ದೇಶದಲ್ಲಿ ಅತಿ ಹೆಚ್ಚು ಸಕ್ರಿಯ ಕೊರೊನಾ ಪ್ರಕರಣಗಳನ್ನು ಹೊಂದಿದ ಜಿಲ್ಲೆ ಬೆಂಗಳೂರು ನಗರ

ಬೆಂಗಳೂರಿನಲ್ಲಿ ನಿನ್ನೆ 16,662 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 1,49,624ಕ್ಕೆ ತಲುಪಿದೆ. ಬೆಂಗಳೂರಿನ ನಂತರ ಅತಿ ಹೆಚ್ಚು ಸಕ್ರಿಯ ಪ್ರಕರಣಗಳಿರುವ ಜಿಲ್ಲೆ ಪುಣೆ ಆಗಿದ್ದು 1.1 ಲಕ್ಷ ಪ್ರಕರಣಗಳು ಕಾಣಿಸಿಕೊಂಡಿವೆ.

ದೇಶದಲ್ಲಿ ಅತಿ ಹೆಚ್ಚು ಸಕ್ರಿಯ ಕೊರೊನಾ ಪ್ರಕರಣಗಳನ್ನು ಹೊಂದಿದ ಜಿಲ್ಲೆ ಬೆಂಗಳೂರು ನಗರ
ಪ್ರಾತಿನಿಧಿಕ ಚಿತ್ರ
Follow us
| Updated By: preethi shettigar

Updated on: Apr 24, 2021 | 9:47 AM

ಬೆಂಗಳೂರು: ಭಾರತದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ನಿರೀಕ್ಷೆಗೂ ಮೀರಿ ಹಬ್ಬುತ್ತಿದ್ದು, ಕಳೆದ ಒಂದು ದಿನದಲ್ಲಿ 3.46 ಲಕ್ಷ ಹೊಸ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಮೂರು ದಿನಗಳ ಅವಧಿಯಲ್ಲಿ ದಾಖಲಾದ ಒಟ್ಟು ಸೋಂಕಿತರ ಪ್ರಮಾಣ 9.94ಲಕ್ಷಕ್ಕೇರಿದ್ದು 10 ಲಕ್ಷದತ್ತ ಸಾಗಿದೆ. ಅಲ್ಲದೇ ಶುಕ್ರವಾರ (ಏಪ್ರಿಲ್ 24) ಸಹ ದೇಶದಲ್ಲಿ 2,000ಕ್ಕೂ ಅಧಿಕ ಮಂದಿ ಸೋಂಕಿತರು ಸಾವಿಗೀಡಾಗಿದ್ದು, ಸತತ ನಾಲ್ಕನೇ ದಿನ ಸೋಂಕಿತರ ಪ್ರಮಾಣ 2 ಸಾವಿರದ ಗಡಿ ದಾಟಿದೆ. ದೇಶದಲ್ಲಿ ಅತಿ ಹೆಚ್ಚು ಸಕ್ರಿಯ ಸೋಂಕಿತರನ್ನು ಹೊಂದಿದ ಜಿಲ್ಲೆಯಾಗಿ ಬೆಂಗಳೂರು ನಗರ ಗುರುತಿಸಿಕೊಂಡಿದ್ದು, ನಿನ್ನೆ (ಏಪ್ರಿಲ್ 24) 1 ಲಕ್ಷದ 49 ಸಾವಿರಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳು ನಗರದಲ್ಲಿರುವುದಾಗಿ ಅಂಕಿ ಅಂಶಗಳು ತಿಳಿಸಿವೆ.

ಬೆಂಗಳೂರಿನಲ್ಲಿ ನಿನ್ನೆ 16,662 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 1,49,624ಕ್ಕೆ ತಲುಪಿದೆ. ಬೆಂಗಳೂರಿನ ನಂತರ ಅತಿ ಹೆಚ್ಚು ಸಕ್ರಿಯ ಪ್ರಕರಣಗಳಿರುವ ಜಿಲ್ಲೆ ಪುಣೆ ಆಗಿದ್ದು 1.1 ಲಕ್ಷ ಪ್ರಕರಣಗಳು ಕಾಣಿಸಿಕೊಂಡಿವೆ. ಅಲ್ಲದೇ ಬೆಂಗಳೂರು, ಪುಣೆ ಹೊರತುಪಡಿಸಿದರೆ ಭಾರತದ ಮಿಕ್ಕೆಲ್ಲಾ ಜಿಲ್ಲೆಗಳು 1 ಲಕ್ಷಕ್ಕೂ ಕಡಿಮೆ ಸಕ್ರಿಯ ಪ್ರಕರಣಗಳನ್ನು ಹೊಂದಿವೆ. ದೆಹಲಿ 1 ಲಕ್ಷದ ಸಮೀಪದಲ್ಲಿದ್ದು, ಮುಂಬೈ 81,174 ಸಕ್ರಿಯ ಪ್ರಕರಣಗಳನ್ನು ಹೊಂದಿದೆ.

