AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗುವವರಿಗೆ ಗುಡ್ ನ್ಯೂಸ್; ಕಲ್ಯಾಣ ಮಂಟಪ ಮಾಲೀಕರಿಗಿಲ್ಲ ಖುಷಿ

ಕೇವಲ 40 ಜನರಿಗೆ ಅನುಮತಿ ಕೊಟ್ಟರೆ ಲಕ್ಷಾಂತರ ರೂಪಾಯಿ ಕೊಟ್ಟು ಚೌಟ್ರಿಗೆ ಯಾರು ಬರುತ್ತಾರೆ? ಈ ಮುಂಚೆ ರದ್ದಾಗಿರುವ ಮದುವೆಗಳ ಮುಂಗಡ ಹಣವನ್ನೇ ಇನ್ನೂ ಹಿಂದಿರುಗಿಸಿಲ್ಲ. ಹೀಗಾಗಿ ಕನಿಷ್ಟ ನೂರು ಜನರಿಗೆ ಅವಕಾಶ ಕೊಡಬೇಕು ಅಂತ ಮಾಲೀಕರು ಮನವಿ ಮಾಡುತ್ತಿದ್ದಾರೆ.

ಮದುವೆಯಾಗುವವರಿಗೆ ಗುಡ್ ನ್ಯೂಸ್; ಕಲ್ಯಾಣ ಮಂಟಪ ಮಾಲೀಕರಿಗಿಲ್ಲ ಖುಷಿ
ಕಲ್ಯಾಣ ಮಂಟಪ
Follow us
TV9 Web
| Updated By: sandhya thejappa

Updated on:Jun 28, 2021 | 1:07 PM

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಿಸಲು ಸರ್ಕಾರ ರಾಜ್ಯದ್ಯಂತ ಲಾಕ್​ಡೌನ್ ಜಾರಿಗೊಳಿಸಿತ್ತು. ಕೊರೊನಾ ನಿಯಂತ್ರಣಕ್ಕೆ ಬರುತ್ತಿದ್ದಂತೆ ಹಂತ ಹಂತವಾಗಿ ಅನ್​ಲಾಕ್​ ಪ್ರಕ್ರಿಯೆ ಆರಂಭವಾಗಿದೆ. ಸುಮಾರು ಎರಡು ಮೂರು ತಿಂಗಳಿನಿಂದ ಬಂದ್ ಆಗಿದ್ದ ಕಲ್ಯಾಣ ಮಂಟಪ ತೆರೆಯಲು ಸರ್ಕಾರ ಅನುಮತಿ ನೀಡಿದೆ. ಅನುಮತಿ ಸಿಕ್ಕ ಬೆನ್ನಲ್ಲೆ ರಾಜಧಾನಿ ಬೆಂಗಳೂರಿನಲ್ಲಿ ಕಲ್ಯಾಣ ಮಂಟಪಗಳ ಆರಂಭಕ್ಕೆ ಸಿದ್ಧತೆ ನಡೆಯುತ್ತಿದೆ. ಆದರೆ ಸೀಮಿತ ಜನರಿಗೆ ಅನುಮತಿ ನೀಡಿದ ಕಾರಣ ಮಾಲೀಕರಿಗೆ ಬೇಸರವಾಗಿದೆ.

