AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಮಲಾ ಸೀತಾರಾಮನ್​ ಹೆಸರಿನಲ್ಲಿ ಸುಳ್ಳು ಪತ್ರ ತೋರಿಸಿ ಬೆಂಗಳೂರಿನ ಮಹಿಳೆಗೆ 80 ಲಕ್ಷ ರೂಪಾಯಿ ವಂಚಿಸಿದ ನಕಲಿ ವೈದ್ಯ

ನೀವು ತುಂಬಾ ದಿನವಾದರೂ ಉಡುಗೊರೆ ಸ್ವೀಕರಿಸಿಲ್ಲ, ಆ ಕಾರಣದಿಂದ ನಿಮ್ಮ ಹೆಸರಿಗೆ ವಿತ್ತ ಸಚಿವಾಲಯದಿಂದ ನೋಟಿಸ್ ಬಂದಿದೆ ಎಂದು ಹೆದರಿಸಿದ್ದಾರೆ. ಜತೆಗೆ, ನಿರ್ಮಲಾ ಸೀತಾರಾಮನ್ ಕಡೆಯಿಂದ ಬಂದಿದೆ ಎನ್ನಲಾದ ನಕಲಿ ಪತ್ರವನ್ನೂ ಕಸ್ಟಮ್ಸ್​ ಅಧಿಕಾರಿಗಳು ಎಂದು ಹೇಳಿಕೊಂಡವರು ಮಹಿಳೆಗೆ ಕಳುಹಿಸಿಕೊಟ್ಟಿದ್ದಾರೆ.

ನಿರ್ಮಲಾ ಸೀತಾರಾಮನ್​ ಹೆಸರಿನಲ್ಲಿ ಸುಳ್ಳು ಪತ್ರ ತೋರಿಸಿ ಬೆಂಗಳೂರಿನ ಮಹಿಳೆಗೆ 80 ಲಕ್ಷ ರೂಪಾಯಿ ವಂಚಿಸಿದ ನಕಲಿ ವೈದ್ಯ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jun 15, 2021 | 8:59 AM

Share

ಬೆಂಗಳೂರು: ಹೃದಯ ತಜ್ಞ ಎಂದು ಹೇಳಿಕೊಂಡು ಬೆಂಗಳೂರಿನ ಮಹಿಳೆಯೊಬ್ಬರಿಗೆ ನಕಲಿ ವೈದ್ಯ ಮೋಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಹೃದಯ ಸಂಬಂಧಿ ಕಾಯಿಲೆ ಇದ್ದ ಕಾರಣ ಹೃದಯ ತಜ್ಞರಿಗಾಗಿ ಇನ್​ಸ್ಟಾಗ್ರಾಂನಲ್ಲಿ ಹುಡುಕಾಟ ನಡೆಸಿದ್ದ ಮಹಿಳೆ 80 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ವೈದ್ಯರನ್ನು ಹುಡುಕುವ ವೇಳೆ ಮಾಬಿಸ್ ಹಾರ್ಮನ್ ಎಂಬಾತನ ಪ್ರೊಫೈಲ್​ ಕಣ್ಣಿಗೆ ಬಿದ್ದಿದ್ದು, ಅದನ್ನು ಹಿಂಬಾಲಿಸಿದಾಗ ಆ ವ್ಯಕ್ತಿ ತನ್ನನ್ನು ತಾನು ಹೃದಯ ತಜ್ಞ ಎಂದು ಪರಿಚಯಿಸಿಕೊಂಡು ಮಹಿಳೆಗೆ ಬೇಕಾದ ಸಲಹೆಗಳನ್ನೆಲ್ಲಾ ನೀಡುವ ಭರವಸೆ ಕೊಟ್ಟಿದ್ದಾನೆ. ಆತನ ಮಾತನ್ನು ಸತ್ಯವೆಂದು ನಂಬಿದ ಮಹಿಳೆ ಇದೀಗ ಒಟ್ಟು 80 ಲಕ್ಷ ರೂಪಾಯಿ ಕಳೆದುಕೊಂಡು ಕಂಗಾಲಾಗಿದ್ದಾರೆ.

