AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಸ್ತೆ ಗುಂಡಿ ಮುಚ್ಚಿದ ಬೆಂಗಳೂರಿನ ಟ್ರಾಫಿಕ್ ಪೊಲೀಸ್; ವೈರಲ್ ವಿಡಿಯೋಗೆ ಗೃಹ ಸಚಿವರಿಂದಲೂ ಮೆಚ್ಚುಗೆ

Bangalore Traffic Police | ಸಾಮಾನ್ಯ ಜನರು ಮಾತ್ರವಲ್ಲದೆ ಕರ್ನಾಟಕದ ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡ ಈ ವಿಡಿಯೋವನ್ನು ಶೇರ್ ಮಾಡಿಕೊಂಡು, ಟ್ರಾಫಿಕ್ ಪೊಲೀಸ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Viral Video: ರಸ್ತೆ ಗುಂಡಿ ಮುಚ್ಚಿದ ಬೆಂಗಳೂರಿನ ಟ್ರಾಫಿಕ್ ಪೊಲೀಸ್; ವೈರಲ್ ವಿಡಿಯೋಗೆ ಗೃಹ ಸಚಿವರಿಂದಲೂ ಮೆಚ್ಚುಗೆ
ರಸ್ತೆ ಗುಂಡಿಗಳನ್ನು ಮುಚ್ಚಿದ ಟ್ರಾಫಿಕ್ ಪೊಲೀಸ್
TV9 Web
| Updated By: ಸುಷ್ಮಾ ಚಕ್ರೆ|

Updated on:Sep 13, 2021 | 8:41 PM

Share

ಬೆಂಗಳೂರು: ಬೆಂಗಳೂರಿನ ಟ್ರಾಫಿಕ್ ಪೊಲೀಸ್ ಖುದ್ದಾಗಿ ನಿಂತು ರಸ್ತೆಯ ಗುಂಡಿಗಳನ್ನು ತುಂಬುತ್ತಿರುವ ವಿಡಿಯೋ ಭಾರೀ ವೈರಲ್ ಆಗಿದೆ. ಆ ಟ್ರಾಫಿಕ್ ಪೊಲೀಸ್ ಕಾರ್ಯಕ್ಕೆ ಮೆಚ್ಚುಗೆಯೂ ವ್ಯಕ್ತವಾಗಿದೆ. ಸಾಮಾನ್ಯ ಜನರು ಮಾತ್ರವಲ್ಲದೆ ಕರ್ನಾಟಕದ ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡ ಈ ವಿಡಿಯೋವನ್ನು ಶೇರ್ ಮಾಡಿಕೊಂಡು, ಟ್ರಾಫಿಕ್ ಪೊಲೀಸ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ‘ಟ್ರಾಫಿಕ್ ಸುಗಮವಾಗಿರುವಂತೆ ನೋಡಿಕೊಳ್ಳುವುದು ಟ್ರಾಫಿಕ್ ಪೊಲೀಸರ ಕೆಲಸ. ಆದರೆ, ನಮ್ಮ ಟ್ರಾಫಿಕ್ ಪೊಲೀಸ್ ರಸ್ತೆಗಳ ಗುಂಡಿಗಳನ್ನು ಕೂಡ ಮುಚ್ಚುವ ಮೂಲಕ ವಾಹನ ಸವಾರರು ಸಲೀಸಾಗಿ ಸಂಚರಿಸಲು ಸಹಾಯ ಮಾಡಿದ್ದಾರೆ. ಸಾರ್ವಜನಿಕರಿಗಾಗಿ ಹಗಲಿರುಳು ಕೆಲಸ ಮಾಡುತ್ತಿರುವ ಟ್ರಾಫಿಕ್ ಪೊಲೀಸರಿಗೆ ಅಭಿನಂದನೆಗಳು’ ಎಂದು ಬರೆದುಕೊಂಡಿದ್ದಾರೆ.

ಸೆ. 9ರಂದು ಈ ಘಟನೆ ನಡೆದಿದ್ದು, ಸಂತೋಷ್ ಎಂ. ಎಂಬ ಬೆಂಗಳೂರಿನ ಬ್ಯಾಟರಾಯನಪುರದ ಟ್ರಾಫಿಕ್ ಪೊಲೀಸ್ ಹಾಗೂ ಅವರ ತಂಡ ಈ ರೀತಿ ಟ್ರಾಫಿಕ್​ನಲ್ಲಿ ಜನರಿಗೆ ತೊಂದರೆಯಾಗದಂತೆ ಮಾಡಲು, ರಸ್ತೆಗಳಲ್ಲಿ ಇರುವ ಅಡೆತಡೆಗಳನ್ನು ತಡೆಯಲು ಹಲವು ಕೆಲಸಗಳನ್ನು ಮಾಡುತ್ತಿದ್ದಾರೆ. ಟ್ರಾಫಿಕ್ ಪೊಲೀಸ್ ರಸ್ತೆ ಗುಂಡಿಗಳನ್ನು ತುಂಬುತ್ತಿರುವುದನ್ನು ಯಾರೋ ವಿಡಿಯೋ ಮಾಡಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದಾರೆ. ಇದಕ್ಕೂ ಮೊದಲು ಕೂಡ ಅವರು ಈ ರೀತಿಯ ಹಲವು ಉತ್ತಮ ಕೆಲಸಗಳನ್ನು ಮಾಡಿದ್ದಾರೆ ಎಂದು ಟ್ರಾಫಿಕ್ ವಿಭಾಗದ ಡಿಸಿಪಿ ಕುಲದೀಪ್ ಕೆ. ಜೈನ್ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಹಿರಿಯ ನಾಗರಿಕರೊಬ್ಬರ ಸ್ಕೂಟರ್ ರಸ್ತೆ ಗುಂಡಿಗೆ ಸಿಲುಕಿ ಕೆಳಗೆ ಬಿದ್ದಿತ್ತು. ಈ ವೇಳೆ ಆ ವ್ಯಕ್ತಿಯ ತಲೆಗೆ ಪೆಟ್ಟಾಗಿ ಸಾವನ್ನಪ್ಪಿದ್ದರು. ಇಂತಹ ದುರಂತಗಳನ್ನು ತಪ್ಪಿಸಲು ಎಲ್ಲರೂ ಎಚ್ಚರ ವಹಿಸಬೇಕಾಗಿದೆ. ಈ ನಿಟ್ಟಿನಲ್ಲಿ ಬಿಬಿಎಂಪಿ ಕೂಡ ರಸ್ತೆ ಗುಂಡಿಗಳನ್ನು ತುಂಬುವ ಕೆಲಸ ಮಾಡುತ್ತಿದೆ.

ಇದನ್ನೂ ಓದಿ: Bengaluru: ಸದಾಶಿವನಗರದ ಸ್ಯಾಂಕಿ ಟ್ಯಾಂಕ್​ನಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ವ್ಯವಸ್ಥೆ; ನಿಯಮಗಳು ಇಲ್ಲಿದೆ

Viral Video: ರಸ್ತೆಯಲ್ಲಿ ಹೊತ್ತಿ ಉರಿಯುತ್ತಿದ್ದ ಕಾರಿನೊಳಗಿದ್ದ ವೃದ್ಧರನ್ನು ಕಾಪಾಡಿದ ಯುವಕರು; ಶಾಕಿಂಗ್ ವಿಡಿಯೋ ಇಲ್ಲಿದೆ

(Bengaluru traffic Police filled pothole in Bangalore Road Home Minister Araga Jnanendra Shared Viral Video)

Published On - 8:39 pm, Mon, 13 September 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