Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಅತಿ ಹೆಚ್ಚು ಸಕ್ರಿಯ ಕೊರೊನಾ ಪ್ರಕರಣಗಳನ್ನು ಹೊಂದಿದ ಜಿಲ್ಲೆ ಬೆಂಗಳೂರು ನಗರ

ಬೆಂಗಳೂರಿನಲ್ಲಿ ನಿನ್ನೆ 16,662 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 1,49,624ಕ್ಕೆ ತಲುಪಿದೆ. ಬೆಂಗಳೂರಿನ ನಂತರ ಅತಿ ಹೆಚ್ಚು ಸಕ್ರಿಯ ಪ್ರಕರಣಗಳಿರುವ ಜಿಲ್ಲೆ ಪುಣೆ ಆಗಿದ್ದು 1.1 ಲಕ್ಷ ಪ್ರಕರಣಗಳು ಕಾಣಿಸಿಕೊಂಡಿವೆ.

ದೇಶದಲ್ಲಿ ಅತಿ ಹೆಚ್ಚು ಸಕ್ರಿಯ ಕೊರೊನಾ ಪ್ರಕರಣಗಳನ್ನು ಹೊಂದಿದ ಜಿಲ್ಲೆ ಬೆಂಗಳೂರು ನಗರ
ಪ್ರಾತಿನಿಧಿಕ ಚಿತ್ರ
Follow us
Skanda
| Updated By: preethi shettigar

Updated on: Apr 24, 2021 | 9:47 AM

ಬೆಂಗಳೂರು: ಭಾರತದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ನಿರೀಕ್ಷೆಗೂ ಮೀರಿ ಹಬ್ಬುತ್ತಿದ್ದು, ಕಳೆದ ಒಂದು ದಿನದಲ್ಲಿ 3.46 ಲಕ್ಷ ಹೊಸ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಮೂರು ದಿನಗಳ ಅವಧಿಯಲ್ಲಿ ದಾಖಲಾದ ಒಟ್ಟು ಸೋಂಕಿತರ ಪ್ರಮಾಣ 9.94ಲಕ್ಷಕ್ಕೇರಿದ್ದು 10 ಲಕ್ಷದತ್ತ ಸಾಗಿದೆ. ಅಲ್ಲದೇ ಶುಕ್ರವಾರ (ಏಪ್ರಿಲ್ 24) ಸಹ ದೇಶದಲ್ಲಿ 2,000ಕ್ಕೂ ಅಧಿಕ ಮಂದಿ ಸೋಂಕಿತರು ಸಾವಿಗೀಡಾಗಿದ್ದು, ಸತತ ನಾಲ್ಕನೇ ದಿನ ಸೋಂಕಿತರ ಪ್ರಮಾಣ 2 ಸಾವಿರದ ಗಡಿ ದಾಟಿದೆ. ದೇಶದಲ್ಲಿ ಅತಿ ಹೆಚ್ಚು ಸಕ್ರಿಯ ಸೋಂಕಿತರನ್ನು ಹೊಂದಿದ ಜಿಲ್ಲೆಯಾಗಿ ಬೆಂಗಳೂರು ನಗರ ಗುರುತಿಸಿಕೊಂಡಿದ್ದು, ನಿನ್ನೆ (ಏಪ್ರಿಲ್ 24) 1 ಲಕ್ಷದ 49 ಸಾವಿರಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳು ನಗರದಲ್ಲಿರುವುದಾಗಿ ಅಂಕಿ ಅಂಶಗಳು ತಿಳಿಸಿವೆ.

ಬೆಂಗಳೂರಿನಲ್ಲಿ ನಿನ್ನೆ 16,662 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 1,49,624ಕ್ಕೆ ತಲುಪಿದೆ. ಬೆಂಗಳೂರಿನ ನಂತರ ಅತಿ ಹೆಚ್ಚು ಸಕ್ರಿಯ ಪ್ರಕರಣಗಳಿರುವ ಜಿಲ್ಲೆ ಪುಣೆ ಆಗಿದ್ದು 1.1 ಲಕ್ಷ ಪ್ರಕರಣಗಳು ಕಾಣಿಸಿಕೊಂಡಿವೆ. ಅಲ್ಲದೇ ಬೆಂಗಳೂರು, ಪುಣೆ ಹೊರತುಪಡಿಸಿದರೆ ಭಾರತದ ಮಿಕ್ಕೆಲ್ಲಾ ಜಿಲ್ಲೆಗಳು 1 ಲಕ್ಷಕ್ಕೂ ಕಡಿಮೆ ಸಕ್ರಿಯ ಪ್ರಕರಣಗಳನ್ನು ಹೊಂದಿವೆ. ದೆಹಲಿ 1 ಲಕ್ಷದ ಸಮೀಪದಲ್ಲಿದ್ದು, ಮುಂಬೈ 81,174 ಸಕ್ರಿಯ ಪ್ರಕರಣಗಳನ್ನು ಹೊಂದಿದೆ.

