AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಲಾ, ಊಬರ್ ಆ್ಯಪ್‌ನಲ್ಲೇ ಕಾಣಿಸಲಿದೆ ‘ನಮ್ಮ ಬಿಎಂಟಿಸಿ’ ಬಸ್ ಲೈವ್ ಟ್ರ್ಯಾಕಿಂಗ್

ಬೆಂಗಳೂರು ಸಾರಿಗೆ ಇಲಾಖೆ ಮಹತ್ವದ ಬದಲಾವಣೆಗಳನ್ನು ಘೋಷಿಸಿದೆ. ಓಲಾ, ಊಬರ್ ಬಳಕೆದಾರರು ಈಗ 'ನಮ್ಮ ಬಿಎಂಟಿಸಿ ಆ್ಯಪ್ 2.0' ಮೂಲಕ ಬಿಎಂಟಿಸಿ ಬಸ್‌ಗಳನ್ನು ಲೈವ್ ಟ್ರ್ಯಾಕ್ ಮಾಡಬಹುದು. ಮೆಟ್ರೋ ಪ್ರಯಾಣಿಕರಿಗೆ ಲಾಸ್ಟ್ ಮೈಲ್ ಸಂಪರ್ಕಕ್ಕೆ 200 ಮಿನಿ ಎಸಿ ಎಲೆಕ್ಟ್ರಿಕ್ ಬಸ್‌ಗಳನ್ನು ನಿಯೋಜಿಸಲಾಗುವುದು. ಐಟಿ-ಬಿಟಿ ಕಂಪನಿಗಳಿಗೆ ಹೆಚ್ಚುವರಿ ಎಸಿ ಬಸ್‌ ಸೇವೆ ಲಭ್ಯವಾಗಲಿದ್ದು, ಬೆಂಗಳೂರಿನ ಸಂಚಾರ ಸುಧಾರಣೆಗೆ ಇಲಾಖೆ ಒತ್ತು ನೀಡಿದೆ.

ಓಲಾ, ಊಬರ್ ಆ್ಯಪ್‌ನಲ್ಲೇ ಕಾಣಿಸಲಿದೆ 'ನಮ್ಮ ಬಿಎಂಟಿಸಿ' ಬಸ್ ಲೈವ್ ಟ್ರ್ಯಾಕಿಂಗ್
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Sep 10, 2026 | 6:09 AM

Share

ಬೆಂಗಳೂರು, ಸೆ.10: ರಾಜಧಾನಿ ಬೆಂಗಳೂರಿನ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಸಾರಿಗೆ ಇಲಾಖೆ ಚಾಲನೆ ನೀಡಿದೆ. ಇನ್ಮುಂದೆ ಓಲಾ (Ola), ಊಬರ್ (Uber) ಹಾಗೂ ಇತರ ಖಾಸಗಿ ಆ್ಯಪ್ ಆಧಾರಿತ ಟ್ಯಾಕ್ಸಿ ಬಳಸುವ ಪ್ರಯಾಣಿಕರು ‘ನಮ್ಮ ಬಿಎಂಟಿಸಿ ಮೊಬೈಲ್ ಆ್ಯಪ್ 2.0’ ಮೂಲಕ ಬಿಎಂಟಿಸಿ ಬಸ್‌ಗಳ ಲೈವ್ ಟ್ರ್ಯಾಕಿಂಗ್ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ಸಾರಿಗೆ ಇಲಾಖೆ, ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಖಾಸಗಿ ಆ್ಯಪ್ ಆಧಾರಿತ ಟ್ಯಾಕ್ಸಿಗಳಿಗೂ ಬಿಎಂಟಿಸಿಯ ಲೈವ್ ಟ್ರ್ಯಾಕಿಂಗ್ ಆ್ಯಪ್ ವಿಸ್ತರಿಸುವಂತೆ ನಿರ್ದೇಶನ ನೀಡಿದ್ದಾರೆ. ಇದರಿಂದ ಕ್ಯಾಬ್‌ಗಳಿಂದ ಇಳಿಯುವ ಪ್ರಯಾಣಿಕರು ತಮ್ಮ ಗಮ್ಯಸ್ಥಾನ ತಲುಪಲು ಲಭ್ಯವಿರುವ ಬಿಎಂಟಿಸಿ ಬಸ್‌ಗಳ ಮಾಹಿತಿಯನ್ನು ಸುಲಭವಾಗಿ ಪಡೆದುಕೊಳ್ಳಲು ಸಾಧ್ಯವಾಗುತ್ತದೆ.

