ಚರ ವಹಿಸಬೇಕಾಗಿದೆ. ಈ ನಿಟ್ಟಿನಲ್ಲಿ ಬಿಬಿಎಂಪಿ ಕೂಡ ರಸ್ತೆ ಗುಂಡಿಗಳನ್ನು ತುಂಬುವ ಕೆಲಸ ಮಾಡುತ್ತಿದೆ.

ಇದನ್ನೂ ಓದಿ: Bengaluru: ಸದಾಶಿವನಗರದ ಸ್ಯಾಂಕಿ ಟ್ಯಾಂಕ್​ನಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ವ್ಯವಸ್ಥೆ; ನಿಯಮಗಳು ಇಲ್ಲಿದೆ

Viral Video: ರಸ್ತೆಯಲ್ಲಿ ಹೊತ್ತಿ ಉರಿಯುತ್ತಿದ್ದ ಕಾರಿನೊಳಗಿದ್ದ ವೃದ್ಧರನ್ನು ಕಾಪಾಡಿದ ಯುವಕರು; ಶಾಕಿಂಗ್ ವಿಡಿಯೋ ಇಲ್ಲಿದೆ

(Bengaluru traffic Police filled pothole in Bangalore Road Home Minister Araga Jnanendra Shared Viral Video)

Published On - 8:39 pm, Mon, 13 September 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು