AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Update: ಮಾರ್ಚ್​ 28ರ ಬೆಂಗಳೂರು ತಾಪಮಾನ 7 ವರ್ಷಗಳಲ್ಲೇ ಗರಿಷ್ಠ

ರಾಜ್ಯದ ರಾಯಚೂರು ಜಿಲ್ಲೆಯ 10 ಸ್ಥಳಗಳು, ಕಲಬುರಗಿ ಜಿಲ್ಲೆಯಲ್ಲಿ 9 ಸ್ಥಳಗಳು, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ತಲಾ 4 ಸ್ಥಳಗಳು, ಬಳ್ಳಾರಿ ಜಿಲ್ಲೆಯಲ್ಲಿ 3 ಸ್ಥಳಗಳು, ವಿಜಯಪುರ ಜಿಲ್ಲೆಯಲ್ಲಿ 2 ಸ್ಥಳಗಳು, ಬೀದರ್, ಗದಗ, ದಾವಣಗೆರೆ, ತುಮಕೂರು ಮತ್ತು ಉತ್ತರ ಕನ್ನಡ ಜಿಲ್ಲೆಯ ತಲಾ 1 ಸ್ಥಳಗಳಲ್ಲಿ ಮಾರ್ಚ್​ 28 ರಂದು ಗರಿಷ್ಠ 41 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

Karnataka Weather Update: ಮಾರ್ಚ್​ 28ರ ಬೆಂಗಳೂರು ತಾಪಮಾನ 7 ವರ್ಷಗಳಲ್ಲೇ ಗರಿಷ್ಠ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on: Mar 29, 2024 | 7:58 AM

ಬೆಂಗಳೂರು, ಮಾರ್ಚ್​ 29: ಬೇಸಿಗೆ (Summer) ಕಾಲ ಆರಂಭವಾಗಿದ್ದು, ರಾಜ್ಯದಲ್ಲಿ ತಾಪಮಾನ (Karnataka Temperature) ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಕಳೆದ ಏಳು ವರ್ಷಕ್ಕೆ ಹೋಲಿಕೆ ಮಾಡಿದರೆ ಬೆಂಗಳೂರು (Bengaluru) ನಗರದಲ್ಲಿ ಈ ವರ್ಷ (2024 ಮಾರ್ಚ್​ 28ರ ವರೆಗೆ) ಅತ್ಯಅಧಿಕ ತಾಪಮಾನ ದಾಖಲಾಗಿದೆ. ಗುರುವಾರ ಬೆಂಗಳೂರಿನಲ್ಲಿ 37.9 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿತ್ತು. ಮುಂದಿನ 2 ದಿನಗಳಲ್ಲಿ ರಾಜ್ಯದ ಉತ್ತರ ಒಳನಾಡಿನ (North Karnataka) ಕಲಬುರಗಿ, ಬಾಗಲಕೋಟೆ, ಬೀದರ್ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸುವ ಸಾಧ್ಯತೆ ಇದ್ದು. ಮುಂದಿನ ಐದು ದಿನಗಳಲ್ಲಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆಯಿದೆ.

ಕಾಡ್ಗಿಚ್ಚು ಸಾಧ್ಯತೆ

ತಾಪಮಾನ ಹೆಚ್ಚಾದಂತೆ ಕಾಡ್ಗಿಚ್ಚು ಉಂಟಾಗುವ ಸಾಧ್ಯತೆ ಇರುತ್ತದೆ. ಮುಂದಿನ 7 ದಿನಗಳಲ್ಲಿ ಚನ್ನಗರಿ, ವಾಡಿ, ಶಹಾಪುರ ಮತ್ತು ಗುರುಮಿಟ್ಕಲ್​ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ತೀವ್ರ ಕಾಡ್ಗಿಚ್ಚು ಸಂಭವಿಸುವ ಸಾಧ್ಯತೆಗಳಿದ್ದು, ಜನರು ಎಚ್ಚರದಿಂದ ಇರಬೇಕು ಎಂದು ಅರಣ್ಯ ಇಲಾಖೆ ತಿಳಿಸಿದೆ.

ರಾಯಚೂರಿನಲ್ಲಿ ಅತ್ಯಧಿಕ ತಾಪಮಾನ

ರಾಯಚೂರು ಜಿಲ್ಲೆಯ ಹಡಗನಹಾಳ್ ಹೋಬಳಿಯಲ್ಲಿ ಅತ್ಯಧಿಕ ಗುರುವಾರ (ಮಾ.28) ರಂದು 42.6 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ. ಕಲಬುರಗಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ವಿಜಯಪುರ, ಬೀದ‌ರ್, ಗದಗ, ದಾವಣಗೆರೆ, ತುಮಕೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ 41 ರಿಂದ 42.6 ಡಿಗ್ರಿ ಸೆಲ್ಸಿಯಸ್ ನಡುವೆ ಗರಿಷ್ಠ ತಾಪಮಾನ ದಾಖಲಾಗಿದೆ.

ಇದನ್ನೂ ಓದಿ: ಹೆಚ್ಚಲಿದೆ ತಾಪಮಾನ, ಮಾರ್ಚ್- ಮೇ ತಿಂಗಳಿನಿಂದಲೇ ಜಾಸ್ತಿಯಾಗಲಿದೆ ಬಿಸಿಗಾಳಿ

ರಾಯಚೂರು ಜಿಲ್ಲೆಯ 10 ಸ್ಥಳಗಳು, ಕಲಬುರಗಿ ಜಿಲ್ಲೆಯಲ್ಲಿ 9 ಸ್ಥಳಗಳು, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ತಲಾ 4 ಸ್ಥಳಗಳು, ಬಳ್ಳಾರಿ ಜಿಲ್ಲೆಯಲ್ಲಿ 3 ಸ್ಥಳಗಳು, ವಿಜಯಪುರ ಜಿಲ್ಲೆಯಲ್ಲಿ 2 ಸ್ಥಳಗಳು, ಬೀದರ್, ಗದಗ, ದಾವಣಗೆರೆ, ತುಮಕೂರು ಮತ್ತು ಉತ್ತರ ಕನ್ನಡ ಜಿಲ್ಲೆಯ ತಲಾ 1 ಸ್ಥಳಗಳಲ್ಲಿ, ಗರಿಷ್ಠ 41 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವಾಡಿಕೆಗಿಂತ 1.6 ರಿಂದ 3 ಡಿಗ್ರಿ ಸೆಲ್ಸಿಯಸ್​ ನಷ್ಟು ಅಧಿಕ ತಾಪಮಾನವು ದಾಖಲಾಗಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯವಾಗಿದೆ. ಮುಂದಿನ 5 ದಿನಗಳ ತಾಪಮಾನದ ಮುನ್ಸೂಚನೆ

2024 ರ ಮಾರ್ಚ್ 28 ರಿಂದ 29 ರವರೆಗೆ ರಾಜ್ಯದ ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಉಷ್ಣ ಅಲೆ ಬೀಸುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