Sign In

By signing in or creating an account, you agree with Associated Broadcasting Company's Terms & Conditions and Privacy Policy.

108 ಆ್ಯಂಬುಲೆನ್ಸ್ ಚಾಲಕರ ನೇಮಕಾತಿಯಲ್ಲಿ ಅಕ್ರಮ ಆರೋಪ: ಒಬ್ಬೊಬ್ಬರಿಂದ 3 ಲಕ್ಷ ರೂ ವಸೂಲಿ?

108 ಆ್ಯಂಬುಲೆನ್ಸ್ ಚಾಲಕರ ನೇಮಕಾತಿಯಲ್ಲಿ ಅಕ್ರಮ ಆರೋಪ ಕೇಳಿಬಂದಿದೆ. ಜಿವಿಕೆ ಸಂಸ್ಥೆ ವಿರುದ್ಧ ರಾಜ್ಯ ಆ್ಯಂಬುಲೆನ್ಸ್ ಚಾಲಕರ ಸಂಘ ಗಂಭೀರ ಆರೋಪ ಮಾಡಿದೆ. ಸರ್ಕಾರದ ಆದೇಶ ಧಿಕ್ಕರಿಸಿ, ಒಬ್ಬರಿಂದ 3 ಲಕ್ಷ ರೂ. ಹಣ ಪಡೆದು ನೇಮಕ ಮಾಡಿರುವ ಆರೋಪ ಕೇಳಿಬಂದಿದೆ.

108 ಆ್ಯಂಬುಲೆನ್ಸ್ ಚಾಲಕರ ನೇಮಕಾತಿಯಲ್ಲಿ ಅಕ್ರಮ ಆರೋಪ: ಒಬ್ಬೊಬ್ಬರಿಂದ 3 ಲಕ್ಷ ರೂ ವಸೂಲಿ?
108 ಆ್ಯಂಬುಲೆನ್ಸ್ (ಸಂಗ್ರಹ ಚಿತ್ರ)
Follow us
Vinayak Hanamant Gurav
| Updated By: ಗಂಗಾಧರ​ ಬ. ಸಾಬೋಜಿ

Updated on: Dec 08, 2023 | 1:18 PM

ಬೆಂಗಳೂರು, ಡಿಸೆಂಬರ್​​ 08: ಇತ್ತೀಚೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ವಿವಿಧ ಸ್ಪರ್ಧಾತ್ಮಕ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿತ್ತು. ಇದೀಗ 108 ಆ್ಯಂಬುಲೆನ್ಸ್ (108 Ambulance) ಚಾಲಕರ ನೇಮಕಾತಿಯಲ್ಲಿ ಅಕ್ರಮ ಆರೋಪ ಕೇಳಿಬಂದಿದೆ. ಜಿವಿಕೆ ಸಂಸ್ಥೆ ವಿರುದ್ಧ ರಾಜ್ಯ ಆ್ಯಂಬುಲೆನ್ಸ್ ಚಾಲಕರ ಸಂಘ ಗಂಭೀರ ಆರೋಪ ಮಾಡಿದೆ. 250ಕ್ಕೂ ಹೆಚ್ಚು ಅಹರ್ತೆ ಇಲ್ಲದ ಚಾಲಕರನ್ನ ನೇಮಕ ಮಾಡಿಕೊಂಡ GVK ಕಂಪನಿ ಕೋಟ್ಯಾಂತರ ರೂ. ಭ್ರಷ್ಟಾಚಾರ ಮಾಡಿದೆ. ಸರ್ಕಾರದ ಆದೇಶ ಧಿಕ್ಕರಿಸಿ, ಒಬ್ಬರಿಂದ 3 ಲಕ್ಷ ರೂ. ಹಣ ಪಡೆದು ನೇಮಕ ಮಾಡಿರುವ ಆರೋಪ ಮಾಡಲಾಗಿದೆ.