ವಿಧವೆಯಾಗಿದ್ದ ಮಹಿಳೆಗೆ ಹೃದಯ ಸಂಬಂಧಿ ಸಮಸ್ಯೆ ಇದ್ದು, ಅದಕ್ಕಾಗಿ ಅವರು ತಜ್ಞ ವೈದ್ಯರಿಂದ ಸಲಹೆ ಪಡೆಯಲು ಆನ್​ಲೈನ್​ ಮೊರೆ ಹೋಗಿದ್ದಾರೆ. ಈ ವೇಳೆ ಸಿಕ್ಕ ಮಾಬಿಸ್ ಹಾರ್ಮನ್ ತನ್ನನ್ನ ತಾನು ಹೃದಯ ತಜ್ಞ ಎಂದು ಪರಿಚಯಿಸಿಕೊಂಡು ನಂಬಿಸಿದ್ದಾನೆ. ಆತ ನಕಲಿ ಎನ್ನುವುದನ್ನು ಅರಿಯದ ಮಹಿಳೆ ವಾಟ್ಸ್ಯಾಪ್​ನೊಂದಿಗೆ ಸಂವಹನ ನಡೆಸಲಾರಂಭಿಸಿದ್ದಾರೆ. ಅಲ್ಲದೇ, ಆತ ಕೊಡುವ ಎಲ್ಲಾ ಸಲಹೆಗಳನ್ನ ಪಾಲಿಸುತ್ತಿದ್ದ ಮಹಿಳೆಗೆ ಕೊನೆಗೆ ಸ್ನೇಹದ ಹೆಸರಲ್ಲಿ ಮೋಸವಾಗಿದೆ.

ವಾಟ್ಸ್ಯಾಪ್​ನಲ್ಲಿ ಸಂಪರ್ಕ ಬೆಳೆಸಿದ ನಂತರ ಮಾಬಿಸ್ ಹಾರ್ಮನ್ ಒಂದು ದಿನ ಮಹಿಳೆಗೆ ಗೊತ್ತಿಲ್ಲದಂತೆ ಉಡುಗೊರೆ ಕಳುಹಿಸಿಕೊಡುವ ನಾಟಕವಾಡಿದ್ದಾನೆ. ಈ ವೇಳೆ ಬ್ರಿಟನ್​ (ಯುಕೆ) ದೇಶದಿಂದ ಮಾಬಿಸ್​ ಸನ್ನುವವರಿಂದ ಕರೆನ್ಸಿ ಹಾಗೂ ಉಡುಗೊರೆ ನಿಮ್ಮ ಹೆಸರಿಗೆ ಬಂದಿದೆ ಎಂದು ಕಸ್ಟಮ್ಸ್​ ಅಧಿಕಾರಿಗಳ ಹೆಸರಲ್ಲಿ ಮಹಿಳೆಗೆ ಕರೆ ಹೋಗಿದೆ. ಕೂಡಲೇ ವೈದ್ಯನೆಂದು ಹೇಳಿಕೊಂಡ ವ್ಯಕ್ತಿಗೆ ಕರೆ ಮಾಡಿದ ಮಹಿಳೆ ಏನು, ಎತ್ತ ನನಗೇಕೆ ಉಡುಗೊರೆ ಕಳುಹಿಸಿದ್ದೀರಿ ಎಂದೆಲ್ಲಾ ವಿಚಾರಿಸಿದ್ದಾರೆ. ಅತ್ತ ಕಡೆಯಿಂದ ಆತ ಒಬ್ಬ ಸ್ನೇಹಿತನಾಗಿ ನಿಮಗೆ ಉಡುಗೊರೆ ಕಳುಹಿಸಿದ್ದೇನೆ ಎಂದು ತಿಳಿಸಿದ್ದಾನೆ.