ಕರ್ನಾಟಕದ ಶೇ.70ರಷ್ಟು ಕೊರೊನಾ ಪ್ರಕರಣಗಳು ಬೆಂಗಳೂರಿನಲ್ಲಿ ದಾಖಲಾಗುತ್ತಿದ್ದು, ನಗರದ ಆರೋಗ್ಯ ವ್ಯವಸ್ಥೆಗೆ ಸವಾಲಾಗಿ ಪರಿಣಮಿಸಿದೆ. ಬೆಂಗಳೂರಿನಲ್ಲಿ ಪರಿಸ್ಥಿತಿ ಹೀಗೆಯೇ ಮುಂದುವರೆದಲ್ಲಿ ಮೇ.1ರ ಒಳಗೆ ದೈನಂದಿನ ಕೊರೊನಾ ಪ್ರಕರಣಗಳ ಸಂಖ್ಯೆ 25 ಸಾವಿರಕ್ಕೆ ತಲುಪಲಿದೆ. ಆ ಪೈಕಿ ಶೇ.5ರಷ್ಟು ಜನರಿಗೆ ತುರ್ತು ಸೇವೆ ಒದಗಿಸಬೇಕೆಂದರೂ ಪರಿಸ್ಥಿತಿ ಕಠಿಣವಾಗಲಿದೆ ಎಂದು ತಾಂತ್ರಿಕ ಸಲಹಾ ಸಮಿತಿ ಸದಸ್ಯ ಡಾ.ಗಿರಿಧರ್ ಬಾಬು ಎಚ್ಚರಿಕೆ ನೀಡಿದ್ದಾರೆ.

ಪರಿಸ್ಥಿತಿ ನಿಯಂತ್ರಣಕ್ಕಾಗಿ ವೀಕೆಂಡ್​ ಕರ್ಫ್ಯೂ ಹಾಗೂ ನೈಟ್​ ಕರ್ಫ್ಯೂ ಮೊರೆ ಹೋಗಲಾಗಿದ್ದು, ಸೋಂಕು ಹಬ್ಬದಂತೆ ತಡೆಗಟ್ಟಲು ಜನರು ಸಹಕರಿಸಲೇಬೇಕಿದೆ. ಎರಡನೇ ಅಲೆಯ ಸೋಂಕು ಅತಿವೇಗವಾಗಿ ವ್ಯಾಪಿಸುತ್ತಿರುವುದರಿಂದ ಜನರು ಮನೆಯಲ್ಲೇ ಇರುವ ಮೂಲಕ ತಮ್ಮ ಹಾಗೂ ತಮ್ಮ ಕುಟುಂಬದವರ ಆರೋಗ್ಯವನ್ನು ರಕ್ಷಿಸಿಕೊಳ್ಳಬೇಕಿರುವುದು ಸದ್ಯಕ್ಕಿರುವ ಅತ್ಯುತ್ತಮ ಮಾರ್ಗ.

ಇದನ್ನೂ ಓದಿ: ಸೋಂಕು ತಗುಲಿಸಿಕೊಳ್ಳಬೇಡಿ; ಚಿಕಿತ್ಸೆಗಿಂತಲೂ ಮುಂಜಾಗ್ರತೆಯೇ ಕೊರೊನಾಗೆ ಸೂಕ್ತ ಮದ್ದು 

Krishna Ajay Rao : ದಯವಿಟ್ಟು ಈ ವಿಡಿಯೋ ನೋಡಿ ಎಂದು ಕೊರೊನಾ ಜಾಗೃತಿ ಮೂಡಿಸಿದ ನಟ ಕೃಷ್ಣ ಅಜಯ್‌ ರಾವ್

(Bengaluru urban is the top district with highest active Corona cases in India)

ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!