ಕರ್ನಾಟಕದ ಶೇ.70ರಷ್ಟು ಕೊರೊನಾ ಪ್ರಕರಣಗಳು ಬೆಂಗಳೂರಿನಲ್ಲಿ ದಾಖಲಾಗುತ್ತಿದ್ದು, ನಗರದ ಆರೋಗ್ಯ ವ್ಯವಸ್ಥೆಗೆ ಸವಾಲಾಗಿ ಪರಿಣಮಿಸಿದೆ. ಬೆಂಗಳೂರಿನಲ್ಲಿ ಪರಿಸ್ಥಿತಿ ಹೀಗೆಯೇ ಮುಂದುವರೆದಲ್ಲಿ ಮೇ.1ರ ಒಳಗೆ ದೈನಂದಿನ ಕೊರೊನಾ ಪ್ರಕರಣಗಳ ಸಂಖ್ಯೆ 25 ಸಾವಿರಕ್ಕೆ ತಲುಪಲಿದೆ. ಆ ಪೈಕಿ ಶೇ.5ರಷ್ಟು ಜನರಿಗೆ ತುರ್ತು ಸೇವೆ ಒದಗಿಸಬೇಕೆಂದರೂ ಪರಿಸ್ಥಿತಿ ಕಠಿಣವಾಗಲಿದೆ ಎಂದು ತಾಂತ್ರಿಕ ಸಲಹಾ ಸಮಿತಿ ಸದಸ್ಯ ಡಾ.ಗಿರಿಧರ್ ಬಾಬು ಎಚ್ಚರಿಕೆ ನೀಡಿದ್ದಾರೆ.

ಪರಿಸ್ಥಿತಿ ನಿಯಂತ್ರಣಕ್ಕಾಗಿ ವೀಕೆಂಡ್​ ಕರ್ಫ್ಯೂ ಹಾಗೂ ನೈಟ್​ ಕರ್ಫ್ಯೂ ಮೊರೆ ಹೋಗಲಾಗಿದ್ದು, ಸೋಂಕು ಹಬ್ಬದಂತೆ ತಡೆಗಟ್ಟಲು ಜನರು ಸಹಕರಿಸಲೇಬೇಕಿದೆ. ಎರಡನೇ ಅಲೆಯ ಸೋಂಕು ಅತಿವೇಗವಾಗಿ ವ್ಯಾಪಿಸುತ್ತಿರುವುದರಿಂದ ಜನರು ಮನೆಯಲ್ಲೇ ಇರುವ ಮೂಲಕ ತಮ್ಮ ಹಾಗೂ ತಮ್ಮ ಕುಟುಂಬದವರ ಆರೋಗ್ಯವನ್ನು ರಕ್ಷಿಸಿಕೊಳ್ಳಬೇಕಿರುವುದು ಸದ್ಯಕ್ಕಿರುವ ಅತ್ಯುತ್ತಮ ಮಾರ್ಗ.

ಇದನ್ನೂ ಓದಿ: ಸೋಂಕು ತಗುಲಿಸಿಕೊಳ್ಳಬೇಡಿ; ಚಿಕಿತ್ಸೆಗಿಂತಲೂ ಮುಂಜಾಗ್ರತೆಯೇ ಕೊರೊನಾಗೆ ಸೂಕ್ತ ಮದ್ದು 

Krishna Ajay Rao : ದಯವಿಟ್ಟು ಈ ವಿಡಿಯೋ ನೋಡಿ ಎಂದು ಕೊರೊನಾ ಜಾಗೃತಿ ಮೂಡಿಸಿದ ನಟ ಕೃಷ್ಣ ಅಜಯ್‌ ರಾವ್

(Bengaluru urban is the top district with highest active Corona cases in India)

