AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಇಂದು ಬೆಂಗಳೂರು ನಗರ ಜಿಲ್ಲೆಯಲ್ಲಿ ದೇಶದಲ್ಲೇ ಅತಿ ಹೆಚ್ಚು ಕೊವಿಡ್ ಲಸಿಕೆ ವಿತರಣೆ; ಒಟ್ಟಾರೆಯೂ ಬೆಂಗಳೂರೇ ಫಸ್ಟ್

ಬೆಂಗಳೂರು: ಇಂದು ವಿಶ್ವ ಯೋಗ ದಿನದಂದು ಹಮ್ಮಿಕೊಳ್ಳಲಾಗಿದ್ದ ಕೊವಿಡ್ ಲಸಿಕೆ ಅಭಿಯಾನದಲ್ಲಿ ಇಡೀ ದೇಶದಲ್ಲಿ ಬೆಂಗಳೂರು ನಗರ ಜಿಲ್ಲೆ ಮೊದಲ ಸ್ಥಾನ ಪಡೆದುಕೊಂಡಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು ಒಂದೇ ದಿನ 2,09,256 ಡೋಸ್ ಕೊವಿಡ್ ಲಸಿಕೆ ವಿತರಿಸಲಾಗಿದೆ. ಈ ಮೂಲದ ರಾಜ್ಯ ರಾಜಧಾನಿ ಬೆಂಗಳೂರು ದೇಶದಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಇಂದು ಕೊವಿಡ್ ಲಸಿಕೆ ಪಡೆದ ಜಿಲ್ಲೆಗಳಲ್ಲಿ ಮಧ್ಯ ಪ್ರದೇಶದ ಇಂದೋರ್ 2ನೇ ಸ್ಥಾನ ಪಡೆದಿದೆ. 2,01,339 ಡೋಸ್ ಲಸಿಕೆ ವಿತರಿಸಿ ಇಂದೋರ್ 2ನೇ ಸ್ಥಾನ […]

Bengaluru: ಇಂದು ಬೆಂಗಳೂರು ನಗರ ಜಿಲ್ಲೆಯಲ್ಲಿ ದೇಶದಲ್ಲೇ ಅತಿ ಹೆಚ್ಚು ಕೊವಿಡ್ ಲಸಿಕೆ ವಿತರಣೆ; ಒಟ್ಟಾರೆಯೂ ಬೆಂಗಳೂರೇ ಫಸ್ಟ್
ಕೊರೊನಾ ಲಸಿಕೆ (ಸಂಗ್ರಹ ಚಿತ್ರ)
TV9 Web
| Edited By: |

Updated on:Jun 22, 2021 | 7:52 AM

Share

ಬೆಂಗಳೂರು: ಇಂದು ವಿಶ್ವ ಯೋಗ ದಿನದಂದು ಹಮ್ಮಿಕೊಳ್ಳಲಾಗಿದ್ದ ಕೊವಿಡ್ ಲಸಿಕೆ ಅಭಿಯಾನದಲ್ಲಿ ಇಡೀ ದೇಶದಲ್ಲಿ ಬೆಂಗಳೂರು ನಗರ ಜಿಲ್ಲೆ ಮೊದಲ ಸ್ಥಾನ ಪಡೆದುಕೊಂಡಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು ಒಂದೇ ದಿನ 2,09,256 ಡೋಸ್ ಕೊವಿಡ್ ಲಸಿಕೆ ವಿತರಿಸಲಾಗಿದೆ. ಈ ಮೂಲದ ರಾಜ್ಯ ರಾಜಧಾನಿ ಬೆಂಗಳೂರು ದೇಶದಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಇಂದು ಕೊವಿಡ್ ಲಸಿಕೆ ಪಡೆದ ಜಿಲ್ಲೆಗಳಲ್ಲಿ ಮಧ್ಯ ಪ್ರದೇಶದ ಇಂದೋರ್ 2ನೇ ಸ್ಥಾನ ಪಡೆದಿದೆ. 2,01,339 ಡೋಸ್ ಲಸಿಕೆ ವಿತರಿಸಿ ಇಂದೋರ್ 2ನೇ ಸ್ಥಾನ ಗಿಟ್ಟಿಸಿಕೊಂಡಿದೆ.

