AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Update: ಮಾರ್ಚ್​ 28ರ ಬೆಂಗಳೂರು ತಾಪಮಾನ 7 ವರ್ಷಗಳಲ್ಲೇ ಗರಿಷ್ಠ

ರಾಜ್ಯದ ರಾಯಚೂರು ಜಿಲ್ಲೆಯ 10 ಸ್ಥಳಗಳು, ಕಲಬುರಗಿ ಜಿಲ್ಲೆಯಲ್ಲಿ 9 ಸ್ಥಳಗಳು, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ತಲಾ 4 ಸ್ಥಳಗಳು, ಬಳ್ಳಾರಿ ಜಿಲ್ಲೆಯಲ್ಲಿ 3 ಸ್ಥಳಗಳು, ವಿಜಯಪುರ ಜಿಲ್ಲೆಯಲ್ಲಿ 2 ಸ್ಥಳಗಳು, ಬೀದರ್, ಗದಗ, ದಾವಣಗೆರೆ, ತುಮಕೂರು ಮತ್ತು ಉತ್ತರ ಕನ್ನಡ ಜಿಲ್ಲೆಯ ತಲಾ 1 ಸ್ಥಳಗಳಲ್ಲಿ ಮಾರ್ಚ್​ 28 ರಂದು ಗರಿಷ್ಠ 41 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

Karnataka Weather Update: ಮಾರ್ಚ್​ 28ರ ಬೆಂಗಳೂರು ತಾಪಮಾನ 7 ವರ್ಷಗಳಲ್ಲೇ ಗರಿಷ್ಠ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Mar 29, 2024 | 7:58 AM

Share

ಬೆಂಗಳೂರು, ಮಾರ್ಚ್​ 29: ಬೇಸಿಗೆ (Summer) ಕಾಲ ಆರಂಭವಾಗಿದ್ದು, ರಾಜ್ಯದಲ್ಲಿ ತಾಪಮಾನ (Karnataka Temperature) ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಕಳೆದ ಏಳು ವರ್ಷಕ್ಕೆ ಹೋಲಿಕೆ ಮಾಡಿದರೆ ಬೆಂಗಳೂರು (Bengaluru) ನಗರದಲ್ಲಿ ಈ ವರ್ಷ (2024 ಮಾರ್ಚ್​ 28ರ ವರೆಗೆ) ಅತ್ಯಅಧಿಕ ತಾಪಮಾನ ದಾಖಲಾಗಿದೆ. ಗುರುವಾರ ಬೆಂಗಳೂರಿನಲ್ಲಿ 37.9 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿತ್ತು. ಮುಂದಿನ 2 ದಿನಗಳಲ್ಲಿ ರಾಜ್ಯದ ಉತ್ತರ ಒಳನಾಡಿನ (North Karnataka) ಕಲಬುರಗಿ, ಬಾಗಲಕೋಟೆ, ಬೀದರ್ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸುವ ಸಾಧ್ಯತೆ ಇದ್ದು. ಮುಂದಿನ ಐದು ದಿನಗಳಲ್ಲಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆಯಿದೆ.

ಕಾಡ್ಗಿಚ್ಚು ಸಾಧ್ಯತೆ

ತಾಪಮಾನ ಹೆಚ್ಚಾದಂತೆ ಕಾಡ್ಗಿಚ್ಚು ಉಂಟಾಗುವ ಸಾಧ್ಯತೆ ಇರುತ್ತದೆ. ಮುಂದಿನ 7 ದಿನಗಳಲ್ಲಿ ಚನ್ನಗರಿ, ವಾಡಿ, ಶಹಾಪುರ ಮತ್ತು ಗುರುಮಿಟ್ಕಲ್​ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ತೀವ್ರ ಕಾಡ್ಗಿಚ್ಚು ಸಂಭವಿಸುವ ಸಾಧ್ಯತೆಗಳಿದ್ದು, ಜನರು ಎಚ್ಚರದಿಂದ ಇರಬೇಕು ಎಂದು ಅರಣ್ಯ ಇಲಾಖೆ ತಿಳಿಸಿದೆ.

