ಮಂಗಳಯಾನ ಕಕ್ಷೆಗೆ ತಲುಪಿ 10 ವರ್ಷ, ನೆಹರು ತಾರಾಲಯದಲ್ಲಿ ವಿಶೇಕ್ಷ ಪ್ರದರ್ಶನ ಕಂಡು ಹೆಮ್ಮೆ ಪಟ್ಟ ಜನ

ಇಡೀ ದೇಶವನ್ನೆ ತಿರುಗಿ ನೋಡುವಂತೆ ಮಾಡಿದ್ದ ಮಂಗಳಯಾನ ಕಕ್ಷೆಗೆ ತಲುಪಿ 10 ವರ್ಷ ಕಳೆದಿದ್ದು, ನಿನ್ನೆ ಅದರ ನೆನಪಿಗಾಗಿ ನೆಹರು ತಾರಾಲಯದಲ್ಲಿ ಮಂಗಳಯಾನದ ಮಾಡೆಲ್​ಗಳನ್ನ ಪ್ರದರ್ಶನಕ್ಕೆ ಇರಿಸಲಾಗಿತ್ತು. ಇದನ್ನು ಕಂಡ ಜನ ಇದರ ಬಗ್ಗೆ ಮಂಗಳಯಾನದ ಯಶಸ್ಸಿನ ಕಥೆ ಕೇಳಿ ಹೆಮ್ಮೆ ಪಟ್ಟರು.

ಮಂಗಳಯಾನ ಕಕ್ಷೆಗೆ ತಲುಪಿ 10 ವರ್ಷ, ನೆಹರು ತಾರಾಲಯದಲ್ಲಿ ವಿಶೇಕ್ಷ ಪ್ರದರ್ಶನ ಕಂಡು ಹೆಮ್ಮೆ ಪಟ್ಟ ಜನ
ನೆಹರು ತಾರಾಲಯದಲ್ಲಿ ವಿಶೇಕ್ಷ ಪ್ರದರ್ಶನ
Follow us
| Updated By: ಆಯೇಷಾ ಬಾನು

Updated on: Sep 30, 2024 | 7:18 AM

ಬೆಂಗಳೂರು, ಸೆ.30: ಮಂಗಳನ ರಹಸ್ಯವನ್ನು ಬೇಧಿಸಲು ರೂಪಿಸಿದ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಮಾರ್ಸ್​ ಆರ್ಬಿಟರ್​ ಅನ್ನು (Mangalyaan) ಸುಮಾರು 450 ಕೋಟಿ ರೂಪಾಯಿ ವೆಚ್ಚದಲ್ಲಿ ಜೀವ ತಳೆದಿತ್ತು. 2013ರ ನವೆಂಬರ್​ 5 ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಪಿಎಸ್​ಎಲ್​ವಿ ರಾಕೆಟ್​ ಮೂಲಕ ಉಪಗ್ರಹವನ್ನು ಉಡಾವಣೆ ಮಾಡಲಾಗಿತ್ತು. 2014 ರ ಸೆಪ್ಟೆಂಬರ್​ 24 ರಂದು ಅದು ಮಂಗಳನ ಕಕ್ಷೆ ಸೇರಿತ್ತು.

ಮೊದಲು ಈ ಉಪಗ್ರಹವನ್ನು 6 ತಿಂಗಳ ಅವಧಿಗೆ ಕಾರ್ಯಾಚರಣೆ ನಡೆಸುವ ಗುರಿ ಹೊಂದಲಾಗಿತ್ತು. ಬಳಿಕ ಅದು 8 ವರ್ಷಗಳ ಕಾಲ ಮಂಗಳನ ಕಕ್ಷೆ ಸುತ್ತಿ ಹಲವು ಸಂಶೋಧನೆ ನಡೆಸಿದೆ. ಜೊತೆಗೆ ಮಂಗಳ ಗ್ರಹದ ವಾತಾವರಣ, ಅದರ ಮೇಲ್ಮೈ ಲಕ್ಷಣ, ಅಲ್ಲಿರಬಹುದಾದ ಸೂಕ್ಷ್ಮ ಜೀವಕಣಗಳ ಅಧ್ಯಯನ ಸೇರಿದಂತೆ ಮತ್ತಿತರ ಮಹತ್ತರ ಮಾಹಿತಿಯನ್ನು ಕಲೆ ಹಾಕಿದೆ. ಈ ಮಹತ್ವದ ಗ್ರಹ ಕಕ್ಷೆ ಸೇರಿ 10 ವರ್ಷ ಕಳೆದಿದ್ದು, ಈ ಸುಧಿನವನ್ನ ವಿಜ್ಞಾನಿಗಳು ಸಂಭ್ರಮಿಸುತ್ತಿದ್ದಾರೆ.