ಒಟ್ಟಾರೆಯಾಗಿಯೂ ಕೊವಿಡ್ ಲಸಿಕೆ ವಿತರಣೆಯಲ್ಲಿ ದೇಶದಲ್ಲೇ ಬೆಂಗಳೂರು ನಗರ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಇಂದು ಸಂಜೆಯವರೆಗೆ ಬೆಂಗಳೂರು ನಗರ ಜಿಲ್ಲೆಯಲ್ಲಿ 54,88,684 ಡೋಸ್ ಲಸಿಕೆ ವಿತರಿಸಲಾಗಿದೆ. ದೇಶದ ಬೇರೆ ಯಾವ ಜಿಲ್ಲೆಯಲ್ಲೂ ಇಷ್ಟು ಸಂಖ್ಯೆಯ ಲಸಿಕೆ ವಿತರಣೆ ಮಾಡಲಾಗಿಲ್ಲ. ಅತ್ಯಂತ ತಳಮಟ್ಟದ ಯೋಜನೆಯಿಂದ ಗುರಿಯನ್ನೂ ಮೀರಿ ಲಸಿಕೆ ವಿತರಣೆ ನಡೆಸಲು ಸಾಧ್ಯವಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ದೇಶದಲ್ಲಿ ಇಂದು ಸಂಜೆ 6 ಗಂಟೆ ವೇಳೆಗೆ ದೇಶದಲ್ಲಿ 80 .96ಲಕ್ಷ ಡೋಸ್ ಕೊರೊನಾ ಲಸಿಕೆ ವಿತರಿಸಲಾಗಿದೆ.. ಕರ್ನಾಟಕದಲ್ಲಿ ಇಂದು 7 ಲಕ್ಷ ಡೋಸ್ ಲಸಿಕೆ ನೀಡುವ ಗುರಿ ಇತ್ತು. ಆದರೆ ಈ ಗುರಿಯನ್ನು ಮೀರಿ ರಾಜ್ಯದಲ್ಲಿ10.36  ಲಕ್ಷ ಡೋಸ್  ಲಸಿಕೆ ವಿತರಿಸಲಾಗಿದೆ. ಮಧ್ಯಪ್ರದೇಶದಲ್ಲಿ ಇಂದು 12 ಲಕ್ಷ ಡೋಸ್​ ಲಸಿಕೆ ವಿತರಿಸಲಾಗಿದ್ದು, ಉತ್ತರ ಪ್ರದೇಶದಲ್ಲಿಂದು 6.31 ಲಕ್ಷ ಡೋಸ್​ ಲಸಿಕೆ ವಿತರಿಸಲಾಗಿದೆ.

ಕರ್ನಾಟಕದಲ್ಲಿ ಇಂದು ವಿತರಿಸಿರುವ ಕೊವಿಡ್ ಲಸಿಕೆಯ ಅಂಕಿ ಅಂಶಗಳ ಪ್ರಕಾರ ಕರ್ನಾಟಕ ದೇಶದಲ್ಲಿ 2ನೇ ಸ್ಥಾನ ಪಡೆದಿದೆ. ಮಧ್ಯ ಪ್ರದೇಶ ಮೊದಲ ಸ್ಥಾನ ಪಡೆದಿದೆ. ಆದರೆ ಜಿಲ್ಲೆಗಳ ಪಟ್ಟಿಯಲ್ಲಿ ಬೆಂಗಳೂರು ನಗರವೇ ಮೊದಲ ಸ್ಥಾನದಲ್ಲಿದೆ.

ದೇಶದಲ್ಲಿ ಇಂದು ಒಂದೇ ದಿನ 50 ಲಕ್ಷ ಡೋಸ್ ಲಸಿಕೆ ನೀಡಿಕೆಯ ಗುರಿ ಇತ್ತು. ಆದರೆ ಸಂಜೆ 5 ರವರೆಗೆ 69.25 ಲಕ್ಷ ಡೋಸ್ ಲಸಿಕೆ ನೀಡಿಕೆ ಹೊಸ ದಾಖಲೆ ಬರೆಯಲಾಗಿದೆ. ಏಪ್ರಿಲ್ ಪ್ರಾರಂಭದಲ್ಲಿ ಒಂದೇ ದಿನ 43 ಲಕ್ಷ ಡೋಸ್ ಲಸಿಕೆ ನೀಡಿದ್ದು ಇದುವರೆಗಿನ ಗರಿಷ್ಠ ದಾಖಲೆ ಆಗಿತ್ತು. ಆದರೆ ಇಂದು ಒಂದೇ ದಿನ 70 ಲಕ್ಷ ಡೋಸ್ ವರೆಗೂ ಲಸಿಕೆ ವಿರಿಸಲಾಗಿದೆ. ಕೇಂದ್ರ ಆರೋಗ್ಯ ಇಲಾಖೆ ಆಗಸ್ಟ್ ತಿಂಗಳಿನಿಂದ ನಿತ್ಯ ಒಂದು ಕೋಟಿ ಡೋಸ್ ಲಸಿಕೆ ನೀಡಿಕೆ ಗುರಿ ಹಾಕಿಕೊಂಡಿದೆ.

ಇದನ್ನೂ ಓದಿ: School Reopening: ಕೊವಿಡ್ 3ನೇ ಅಲೆ ಕುರಿತು ಡಾ.ದೇವಿಪ್ರಸಾದ್ ಶೆಟ್ಟಿ ನಾಳೆ ನೀಡುವ ವರದಿ ಪರಿಶೀಲಿಸಿ ಶಾಲೆ ಆರಂಭದ ನಿರ್ಧಾರ: ಸಚಿವ ಸುರೇಶ್ ಕುಮಾರ್

Coronavirus cases in India: ದೇಶದಲ್ಲಿ 53,256 ಹೊಸ ಕೊವಿಡ್ ಪ್ರಕರಣ ಪತ್ತೆ, 1422 ಮಂದಿ ಸಾವು

(Bengaluru Urban district first in Covid Vaccine distribution today on vaccination drive )

Published On - 9:09 pm, Mon, 21 June 21

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