AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

108 ಆ್ಯಂಬುಲೆನ್ಸ್ ಚಾಲಕರ ನೇಮಕಾತಿಯಲ್ಲಿ ಅಕ್ರಮ ಆರೋಪ: ಒಬ್ಬೊಬ್ಬರಿಂದ 3 ಲಕ್ಷ ರೂ ವಸೂಲಿ?

108 ಆ್ಯಂಬುಲೆನ್ಸ್ ಚಾಲಕರ ನೇಮಕಾತಿಯಲ್ಲಿ ಅಕ್ರಮ ಆರೋಪ ಕೇಳಿಬಂದಿದೆ. ಜಿವಿಕೆ ಸಂಸ್ಥೆ ವಿರುದ್ಧ ರಾಜ್ಯ ಆ್ಯಂಬುಲೆನ್ಸ್ ಚಾಲಕರ ಸಂಘ ಗಂಭೀರ ಆರೋಪ ಮಾಡಿದೆ. ಸರ್ಕಾರದ ಆದೇಶ ಧಿಕ್ಕರಿಸಿ, ಒಬ್ಬರಿಂದ 3 ಲಕ್ಷ ರೂ. ಹಣ ಪಡೆದು ನೇಮಕ ಮಾಡಿರುವ ಆರೋಪ ಕೇಳಿಬಂದಿದೆ.

108 ಆ್ಯಂಬುಲೆನ್ಸ್ ಚಾಲಕರ ನೇಮಕಾತಿಯಲ್ಲಿ ಅಕ್ರಮ ಆರೋಪ: ಒಬ್ಬೊಬ್ಬರಿಂದ 3 ಲಕ್ಷ ರೂ ವಸೂಲಿ?
108 ಆ್ಯಂಬುಲೆನ್ಸ್ (ಸಂಗ್ರಹ ಚಿತ್ರ)
Vinayak Hanamant Gurav
Vinayak Hanamant Gurav| Edited By: |

Updated on: Dec 08, 2023 | 1:18 PM

Share

ಬೆಂಗಳೂರು, ಡಿಸೆಂಬರ್​​ 08: ಇತ್ತೀಚೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ವಿವಿಧ ಸ್ಪರ್ಧಾತ್ಮಕ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿತ್ತು. ಇದೀಗ 108 ಆ್ಯಂಬುಲೆನ್ಸ್ (108 Ambulance) ಚಾಲಕರ ನೇಮಕಾತಿಯಲ್ಲಿ ಅಕ್ರಮ ಆರೋಪ ಕೇಳಿಬಂದಿದೆ. ಜಿವಿಕೆ ಸಂಸ್ಥೆ ವಿರುದ್ಧ ರಾಜ್ಯ ಆ್ಯಂಬುಲೆನ್ಸ್ ಚಾಲಕರ ಸಂಘ ಗಂಭೀರ ಆರೋಪ ಮಾಡಿದೆ. 250ಕ್ಕೂ ಹೆಚ್ಚು ಅಹರ್ತೆ ಇಲ್ಲದ ಚಾಲಕರನ್ನ ನೇಮಕ ಮಾಡಿಕೊಂಡ GVK ಕಂಪನಿ ಕೋಟ್ಯಾಂತರ ರೂ. ಭ್ರಷ್ಟಾಚಾರ ಮಾಡಿದೆ. ಸರ್ಕಾರದ ಆದೇಶ ಧಿಕ್ಕರಿಸಿ, ಒಬ್ಬರಿಂದ 3 ಲಕ್ಷ ರೂ. ಹಣ ಪಡೆದು ನೇಮಕ ಮಾಡಿರುವ ಆರೋಪ ಮಾಡಲಾಗಿದೆ.

