AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

108 ಆ್ಯಂಬುಲೆನ್ಸ್ ಚಾಲಕರ ನೇಮಕಾತಿಯಲ್ಲಿ ಅಕ್ರಮ ಆರೋಪ: ಒಬ್ಬೊಬ್ಬರಿಂದ 3 ಲಕ್ಷ ರೂ ವಸೂಲಿ?

108 ಆ್ಯಂಬುಲೆನ್ಸ್ ಚಾಲಕರ ನೇಮಕಾತಿಯಲ್ಲಿ ಅಕ್ರಮ ಆರೋಪ ಕೇಳಿಬಂದಿದೆ. ಜಿವಿಕೆ ಸಂಸ್ಥೆ ವಿರುದ್ಧ ರಾಜ್ಯ ಆ್ಯಂಬುಲೆನ್ಸ್ ಚಾಲಕರ ಸಂಘ ಗಂಭೀರ ಆರೋಪ ಮಾಡಿದೆ. ಸರ್ಕಾರದ ಆದೇಶ ಧಿಕ್ಕರಿಸಿ, ಒಬ್ಬರಿಂದ 3 ಲಕ್ಷ ರೂ. ಹಣ ಪಡೆದು ನೇಮಕ ಮಾಡಿರುವ ಆರೋಪ ಕೇಳಿಬಂದಿದೆ.

108 ಆ್ಯಂಬುಲೆನ್ಸ್ ಚಾಲಕರ ನೇಮಕಾತಿಯಲ್ಲಿ ಅಕ್ರಮ ಆರೋಪ: ಒಬ್ಬೊಬ್ಬರಿಂದ 3 ಲಕ್ಷ ರೂ ವಸೂಲಿ?
108 ಆ್ಯಂಬುಲೆನ್ಸ್ (ಸಂಗ್ರಹ ಚಿತ್ರ)
Vinayak Hanamant Gurav
| Edited By: |

Updated on: Dec 08, 2023 | 1:18 PM

Share

ಬೆಂಗಳೂರು, ಡಿಸೆಂಬರ್​​ 08: ಇತ್ತೀಚೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ವಿವಿಧ ಸ್ಪರ್ಧಾತ್ಮಕ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿತ್ತು. ಇದೀಗ 108 ಆ್ಯಂಬುಲೆನ್ಸ್ (108 Ambulance) ಚಾಲಕರ ನೇಮಕಾತಿಯಲ್ಲಿ ಅಕ್ರಮ ಆರೋಪ ಕೇಳಿಬಂದಿದೆ. ಜಿವಿಕೆ ಸಂಸ್ಥೆ ವಿರುದ್ಧ ರಾಜ್ಯ ಆ್ಯಂಬುಲೆನ್ಸ್ ಚಾಲಕರ ಸಂಘ ಗಂಭೀರ ಆರೋಪ ಮಾಡಿದೆ. 250ಕ್ಕೂ ಹೆಚ್ಚು ಅಹರ್ತೆ ಇಲ್ಲದ ಚಾಲಕರನ್ನ ನೇಮಕ ಮಾಡಿಕೊಂಡ GVK ಕಂಪನಿ ಕೋಟ್ಯಾಂತರ ರೂ. ಭ್ರಷ್ಟಾಚಾರ ಮಾಡಿದೆ. ಸರ್ಕಾರದ ಆದೇಶ ಧಿಕ್ಕರಿಸಿ, ಒಬ್ಬರಿಂದ 3 ಲಕ್ಷ ರೂ. ಹಣ ಪಡೆದು ನೇಮಕ ಮಾಡಿರುವ ಆರೋಪ ಮಾಡಲಾಗಿದೆ.