ಕೇವಲ 40 ಜನರಿಗೆ ಅನುಮತಿ ಕೊಟ್ಟರೆ ಲಕ್ಷಾಂತರ ರೂಪಾಯಿ ಕೊಟ್ಟು ಚೌಟ್ರಿಗೆ ಯಾರು ಬರುತ್ತಾರೆ? ಈ ಮುಂಚೆ ರದ್ದಾಗಿರುವ ಮದುವೆಗಳ ಮುಂಗಡ ಹಣವನ್ನೇ ಇನ್ನೂ ಹಿಂದಿರುಗಿಸಿಲ್ಲ. ಹೀಗಾಗಿ ಕನಿಷ್ಟ ನೂರು ಜನರಿಗೆ ಅವಕಾಶ ಕೊಡಬೇಕು ಅಂತ ಮಾಲೀಕರು ಮನವಿ ಮಾಡುತ್ತಿದ್ದಾರೆ. ಮುಂದಿನ ತಿಂಗಳು ಆಷಾಢ ಹಿನ್ನೆಲೆ ಶುಭ ಸಮಾರಂಭಗಳು ನಡೆಯಲ್ಲ. ಇಂಥಹ ಸಮಯದಲ್ಲಿ ಸರ್ಕಾರ ಅನುಮತಿ ನೀಡಿರುವುದು ಪ್ರಯೋಜನವಿಲ್ಲ ಅಂತ ಕಲ್ಯಾಣ ಮಂಟಪಗಳ ಮಾಲೀಕರು ಬೇಸರ ವ್ಯಕ್ತಪಡಿಸಿದ್ದಾರೆ.

ಕೊರೊನಾ ಮೂರನೇ ಅಲೆ ಭೀತಿ ಹಿನ್ನೆಲೆ ಜನರು ಕಲ್ಯಾಣ ಮಂಟಪಕ್ಕೆ ಬರಲು ಹಿಂದೇಟು ಹಾಕುತ್ತಾರೆ. ಎಲ್ಲರೂ ಮನೆ ಮುಂದೆಯೇ ಮದುವೆ ಮಾಡಿಕೊಳ್ಳುತ್ತಿದ್ದಾರೆ. ಈಗಾಗಲೇ ಮಾಲೀಕರಿಗೆ ಸಂಕಷ್ಟ ಎದುರಾಗಿದೆ. ಹೀಗಿರುವಾಗ ಕೇವಲ 40 ಜನರಿಗೆ ಸೀಮಿತಗೊಳಿಸಿದರೆ ಯಾರು ಬರುತ್ತಾರೆ ಎಂದು ಮಂಟಪ ಮಾಲೀಕರು ಪ್ರಶ್ನಿಸಿದ್ದಾರೆ.

ಬಟ್ಟೆ ಅಂಗಡಿ ತೆರೆಯಲು ಅನುಮತಿಗೆ ಆಗ್ರಹ ಕೊರೊನಾ ನಿಯಮ ಪಾಲಿಸಿ ವ್ಯಾಪಾರ ಮಾಡುತ್ತೇವೆ‌. ಎಲ್ಲರಂತೆ ನಮಗೂ ಅಂಗಡಿ ತೆರೆಯಲು ಅವಕಾಶ ಕೊಡಿ ಎಂದು ಮೈಸೂರಿನಲ್ಲಿ ಕೆ.ಟಿ.ಸ್ಟ್ರೀಟ್ ಬಳಿ ಬಟ್ಟೆ ವ್ಯಾಪಾರಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ಎರಡು ತಿಂಗಳಿನಿಂದ ಅಂಗಡಿಗಳು ಬಂದ್ ಆಗಿವೆ. ಹೀಗಾಗಿ ಬಟ್ಟೆ ಅಂಗಡಿಗಳನ್ನು ತೆರೆಯಲು ಅನುಮತಿ ನೀಡುವಂತೆ ಜಿಲ್ಲಾಡಳಿತಕ್ಕೆ ವ್ಯಾಪಾರಿಗಳು ಒತ್ತಾಯಿಸಿದ್ದಾರೆ.

ಕೊರೊನಾ ಟೈಟ್ ರೂಲ್ಸ್​ನಿಂದ ವರ ಬೇಸರ, ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರಲು ಪರದಾಡುತ್ತಿದೆ ದಿಬ್ಬಣ

ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರಿಗಿಂತ ಶಂಕಿತರ ಸಾವೇ ಹೆಚ್ಚು

(Bengaluru Unlock Guidelines to reopen marriage halls with 50 attendees and no relief for owners)

Published On - 12:57 pm, Mon, 28 June 21

ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