AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಸೋಗಿನಲ್ಲಿ ಚಿನ್ನ ಸಾಗಟ ಮಾಡುತ್ತಿದ್ದ ಸ್ಮಗ್ಲರ್ಸ್ ಅರೆಸ್ಟ್​; 69.74 ಲಕ್ಷ ಮೌಲ್ಯದ ಚಿನ್ನ ಜಪ್ತಿ

ಒಮ್ನಿ ಕಾರು ಸಮೇತ ಹಳ್ಳದ ನೀರಲ್ಲಿ ವೃದ್ಧ ಕೊಚ್ಚಿ ಹೋಗಿರುವಂತಹ ಘಟನೆ ತುರುವೇಕೆರೆ ತಾಲೂಕಿನ ಕೊಂಡಜ್ಜಿ ಕ್ರಾಸ್ ಬಳಿ ನಡೆದಿದೆ.

ಪ್ರಯಾಣಿಕರ ಸೋಗಿನಲ್ಲಿ ಚಿನ್ನ ಸಾಗಟ ಮಾಡುತ್ತಿದ್ದ ಸ್ಮಗ್ಲರ್ಸ್ ಅರೆಸ್ಟ್​; 69.74 ಲಕ್ಷ ಮೌಲ್ಯದ ಚಿನ್ನ ಜಪ್ತಿ
ಸೋಪ್ ರೀತಿಯಲ್ಲಿ ಚಿನ್ನ ಸಾಗಿಸುತ್ತಿದ್ದ ಇಬ್ಬರು ವಶಕ್ಕೆ
TV9 Web
| Edited By: |

Updated on: Aug 04, 2022 | 9:56 AM

Share

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಚಿನ್ನ ಸಾಗಟ ಮಾಡುತ್ತಿದ್ದ ಇಬ್ಬರೂ ಸ್ಮಗ್ಲರ್ಸ್​ (Smugglers) ​ಗಳನ್ನು ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರಿಂದ 69.74 ಲಕ್ಷ ಮೌಲ್ಯದ 1 ಕೆಜಿ 334 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ. ಶ್ರೀಲಂಕಾದಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕರು, ಸೋಪ್ ರೀತಿಯಲ್ಲಿ ಚಿನ್ನವನ್ನ ಇಬ್ಬರು ಸಾಗಾಟ ಮಾಡುತ್ತಿದ್ದರು. ಈ ವೇಳೆ ಲಗೇಜ್​​ನಲ್ಲಿದ್ದ ಸೋಪ್ ಮಾದರಿಯ ವಸ್ತುಗಳನ್ನ ಪರಿಶೀಲಿಸಿದಾಗ ಚಿನ್ನ ಪತ್ತೆಯಾಗಿದೆ. ಇಬ್ಬರು ಪ್ರಯಾಣಿಕರನ್ನ ವಶಕ್ಕೆ ಪಡೆದು ಕಸ್ಟಮ್ಸ್ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ.

ಎಟಿಎಂ ಕಳುವಿಗೆ ವಿಫಲ ಯತ್ನ: ಪೊಲೀಸರನ್ನ ಕಂಡು ಕಳ್ಳರು ಪರಾರಿ

ದೇವನಹಳ್ಳಿ: ಮಹಿಂದ್ರಾ ಕೋಟಕ್ ಬ್ಯಾಂಕ್​ನ ಎಟಿಎಂ ಕಳುವಿಗೆ ವಿಫಲ ಪ್ರಯತ್ನ ಪಟ್ಟಿದ್ದು, ಪೊಲೀಸರನ್ನ ಕಂಡು ಬೊಲೇರೋ ಕಾರಲ್ಲಿ ಕಳ್ಳರು ಎಸ್ಕೆಪ್ ಆಗಿರುವಂತಹ ಘಟನೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಜೂನಿಯರ್ ಕಾಲೇಜು ಮುಂಭಾಗ ಇರೋ ಮಹಿಂದ್ರಾ ಕೊಟಕ್ ಬ್ಯಾಂಕ್ ಎಟಿಎಂನಲ್ಲಿ ಮಧ್ಯರಾತ್ರಿ 12.10 ಕ್ಕೆ ಎಟಿಎಂಗೆ ಕನ್ನ ಹಾಕಲು ಬೊಲೆರೋ ವಾಹನದಲ್ಲಿ ಬಂದಿರೋ ಶಂಕೆ ವ್ಯಕ್ತವಾಗಿದೆ. ಎಟಿಎಂ ಹೊಡೆದು ಕಳ್ಳತನ ಮಾಡುವ ವೇಳೆ ಅಕ್ಕಪಕ್ಕದ ಮನೆಯವರು ಕೂಗಾಡಿದ್ದಾರೆ. ಎಸ್ಕೇಪ್ ಆದ ಕಳ್ಳರಿಗಾಗಿ ಪೊಲೀಸರಿಂದ ಶೋಧ ನಡೆಯುತ್ತಿದ್ದು, ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಅಡಿಷನಲ್ ಎಸ್ಪಿ ಪುರುಷೋತ್ತಮ್ ಭೇಟಿ ಪರಿಶೀಲನೆ ಮಾಡಿದರು. ವಿಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಒಮ್ನಿ ಕಾರು ಸಮೇತ ಹಳ್ಳದಲ್ಲಿ ಕೊಚ್ಚಿ ಹೋದ ವೃದ್ಧ

ತುಮಕೂರು: ಒಮ್ನಿ ಕಾರು ಸಮೇತ ಹಳ್ಳದ ನೀರಲ್ಲಿ ವೃದ್ಧ ಕೊಚ್ಚಿ ಹೋಗಿರುವಂತಹ ಘಟನೆ ತುರುವೇಕೆರೆ ತಾಲೂಕಿನ ಕೊಂಡಜ್ಜಿ ಕ್ರಾಸ್ ಬಳಿ ನಡೆದಿದೆ. ಪಟೇಲ್​ ಕುಮಾರ್ (70) ಹಳ್ಳದಲ್ಲಿ ಕೊಚ್ಚಿ ಹೋದ ವೃದ್ಧ. ಪಟೇಲ್​ ಕುಮಾರ್​ಗಾಗಿ ಶೋಧ ಕಾರ್ಯ ಮುಂದುವರೆದಿದೆ. ಕಾರಿನಲ್ಲಿದ್ದ ಮತ್ತೋರ್ವ ವ್ಯಕ್ತಿ ಪುಟ್ಟಸಿದ್ದಪ್ಪ ಅಪಾಯದಿಂದ ಪಾರಾಗಿದ್ದಾರೆ. ತಡರಾತ್ರಿ ಸೇತುವೆ ದಾಟುತ್ತಿದ್ದಾಗ ಅವಘಡ ಸಂಭವಿಸಿದೆ. ದಂಡಿನಶಿವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮೆಡಿಕಲ್ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಕೋಲಾರ: ಕುತ್ತಿಗೆ ಕುಯ್ದುಕೊಂಡು ಮೆಡಿಕಲ್ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ನಗರದ ಟಮಕ ದಲ್ಲಿರುವ ದೇವರಾಜ ಅರಸು ಮೆಡಿಕಲ್ ಕಾಲೇಜುನಲ್ಲಿ ನಡೆದಿದೆ. ಹರಿಯಾಣ ಮೂಲದ ಪ್ರದೀಪ್ ಶರ್ಮ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಗಲ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