ಅನರ್ಹತೆ ಚಾಲಕರ ನೇಮಕ ಹಿನ್ನೆಲೆ ಆ್ಯಂಬುಲೆನ್ಸ್ ಅಪಘಾತದಲ್ಲಿ ಏರಿಕೆ ಆಗುತ್ತಿದೆ. ಮಾನದಂಡ ಹಾಗೂ ಅರ್ಹತೆ, ಅನುಭವದ ಕೊರತೆ ಕಾರಣ ಒಂದೇ ತಿಂಗಳಲ್ಲಿ 10ಕ್ಕೂ ಹೆಚ್ಚು ಆ್ಯಂಬುಲೆನ್ಸ್ ಅಪಘಾತ ಉಂಟಾಗಿವೆ.

108 ಚಾಲಕರಿಗೆ ಇರಬೇಕಾದ ಅಹರ್ತೆಗಳೇನು?

  • SSLC  ವಿದ್ಯಾರ್ಹತೆ ಪೂರ್ಣಗೊಳಿಸರಬೇಕು.
  • DL ಪಡೆದು ಐದು ವರ್ಷ ಪೂರ್ಣಗೊಳಿಸರಬೇಕು.
  • ಹೇವಿ ವೆಹಿಕಲ್ ಚಾಲನಾ ಪರವಾನಗಿಯನ್ನು ಕಡ್ಡಾಯವಾಗಿ ಹೊಂದಿರಬೇಕು.
  • ನೇಮಕಾತಿ ಮಾಡುವ ಸಂಧರ್ಭದಲ್ಲಿ ಚಾಲಕರಿಗೆ ವಾಹನ ಚಾಲನಾ ತರಬೇತಿ ನೀಡಬೇಕು.
  • ನೇಮಕಾತಿಯಲ್ಲಿ ಹಲವು ಮಾನದಂಡ ಅನುಸರಿಸಬೇಕು.

ಆರೋಪವೇನು?

  • ನೇಮಕಾತಿ ಯಾವುದೇ ನಿಯಮ‌ ಪಾಲನೆ ಮಾಡಿಲ್ಲ.
  • ಒಬ್ಬರಿಂದ ಮೂರು ಲಕ್ಷ ರೂ. ಹಣ ಪಡೆದು ನೇಮಕ ಮಾಡಲಾಗಿದೆ.
  • 40 ಜನ ಹಣ ಕೊಟ್ಟಿಲ್ಲವೆಂದು ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ.
  • ಕಮಿಷನರ್ ಆದೇಶದಂತೆ 130 ಜನರ ನೇಮಕ ಮಾಡಿಕೊಳ್ಳಬೇಕು. ಆದರೆ ಚಾಲಕರ ಕೊರತೆ ನೆಪವೊಡ್ಡಿ 250 ಕ್ಕೂ ಅಧಿಕ ಚಾಲಕರ ನೇಮಕ ಮಾಡಿಕೊಳ್ಳಲಾಗಿದೆ.

ನೂತನ 262 ಆ್ಯಂಬುಲೆನ್ಸ್: ಸಿಎಂ ಸಿದ್ದರಾಮಯ್ಯ ಚಾಲನೆ

ರಾಜ್ಯದ ಆರೋಗ್ಯ ಇಲಾಖೆಯ ನೂತನ 262 ಆ್ಯಂಬುಲೆನ್ಸ್​ಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಇತ್ತೀಚೆಗೆ ಚಾಲನೆ ನೀಡಿದ್ದರು. ಕರ್ನಾಟಕದಲ್ಲಿ 108 ಆ್ಯಂಬುಲೆನ್ಸ್ ಸೇವೆಗೆ ಮತ್ತಷ್ಟು ಬಲ ನೀಡಲು 262 ಹೊಸ ಆ್ಯಂಬುಲೆನ್ಸ್ ಮತ್ತು ವೈದ್ಯಕೀಯ ಉಪಕರಣ ಖರೀದಿಸಲು ನಿರ್ಧರಿಸಲಾಗಿತ್ತು. ಅದರಂತೆ ಹೊಸ ಆ್ಯಂಬುಲೆನ್ಸ್ ಸೇವೆ ಚಾಲನೆ ನೀಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?