ರಾಯಚೂರಿನಲ್ಲಿ ಅತ್ಯಧಿಕ ತಾಪಮಾನ

ರಾಯಚೂರು ಜಿಲ್ಲೆಯ ಹಡಗನಹಾಳ್ ಹೋಬಳಿಯಲ್ಲಿ ಅತ್ಯಧಿಕ ಗುರುವಾರ (ಮಾ.28) ರಂದು 42.6 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ. ಕಲಬುರಗಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ವಿಜಯಪುರ, ಬೀದ‌ರ್, ಗದಗ, ದಾವಣಗೆರೆ, ತುಮಕೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ 41 ರಿಂದ 42.6 ಡಿಗ್ರಿ ಸೆಲ್ಸಿಯಸ್ ನಡುವೆ ಗರಿಷ್ಠ ತಾಪಮಾನ ದಾಖಲಾಗಿದೆ.

ಇದನ್ನೂ ಓದಿ: ಹೆಚ್ಚಲಿದೆ ತಾಪಮಾನ, ಮಾರ್ಚ್- ಮೇ ತಿಂಗಳಿನಿಂದಲೇ ಜಾಸ್ತಿಯಾಗಲಿದೆ ಬಿಸಿಗಾಳಿ

ರಾಯಚೂರು ಜಿಲ್ಲೆಯ 10 ಸ್ಥಳಗಳು, ಕಲಬುರಗಿ ಜಿಲ್ಲೆಯಲ್ಲಿ 9 ಸ್ಥಳಗಳು, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ತಲಾ 4 ಸ್ಥಳಗಳು, ಬಳ್ಳಾರಿ ಜಿಲ್ಲೆಯಲ್ಲಿ 3 ಸ್ಥಳಗಳು, ವಿಜಯಪುರ ಜಿಲ್ಲೆಯಲ್ಲಿ 2 ಸ್ಥಳಗಳು, ಬೀದರ್, ಗದಗ, ದಾವಣಗೆರೆ, ತುಮಕೂರು ಮತ್ತು ಉತ್ತರ ಕನ್ನಡ ಜಿಲ್ಲೆಯ ತಲಾ 1 ಸ್ಥಳಗಳಲ್ಲಿ, ಗರಿಷ್ಠ 41 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವಾಡಿಕೆಗಿಂತ 1.6 ರಿಂದ 3 ಡಿಗ್ರಿ ಸೆಲ್ಸಿಯಸ್​ ನಷ್ಟು ಅಧಿಕ ತಾಪಮಾನವು ದಾಖಲಾಗಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯವಾಗಿದೆ. ಮುಂದಿನ 5 ದಿನಗಳ ತಾಪಮಾನದ ಮುನ್ಸೂಚನೆ

2024 ರ ಮಾರ್ಚ್ 28 ರಿಂದ 29 ರವರೆಗೆ ರಾಜ್ಯದ ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಉಷ್ಣ ಅಲೆ ಬೀಸುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ನಾಗರ ಪಂಚಮಿಯಂದು ದುಂಡಯ್ಯ ಕಾರ್ಣಿಕ ನುಡಿ
ನಾಗರ ಪಂಚಮಿಯಂದು ದುಂಡಯ್ಯ ಕಾರ್ಣಿಕ ನುಡಿ
ವಿನಯ್​ನೇ ನಾಮಿನೇಟ್ ಮಾಡಿದ ಸ್ಪರ್ಧಿ; ಸ್ಟಾರ್ಟಪ್ ಕಾರಣ ನೀಡಿದ ಕಂಟೆಸ್ಟಂಟ್
ವಿನಯ್​ನೇ ನಾಮಿನೇಟ್ ಮಾಡಿದ ಸ್ಪರ್ಧಿ; ಸ್ಟಾರ್ಟಪ್ ಕಾರಣ ನೀಡಿದ ಕಂಟೆಸ್ಟಂಟ್
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ವಿಶ್
‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ವಿಶ್
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