Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಬನ್ನೇರುಘಟ್ಟ ರಸ್ತೆಯ 1 ಕಿಲೋ ಮೀಟರ್ ಸಂಚಾರ ಬಂದ್; ಕಾರಣ ಇಲ್ಲಿದೆ

ಲಕ್ಕಸಂದ್ರ ಮೆಟ್ರೊ ನಿಲ್ದಾಣದ ನಿರ್ಮಾಣಕ್ಕೆ ಅನುಕೂಲವಾಗುವಂತೆ ಬನ್ನೇರುಘಟ್ಟ ರಸ್ತೆಯ ಒಂದು ಕಿಲೋಮೀಟರ್ ರಸ್ತೆಯನ್ನು ಏಪ್ರಿಲ್ 5 ರಿಂದ ಒಂದು ವರ್ಷದವರೆಗೆ ಸಂಚಾರಕ್ಕೆ ನಿರ್ಬಂಧಿಸಲಾಗುವುದು ಎಂದು ಬೆಂಗಳೂರು ಸಂಚಾರ ಪೊಲೀಸರು ಗುರುವಾರ (ಏ.04) ತಿಳಿಸಿದ್ದಾರೆ.

ಇಂದಿನಿಂದ ಬನ್ನೇರುಘಟ್ಟ ರಸ್ತೆಯ 1 ಕಿಲೋ ಮೀಟರ್ ಸಂಚಾರ ಬಂದ್; ಕಾರಣ ಇಲ್ಲಿದೆ
ಬನ್ನೇರುಘಟ್ಟ ರಸ್ತೆಯ 1 ಕಿಲೋ ಮೀಟರ್ ಸಂಚಾರ ಬಂದ್
Follow us
ಕಿರಣ್ ಹನುಮಂತ್​ ಮಾದಾರ್
|

Updated on: Apr 05, 2024 | 8:17 AM

ಬೆಂಗಳೂರು, ಏ.05: ಇಂದಿನಿಂದ ಬನ್ನೇರುಘಟ್ಟ(Bannerughatta) ರಸ್ತೆಯ 1 ಕಿಲೋ ಮೀಟರ್ ಸಂಚಾರ ಬಂದ್ ಮಾಡಲಾಗುವುದು ಎಂದು ಬೆಂಗಳೂರು ಸಂಚಾರ ಪೊಲೀಸರು(Bengaluru Traffic Police) ಗುರುವಾರ(ಏ.04) ತಿಳಿಸಿದ್ದಾರೆ. ಲಕ್ಕಸಂದ್ರ ಮೆಟ್ರೋ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಅನುಕೂಲವಾಗುವ ಉದ್ದೇಶದಿಂದ ಬನ್ನೇರುಘಟ್ಟ ರಸ್ತೆಯ ಒಂದು ಕಿಲೋಮೀಟರ್ ವ್ಯಾಪ್ತಿಯನ್ನು ಏಪ್ರಿಲ್ 5 ರಿಂದ ಒಂದು ವರ್ಷದವರೆಗೆ ಮುಚ್ಚಲಾಗುತ್ತಿದೆ.

ಲಕ್ಕಸಂದ್ರ ಮೆಟ್ರೋ ನಿಲ್ದಾಣವು 21.26 ಕಿ.ಮೀ ಪಿಂಕ್ ಲೈನ್‌ನ ಭಾಗವಾಗಿದ್ದು, ಮುಂದಿನ ವರ್ಷ ತೆರೆಯಲಿದೆ. ಮೈಕೋ ಬಂಡೆ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ವರೆಗೆ ಡೈರಿ ಸರ್ಕಲ್‌ನಿಂದ ವಾಹನಗಳಿಗೆ ಹೋಗುವ ರಸ್ತೆಯನ್ನು ಏಪ್ರಿಲ್ 1 ರಂದು ಮುಚ್ಚಲು ಪ್ರಾರಂಭಿಸಬೇಕಾಗಿತ್ತು. ಆದರೆ, ನಾಲ್ಕು ದಿನ ಹಿಂದಕ್ಕೆ ತಳ್ಳಲಾಯಿತು. ಜೊತೆಗೆ ಸವಾರರ ದೃಷ್ಟಿಯಿಂದ, ಟ್ರಾಫಿಕ್ ಪೊಲೀಸರು ವಾಹನ ಬಳಕೆದಾರರಿಗೆ ಈ ಕೆಳಗಿನ ತಿರುವುಗಳನ್ನು ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ:ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ಲಾಟ್​​​​​​ಫಾರ್ಮ್​​ ಸ್ಕ್ರೀನ್​ ಡೋರ್​​,​ ಗೇಟ್ ಅಳವಡಿಕೆ ಒತ್ತಡ

ಡೈರಿ ವೃತ್ತದಿಂದ ಆನೆಪಾಳ್ಯ ಜಂಕ್ಷನ್ ಕಡೆಗೆ ತೆರಳುವ ವಾಹನಗಳು ಮೈಕೋ ಬಂಡೆ ಸಿಗ್ನಲ್ ಬಳಿ ಬಲ ತಿರುವು ಪಡೆದು ನ್ಯೂ ಮೈಕೋ ಲಿಂಕ್ ರಸ್ತೆ ಮೂಲಕ ಆಡುಗೋಡಿ ಸಿಗ್ನಲ್ ತಲುಪಿ ಎಡಕ್ಕೆ ತಿರುಗಿ ಆನೆಪಾಳ್ಯ ಜಂಕ್ಷನ್ ಕಡೆಗೆ ಸಾಗಬೇಕು. ಆನೆಪಾಳ್ಯ ಜಂಕ್ಷನ್ ಎಂದರೆ ಬನ್ನೇರುಘಟ್ಟ ರಸ್ತೆ ಮತ್ತು ಹೊಸೂರು ರಸ್ತೆಯಿಂದ ಬರುವ ಟ್ರಾಫಿಕ್ ಕ್ರಿಶ್ಚಿಯನ್ ಸ್ಮಶಾನದ ಬಳಿ ವಿಲೀನಗೊಳ್ಳುತ್ತದೆ. ಡೈರಿ ವೃತ್ತದಿಂದ ಶಾಂತಿನಗರದ ವಿಲ್ಸನ್ ಗಾರ್ಡನ್ ಕಡೆಗೆ ಚಲಿಸುವ ವಾಹನಗಳು ಮೈಕೋ ಬಂಡೆ ಸಿಗ್ನಲ್ ಮೂಲಕ ಚಲಿಸಬಹುದು ಮತ್ತು ವಿಲ್ಸನ್ ಗಾರ್ಡನ್ 7ನೇ ಮುಖ್ಯರಸ್ತೆ ಕ್ರಾಸ್ (ಚಿನ್ನಯ್ಯನ ಪಾಳ್ಯ ಕ್ರಾಸ್) ನಲ್ಲಿ ಎಡಕ್ಕೆ ತಿರುಗಬಹುದು. ಆನೆಪಾಳ್ಯ ಜಂಕ್ಷನ್‌ನಿಂದ ಡೈರಿ ಸರ್ಕಲ್ ಕಡೆಗೆ ಸಂಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಬನ್ನೇರುಘಟ್ಟ ರಸ್ತೆ ಮೂಲಕ ವಾಹನಗಳು ಸಂಚರಿಸಬಹುದು ಎಂದು ಸ್ಪಷ್ಟಪಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