ಜಗತ್ತೇ ಭಾರತದತ್ತ ತಿರುಗಿ ನೋಡಿದ ಕ್ಷಣಕ್ಕೆ 10 ವರ್ಷ ತುಂಬಿದೆ. ಮೊದಲ ಪ್ರಯತ್ನದಲ್ಲೇ ಮಂಗಳಯಾನ ಯಶಸ್ವಿಗೊಳಿಸಿದ್ದ ಭಾರತದ ಹಿರಿಮೆಯನ್ನ ಮಕ್ಕಳಿಗೆ ತಿಳಿಸುವ ಸಲುವಾಗಿ ನೆಹರು ತಾರಾಲಯದಲ್ಲಿ ನಿನ್ನೆ ವಿಶೇಷ ಮಾಡೆಲ್ ಪ್ರದರ್ಶನ ಏರ್ಪಡಿಸಲಾಗಿತ್ತು. ಅದರಲ್ಲಿ ಮಂಗಳಯಾನದ ಉಡಾಯನ ನೌಕೆ ಹಾಗೂ ಉಪಗ್ರಹದ ಮಾಡೆಲ್ ಪ್ರದರ್ಶನಕ್ಕೆ ಇಡುವ ಮೂಲಕ ಐತಿಹಾಸಿಕ ಕ್ಷಣವನ್ನು ಹೆಮ್ಮೆಯಿಂದ ನೆಹರು ತಾರಾಲಯ ಆಚರಿಸುತ್ತಿದ್ದು, ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಮಂಗಳಯಾನದ ಬಗ್ಗೆ ಮಾಹಿತಿ ನೀಡಲಾಯಿತು.

ಇದನ್ನೂ ಓದಿ: ISRO recruitment 2024: ಹೆಮ್ಮೆಯ ಇಸ್ರೋ ಸಂಸ್ಥೆಯಲ್ಲಿ ಸಾಮಾನ್ಯ ಉದ್ಯೋಗಾವಕಾಶಗಳು: ಖಾಲಿ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

ಇನ್ನು, ಮಂಗಳಯಾನ ಮಾಡೆಲ್ ಗಳನ್ನ ನೋಡಿದ ಜನರು ಸಂತೋಷ ಪಟ್ರು.‌ ಮಂಗಳಯಾನ ಭಾರತದ ಹೆಮ್ಮೆ.‌ ಆ ಹೆಮ್ಮೆಯನ್ನ ಇಂದಿಗೂ ನಾವು ಸಂಭ್ರಮಿಸುತ್ತಿದ್ದೇವೆ. ಅಲ್ಲದೇ ಕಡಿಮೆ ವೆಚ್ಚದಲ್ಲಿ ಮಂಗಳಯಾನವನ್ನ ಉಡಾವಣೆ ಮಾಡಲಾಗಿತ್ತು. ಈ ಕುರಿತಾಗಿ ಇಂದು ಮಾಡೆಲ್ ಗಳ ಪ್ರದರ್ಶನವನ್ನ ನೆಹರು ತಾರಾಲಯದಲ್ಲಿ ಇಟ್ಟಿರುವುದು ತುಂಬ ಖುಷಿಯಾಗುತ್ತಿದೆ. ಅಲ್ಲದೇ ಮಕ್ಕಳಿಂದ ದೊಡ್ಡವರವರೆಗೂ ಎಲ್ಲವನ್ನೂ ತಿಳಿದುಕೊಳ್ಳುತ್ತಿದ್ದೇವೆ ಎಂದು ಸಿಲಿಕಾನ್ ಮಂದಿ ಖುಷಿಪಟ್ರು.

ಒಟ್ನಲ್ಲಿ, ಮಂಗಳಯಾನ ಕಕ್ಷೆ ತಲುಪಿ 10 ವರ್ಷ ಕಳೆದಿದ್ರೂ, ಆ ಸಂಭ್ರಮ ಇಂದಿಗೂ ಇದೆ. ಜನರು ಮಂಗಳಯಾನದ ಬಗ್ಗೆ ತಿಳಿದುಕೊಂಡು ಹೆಮ್ಮೆ ಪಟ್ಟಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘ಹೊಸ ಜೀವನ ಸಿಕ್ಕಿದೆ’; ಅಪಘಾತದ ನಂತರ ಮುಶೀರ್ ಖಾನ್ ಮೊದಲ ಮಾತು
‘ಹೊಸ ಜೀವನ ಸಿಕ್ಕಿದೆ’; ಅಪಘಾತದ ನಂತರ ಮುಶೀರ್ ಖಾನ್ ಮೊದಲ ಮಾತು
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?