AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಪಾಲರಿಂದ ಪ್ರಶಸ್ತಿ ಕೊಡಿಸುತ್ತೇನೆಂದು 1 ಲಕ್ಷ ರೂ. ವಂಚನೆ: ಇಬ್ಬರು ಆರೋಪಿಗಳ ಬಂಧನ

ಸಿನಿಮಾ ಸ್ಟೈಲ್​​ನಲ್ಲಿ 1 ಲಕ್ಷ ರೂ. ಖದೀಮರು ವಂಚಿಸಿದ್ದಾರೆ. ಬಿಜೆಪಿ ಯೂತ್ ಲೀಡರ್, ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಗೌಡಗೆ ಆರೋಪಿಗಳು ವಂಚಿಸಿದ್ದಾರೆ. ರಾಜಭವನಕ್ಕೆ ಕರೆದುಕೊಂಡು ಹೋಗಿ ಅಧಿಕಾರಿ ಎನ್ನುವಂತೆ ನಟಿಸಿದ್ದಾರೆ.

ರಾಜ್ಯಪಾಲರಿಂದ ಪ್ರಶಸ್ತಿ ಕೊಡಿಸುತ್ತೇನೆಂದು 1 ಲಕ್ಷ ರೂ. ವಂಚನೆ: ಇಬ್ಬರು ಆರೋಪಿಗಳ ಬಂಧನ
ಪ್ರಾತಿನಿಧಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Aug 27, 2022 | 12:10 PM

Share

ಬೆಂಗಳೂರು: ರಾಜಭವನದ ಅಧಿಕಾರಿಯೆಂದು ಹೇಳಿ ಪ್ರಶಸ್ತಿ ಹೆಸರಲ್ಲಿ ವ್ಯಕ್ತಿಗೆ ವಂಚನೆ ಮಾಡಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಗ್ಯಾನ್ ಪ್ರಕಾಶ್, ಗಿರಿಧರ್​ ಬಂಧಿತರು. ಸ್ವಾತಂತ್ರ್ಯ ಮಹೋತ್ಸವಕ್ಕೆ ಪ್ರಶಸ್ತಿ ಕೊಡಿಸುವುದಾಗಿ ಹೇಳಿ, ಸಿನಿಮಾ ಸ್ಟೈಲ್​​ನಲ್ಲಿ 1 ಲಕ್ಷ ರೂ. ಖದೀಮರು ವಂಚಿಸಿದ್ದಾರೆ. ಬಿಜೆಪಿ ಯೂತ್ ಲೀಡರ್, ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಗೌಡಗೆ ಆರೋಪಿಗಳು ವಂಚಿಸಿದ್ದಾರೆ. ರಾಜಭವನಕ್ಕೆ ಕರೆದುಕೊಂಡು ಹೋಗಿ ಅಧಿಕಾರಿ ಎನ್ನುವಂತೆ ನಟಿಸಿದ್ದಾರೆ. ರಾಜ್ಯಪಾಲರ ಚೇಂಬರ್ ಒಳಗೆ ಹೋಗಿ ಅರ್ಧಗಂಟೆಗಳ ಕಾಲ ಮಾತನಾಡಿ ಆರೋಪಿ ಹೊರಬಂದಿದ್ದಾನೆ. ಈ ಕುರಿತಾಗಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ವೆಂಕಟೇಶ್ ಗೌಡ ಎಂಬುವವರಿಗೆ ಸುರೇಶ್ ಎಂಬುವವರು ಕರೆ ಮಾಡಿದ್ದು, ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್​ರಿಂದ ಪ್ರಶಸ್ತಿ ಕೊಡಿಸುತ್ತೇನೆ. ಹೀಗಾಗಿ ದೇಣಿಗೆ ರೂಪದಲ್ಲಿ ಒಂದು ಲಕ್ಷ ರೂ.  ಹಣ ನೀಡಬೇಕೆಂದು ಸುರೇಶ್ ಬಾಬು ಕರೆ ಮಾಡಿದ್ದ. ಹೀಗಾಗಿ ಸುರೇಶ್ ಬಾಬು ಅವರ ಅಕೌಂಟ್​​ಗೆ ವೆಂಕಟೇಶ್ ಗೌಡ ಹಣ ಹಾಕಿದ್ದಾರೆ. ಆ ಹಣವನ್ನ ಗ್ಯಾನ ಪ್ರಕಾಶ್ ಹಾಗೂ ಗಿರಿಧರ್ ಎಂಬುವವರಿಗೆ ಟ್ರಾನ್ಸ್ ಫರ್ ಮಾಡಿರುದಾಗಿ ಸುರೇಶ್ ಬಾಬು ಹೇಳಿದ್ದಾರೆ.

ಇದನ್ನೂ ಓದಿ: ಮಠದ ಹಾಸ್ಟೇಲ್​​​​​​ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ಕಿರುಕುಳ: ಸ್ವಾಮೀಜಿ ವಿರುದ್ಧ ದೂರು ದಾಖಲು

ನಂತರ ರಾಜಭವನದಲ್ಲಿ ರಾಜ್ಯಪಾಲರನ್ನ ಭೇಟಿ ಮಾಡಿದಲ್ಲಿ ಇದೊಂದು ಸಹಜ ಭೇಟಿ ಎಂದು ತಿಳಿದು ಬಂದಿತ್ತು. ಅಷ್ಟೆ ಅಲ್ಲದೆ ನಕಲಿ ಪುರಸ್ಕಾರದ ಪತ್ರವನ್ನೂ ನೀಡಿ ಆರೋಪಿಗಳು ವಂಚಿಸಿದ್ದಾರೆ. ಹೀಗಾಗಿ ಸುಳ್ಳು ಹೇಳಿ ಹಣ ಪಡೆದು ಸಹಜ ಭೇಟಿಗೆ ಪ್ರಶಸ್ತಿ ಪುರಸ್ಕಾರ ಎಂದು ಹೇಳಿ ವಂಚಿಸಿದ ಹಿನ್ನಲೆ ವಿಧಾನಸೌಧ ಪೊಲೀಸರಿಗೆ ವೆಂಕಟೇಶ್ ಗೌಡ ದೂರು ನೀಡಿದ್ದರು. ವಂಚನೆ ಪ್ರಕರಣ ಹಿನ್ನಲೆ ಆರೋಪಿಗಳಿಬ್ಬರನ್ನು  ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:09 pm, Sat, 27 August 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?