ಅಷ್ಟಾದರೂ ಮಹಿಳೆ ಉಡುಗೊರೆ ಸ್ವೀಕರಿಸದಿದ್ದಾಗ ಎರಡು ದಿನಗಳ ಬಳಿಕ ಕಸ್ಟಮ್ಸ್​ ಅಧಿಕಾರಿಗಳ ಹೆಸರಲ್ಲಿ ಮತ್ತೆ ಕರೆ ಬಂದಿದೆ. ನೀವು ತುಂಬಾ ದಿನವಾದರೂ ಉಡುಗೊರೆ ಸ್ವೀಕರಿಸಿಲ್ಲ, ಆ ಕಾರಣದಿಂದ ನಿಮ್ಮ ಹೆಸರಿಗೆ ವಿತ್ತ ಸಚಿವಾಲಯದಿಂದ ನೋಟಿಸ್ ಬಂದಿದೆ ಎಂದು ಹೆದರಿಸಿದ್ದಾರೆ. ಜತೆಗೆ, ನಿರ್ಮಲಾ ಸೀತಾರಾಮನ್ ಕಡೆಯಿಂದ ಬಂದಿದೆ ಎನ್ನಲಾದ ನಕಲಿ ಪತ್ರವನ್ನೂ ಕಸ್ಟಮ್ಸ್​ ಅಧಿಕಾರಿಗಳು ಎಂದು ಹೇಳಿಕೊಂಡವರು ಮಹಿಳೆಗೆ ಕಳುಹಿಸಿಕೊಟ್ಟಿದ್ದಾರೆ.

ಈ ಬೆಳವಣಿಗೆಗಳಿಂದ ಗಾಬರಿಗೊಂಡ ಮಹಿಳೆ ಎಷ್ಟು ಹಣ ಕಟ್ಟಬೇಕು ಎಂದು ಕೇಳಿದಾಗ ಉಡುಗೊರೆ ಜತೆಗೆ ಕರೆನ್ಸಿ ಇರುವುದರಿಂದ 60 ಲಕ್ಷ ರೂಪಾಯಿ ಆಗುತ್ತದೆ. ಕರೆನ್ಸಿ ಎಕ್ಸ್​ಚೇಂಜ್​ ಪ್ರಕ್ರಿಯೆಯನ್ನೂ ಸೇರಿಸಿ 80 ಲಕ್ಷ ರೂಪಾಯಿ ಆಗುತ್ತದೆ ಎಂದಿದ್ದಾರೆ. ಅವರ ಮಾತನ್ನು ನಂಬಿದ ಮಹಿಳೆ ಹಣ ಕಟ್ಟಿದ್ದಾರೆ. ಆದರೆ, ಆನ್​ಲೈನ್​ ಮೂಲಕ ಹಣ ಕೊಟ್ಟ ಬಳಿಕ ಗಿಫ್ಟ್​, ಕರೆನ್ಸಿ ಯಾವುದೂ ಕೈ ಸೇರದಿದ್ದಾಗ ಮಹಿಳೆಗೆ ತಾನು ಮೋಸ ಹೋಗಿರುವುದು ಅರಿವಾಗಿದೆ. ಸದ್ಯ ನಕಲಿ ಹೃದಯ ವೈದ್ಯನ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಗೆ ಮಹಿಳೆ ದೂರು ನೀಡಿದ್ದು, ದೂರಿನ‌ ಹಿನ್ನಲೆ ಆರೋಪಿ ವಿರುದ್ದ ಎಫ್ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: ಕೊರೊನಾ ಸೋಂಕಿನ ನಡುವೆ ನಕಲಿ ವೈದ್ಯರ ಹಾವಳಿ; ಸಾರ್ವಜನಿಕರೇ ಎಚ್ಚರ 

ಬೆಂಗಳೂರಿನಲ್ಲಿ ಯುವತಿ ಮೇಲೆ ಆ್ಯಸಿಡ್​ ದಾಳಿ ಬೆದರಿಕೆ; ಹಣ ಹಿಂದಿರುಗಿಸುವಂತೆ ಕೇಳಿದ್ದಕ್ಕೆ ಪ್ರಿಯಕರನಿಂದಲೇ ಬ್ಲ್ಯಾಕ್​ಮೇಲ್

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!