ಸರ್ಕಾರೀ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನ: ಸಚಿವ
ಸರ್ಕಾರೀ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನ: ಸಚಿವ
IPL 2025: ಗೆಲುವಿನ ಬಳಿಕ RCB ಸಂಭ್ರಮ ಹೇಗಿತ್ತು? ಇಲ್ಲಿದೆ ವಿಡಿಯೋ
IPL 2025: ಗೆಲುವಿನ ಬಳಿಕ RCB ಸಂಭ್ರಮ ಹೇಗಿತ್ತು? ಇಲ್ಲಿದೆ ವಿಡಿಯೋ
ಅಂಗಡಿಗಳಲ್ಲಿ ನೀರಿನ ಬಾಟಲ್​​​​ ಖರೀದಿಸುವ ಮುನ್ನ ಎಚ್ಚರ...!
ಅಂಗಡಿಗಳಲ್ಲಿ ನೀರಿನ ಬಾಟಲ್​​​​ ಖರೀದಿಸುವ ಮುನ್ನ ಎಚ್ಚರ...!
Live: ದ್ವಿತೀಯ ಪಿಯುಸಿ ಫಲಿತಾಂಶ 2025 ಲೈವ್​ ವಿಡಿಯೋ
Live: ದ್ವಿತೀಯ ಪಿಯುಸಿ ಫಲಿತಾಂಶ 2025 ಲೈವ್​ ವಿಡಿಯೋ
ಸಿಲಿಂಡರ್ ಬೆಲೆ ಹೆಚ್ಚಾಗಿರುವುದನ್ನು ಸರ್ಕಾರ ಗುರಾಣಿಯಾಗಿ ಬಳಸಬಾರದು: ರವಿ
ಸಿಲಿಂಡರ್ ಬೆಲೆ ಹೆಚ್ಚಾಗಿರುವುದನ್ನು ಸರ್ಕಾರ ಗುರಾಣಿಯಾಗಿ ಬಳಸಬಾರದು: ರವಿ
ಕೋರ್ಟ್ ಮುಂದೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪವಿತ್ರಾ ಗೌಡ
ಕೋರ್ಟ್ ಮುಂದೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪವಿತ್ರಾ ಗೌಡ
ದೊಡ್ಡ ನಗರದಲ್ಲಿ ಇಂತಹ ಘಟನೆಗಳು ನಡೆಯುತ್ತವೆ ಹೇಳಿಕೆಗೆ ಪರಮೇಶ್ವರ್ ವಿಷಾದ
ದೊಡ್ಡ ನಗರದಲ್ಲಿ ಇಂತಹ ಘಟನೆಗಳು ನಡೆಯುತ್ತವೆ ಹೇಳಿಕೆಗೆ ಪರಮೇಶ್ವರ್ ವಿಷಾದ
ಹಾಸನಕ್ಕೆ ನಾನ್ಯಾವತ್ತೂ ಕೃಷಿ ವಿಶ್ವವಿದ್ಯಾಲಯ ಕೇಳಿಲ್ಲ: ರೇವಣ್ಣ
ಹಾಸನಕ್ಕೆ ನಾನ್ಯಾವತ್ತೂ ಕೃಷಿ ವಿಶ್ವವಿದ್ಯಾಲಯ ಕೇಳಿಲ್ಲ: ರೇವಣ್ಣ
ಕಲ್ಲೆಸದವನನ್ನು ವಶಕ್ಕೆ ಪಡೆದು ಅಹಿತಕರ ಘಟನೆಗಳಿಗೆ ಅವಕಾಶವೀಯದ ಪೊಲೀಸ್
ಕಲ್ಲೆಸದವನನ್ನು ವಶಕ್ಕೆ ಪಡೆದು ಅಹಿತಕರ ಘಟನೆಗಳಿಗೆ ಅವಕಾಶವೀಯದ ಪೊಲೀಸ್
ನನ್ನ ಸುದೀಪ್ ಮಧ್ಯೆ ಮನಸ್ತಾಪ ಆಗಿರಬಹುದು, ವೈರತ್ವ ಬೆಳೆದಿಲ್ಲ; ಶಿವಣ್ಣ
ನನ್ನ ಸುದೀಪ್ ಮಧ್ಯೆ ಮನಸ್ತಾಪ ಆಗಿರಬಹುದು, ವೈರತ್ವ ಬೆಳೆದಿಲ್ಲ; ಶಿವಣ್ಣ