ಅನರ್ಹತೆ ಚಾಲಕರ ನೇಮಕ ಹಿನ್ನೆಲೆ ಆ್ಯಂಬುಲೆನ್ಸ್ ಅಪಘಾತದಲ್ಲಿ ಏರಿಕೆ ಆಗುತ್ತಿದೆ. ಮಾನದಂಡ ಹಾಗೂ ಅರ್ಹತೆ, ಅನುಭವದ ಕೊರತೆ ಕಾರಣ ಒಂದೇ ತಿಂಗಳಲ್ಲಿ 10ಕ್ಕೂ ಹೆಚ್ಚು ಆ್ಯಂಬುಲೆನ್ಸ್ ಅಪಘಾತ ಉಂಟಾಗಿವೆ.

108 ಚಾಲಕರಿಗೆ ಇರಬೇಕಾದ ಅಹರ್ತೆಗಳೇನು?

  • SSLC  ವಿದ್ಯಾರ್ಹತೆ ಪೂರ್ಣಗೊಳಿಸರಬೇಕು.
  • DL ಪಡೆದು ಐದು ವರ್ಷ ಪೂರ್ಣಗೊಳಿಸರಬೇಕು.
  • ಹೇವಿ ವೆಹಿಕಲ್ ಚಾಲನಾ ಪರವಾನಗಿಯನ್ನು ಕಡ್ಡಾಯವಾಗಿ ಹೊಂದಿರಬೇಕು.
  • ನೇಮಕಾತಿ ಮಾಡುವ ಸಂಧರ್ಭದಲ್ಲಿ ಚಾಲಕರಿಗೆ ವಾಹನ ಚಾಲನಾ ತರಬೇತಿ ನೀಡಬೇಕು.
  • ನೇಮಕಾತಿಯಲ್ಲಿ ಹಲವು ಮಾನದಂಡ ಅನುಸರಿಸಬೇಕು.

ಆರೋಪವೇನು?

  • ನೇಮಕಾತಿ ಯಾವುದೇ ನಿಯಮ‌ ಪಾಲನೆ ಮಾಡಿಲ್ಲ.
  • ಒಬ್ಬರಿಂದ ಮೂರು ಲಕ್ಷ ರೂ. ಹಣ ಪಡೆದು ನೇಮಕ ಮಾಡಲಾಗಿದೆ.
  • 40 ಜನ ಹಣ ಕೊಟ್ಟಿಲ್ಲವೆಂದು ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ.
  • ಕಮಿಷನರ್ ಆದೇಶದಂತೆ 130 ಜನರ ನೇಮಕ ಮಾಡಿಕೊಳ್ಳಬೇಕು. ಆದರೆ ಚಾಲಕರ ಕೊರತೆ ನೆಪವೊಡ್ಡಿ 250 ಕ್ಕೂ ಅಧಿಕ ಚಾಲಕರ ನೇಮಕ ಮಾಡಿಕೊಳ್ಳಲಾಗಿದೆ.

ನೂತನ 262 ಆ್ಯಂಬುಲೆನ್ಸ್: ಸಿಎಂ ಸಿದ್ದರಾಮಯ್ಯ ಚಾಲನೆ

ರಾಜ್ಯದ ಆರೋಗ್ಯ ಇಲಾಖೆಯ ನೂತನ 262 ಆ್ಯಂಬುಲೆನ್ಸ್​ಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಇತ್ತೀಚೆಗೆ ಚಾಲನೆ ನೀಡಿದ್ದರು. ಕರ್ನಾಟಕದಲ್ಲಿ 108 ಆ್ಯಂಬುಲೆನ್ಸ್ ಸೇವೆಗೆ ಮತ್ತಷ್ಟು ಬಲ ನೀಡಲು 262 ಹೊಸ ಆ್ಯಂಬುಲೆನ್ಸ್ ಮತ್ತು ವೈದ್ಯಕೀಯ ಉಪಕರಣ ಖರೀದಿಸಲು ನಿರ್ಧರಿಸಲಾಗಿತ್ತು. ಅದರಂತೆ ಹೊಸ ಆ್ಯಂಬುಲೆನ್ಸ್ ಸೇವೆ ಚಾಲನೆ ನೀಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್