ಮೆಟ್ರೋ ನಿಲ್ದಾಣಗಳಿಗೆ 200 ಮಿನಿ ಎಸಿ ಎಲೆಕ್ಟ್ರಿಕ್ ಬಸ್‌ಗಳು

ಮೆಟ್ರೋ ಪ್ರಯಾಣಿಕರಿಗೆ ಲಾಸ್ಟ್ ಮೈಲ್ ಕನೆಕ್ಟಿವಿಟಿ ಕಲ್ಪಿಸಲು ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ 200 ಮಿನಿ ಏರ್-ಕಂಡೀಷನ್ಡ್ ಎಲೆಕ್ಟ್ರಿಕ್ ಬಸ್‌ಗಳನ್ನು ನಿಯೋಜಿಸುವಂತೆ ಸಚಿವರು ಬಿಎಂಟಿಸಿಗೆ ಸೂಚಿಸಿದ್ದಾರೆ. ಕೇಂದ್ರ ಸರ್ಕಾರದ ಈ ಯೋಜನೆಯಡಿ ಬಿಎಂಟಿಸಿ ಖರೀದಿಸುತ್ತಿರುವ ಒಟ್ಟು 4,500 ಎಲೆಕ್ಟ್ರಿಕ್ ಬಸ್‌ಗಳ ಪೈಕಿ ಈ 200 ಮಿನಿ ಎಸಿ ಬಸ್‌ಗಳು ಭಾಗವಾಗಿರಲಿವೆ.ಈ ಮಿನಿ ಬಸ್‌ಗಳು ಮೆಟ್ರೋ ನಿಲ್ದಾಣಗಳ ಸುತ್ತಮುತ್ತಲಿನ 5 ಕಿ.ಮೀ ವ್ಯಾಪ್ತಿಯಲ್ಲಿ ವಸತಿ ಬಡಾವಣೆಗಳು ಹಾಗೂ ಪ್ರಮುಖ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸಲಿವೆ.

ಇದನ್ನೂ ಓದಿ: ಕ್ರೆಡಿಟ್ ಕಾರ್ಡ್ ಕಳೆದುಹೋಗಿ, ಬೇರೆ ಯಾರೋ ಅದನ್ನು ಬಳಸಿದರೆ, ನೀವೇ ಬಿಲ್ ಕಟ್ಟಬೇಕಾ? ಇಲ್ಲಿದೆ ಉತ್ತರ

ಐಟಿ-ಬಿಟಿ ಕಂಪನಿಗಳಿಗೆ ಹೆಚ್ವುವರ ಎಸಿ ಬಸ್ ಸೇವೆ

ಬೆಂಗಳೂರಿನ ಐಟಿ-ಬಿಟಿ ಕಂಪನಿಗಳ ಉದ್ಯೋಗಿಗಳ ಅನುಕೂಲಕ್ಕಾಗಿ ಬಿಎಂಟಿಸಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಹವಾನಿಯಂತ್ರಿತ ಬಸ್‌ಗಳನ್ನು ಒದಗಿಸಲಾಗುವುದು. ಈ ಕುರಿತು ಸಂಬಂಧಪಟ್ಟ ಕಂಪನಿಗಳೊಂದಿಗೆ ತಕ್ಷಣವೇ ಮಾತುಕತೆ ನಡೆಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