ಅನರ್ಹತೆ ಚಾಲಕರ ನೇಮಕ ಹಿನ್ನೆಲೆ ಆ್ಯಂಬುಲೆನ್ಸ್ ಅಪಘಾತದಲ್ಲಿ ಏರಿಕೆ ಆಗುತ್ತಿದೆ. ಮಾನದಂಡ ಹಾಗೂ ಅರ್ಹತೆ, ಅನುಭವದ ಕೊರತೆ ಕಾರಣ ಒಂದೇ ತಿಂಗಳಲ್ಲಿ 10ಕ್ಕೂ ಹೆಚ್ಚು ಆ್ಯಂಬುಲೆನ್ಸ್ ಅಪಘಾತ ಉಂಟಾಗಿವೆ.

108 ಚಾಲಕರಿಗೆ ಇರಬೇಕಾದ ಅಹರ್ತೆಗಳೇನು?

  • SSLC  ವಿದ್ಯಾರ್ಹತೆ ಪೂರ್ಣಗೊಳಿಸರಬೇಕು.
  • DL ಪಡೆದು ಐದು ವರ್ಷ ಪೂರ್ಣಗೊಳಿಸರಬೇಕು.
  • ಹೇವಿ ವೆಹಿಕಲ್ ಚಾಲನಾ ಪರವಾನಗಿಯನ್ನು ಕಡ್ಡಾಯವಾಗಿ ಹೊಂದಿರಬೇಕು.
  • ನೇಮಕಾತಿ ಮಾಡುವ ಸಂಧರ್ಭದಲ್ಲಿ ಚಾಲಕರಿಗೆ ವಾಹನ ಚಾಲನಾ ತರಬೇತಿ ನೀಡಬೇಕು.
  • ನೇಮಕಾತಿಯಲ್ಲಿ ಹಲವು ಮಾನದಂಡ ಅನುಸರಿಸಬೇಕು.

ಆರೋಪವೇನು?

  • ನೇಮಕಾತಿ ಯಾವುದೇ ನಿಯಮ‌ ಪಾಲನೆ ಮಾಡಿಲ್ಲ.
  • ಒಬ್ಬರಿಂದ ಮೂರು ಲಕ್ಷ ರೂ. ಹಣ ಪಡೆದು ನೇಮಕ ಮಾಡಲಾಗಿದೆ.
  • 40 ಜನ ಹಣ ಕೊಟ್ಟಿಲ್ಲವೆಂದು ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ.
  • ಕಮಿಷನರ್ ಆದೇಶದಂತೆ 130 ಜನರ ನೇಮಕ ಮಾಡಿಕೊಳ್ಳಬೇಕು. ಆದರೆ ಚಾಲಕರ ಕೊರತೆ ನೆಪವೊಡ್ಡಿ 250 ಕ್ಕೂ ಅಧಿಕ ಚಾಲಕರ ನೇಮಕ ಮಾಡಿಕೊಳ್ಳಲಾಗಿದೆ.

ನೂತನ 262 ಆ್ಯಂಬುಲೆನ್ಸ್: ಸಿಎಂ ಸಿದ್ದರಾಮಯ್ಯ ಚಾಲನೆ

ರಾಜ್ಯದ ಆರೋಗ್ಯ ಇಲಾಖೆಯ ನೂತನ 262 ಆ್ಯಂಬುಲೆನ್ಸ್​ಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಇತ್ತೀಚೆಗೆ ಚಾಲನೆ ನೀಡಿದ್ದರು. ಕರ್ನಾಟಕದಲ್ಲಿ 108 ಆ್ಯಂಬುಲೆನ್ಸ್ ಸೇವೆಗೆ ಮತ್ತಷ್ಟು ಬಲ ನೀಡಲು 262 ಹೊಸ ಆ್ಯಂಬುಲೆನ್ಸ್ ಮತ್ತು ವೈದ್ಯಕೀಯ ಉಪಕರಣ ಖರೀದಿಸಲು ನಿರ್ಧರಿಸಲಾಗಿತ್ತು. ಅದರಂತೆ ಹೊಸ ಆ್ಯಂಬುಲೆನ್ಸ್ ಸೇವೆ ಚಾಲನೆ ನೀಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