AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

108 ಆಂಬುಲೆನ್ಸ್​ ಸರ್ವೀಸ್ ಸಾಫ್ಟ್​​ವೇರ್ ಸಮಸ್ಯೆ, ಸರಿಯಾಗಲು ಇನ್ನೂ ಎರಡು ದಿನ ಬೇಕು: ಆರೋಗ್ಯ ಸಚಿವ ಸುಧಾಕರ

ಈ ಸಾಫ್ಟ್​ವೇರ್​ ರೂಪುಗೊಂಡಿದ್ದು 2008ರಲ್ಲಿ. ಸರ್ವೀಸಸ್​​ನಲ್ಲಿ ಬಳಸಿದ ಬೋರ್ಡ್​ ಸರಿಪಡಿಸಲು ಇನ್ನೂ ಎರಡುಮೂರು ದಿನ ಬೇಕಾಗಬಹುದು. ಅದನ್ನು ತರಿಸಲು ಕ್ರಮವಹಿಸಿದ್ದೇವೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದರು.

108 ಆಂಬುಲೆನ್ಸ್​ ಸರ್ವೀಸ್ ಸಾಫ್ಟ್​​ವೇರ್ ಸಮಸ್ಯೆ, ಸರಿಯಾಗಲು ಇನ್ನೂ ಎರಡು ದಿನ ಬೇಕು: ಆರೋಗ್ಯ ಸಚಿವ ಸುಧಾಕರ
ಆರೋಗ್ಯ ಸಚಿವ ಕೆ ಸುಧಾಕರ
TV9 Web
| Edited By: |

Updated on: Sep 25, 2022 | 1:12 PM

Share

ಬೆಂಗಳೂರು: ಕರ್ನಾಟಕ ಹಲವು ಜಿಲ್ಲೆಗಳಲ್ಲಿ ‘108 ಆಂಬುಲೆನ್ಸ್​’ ಸೇವೆ ಸ್ಥಗಿತಗೊಂಡಿದೆ. ತಾಂತ್ರಿಕ ಕಾರಣಗಳಿಂದಾಗಿ ಸೇವೆಯು ಸ್ಥಗಿತಗೊಂಡಿದೆ. ಕಂಟ್ರೋಲ್​ ರೂಮ್​ನ ಸಾಫ್ಟ್​ವೇರ್ ಹಾಗೂ ಹಾರ್ಡ್​​ವೇರ್ ಸರಿಪಡಿಸಿದ ನಂತರ ಆಂಬುಲೆನ್ಸ್​ ಸೇವೆ ಮರುಸ್ಥಾಪಿಸಲಾಗುವುದು ಎಂದು ಆರೋಗ್ಯ ಸಚಿವ ಡಾ ಕೆ.ಸುಧಾಕರ್ (Health Minister Dr K Sudhakar) ಹೇಳಿದರು. ಏಕಾಏಕಿ ಉದ್ಭವಿಸಿರುವ ಈ ಪರಿಸ್ಥಿತಿಗೆ ತಾಂತ್ರಿಕ ಸಮಸ್ಯೆಯೇ ಮುಖ್ಯ ಕಾರಣ. ಸಾಫ್ಟ್​​ವೇರ್​​​ನ​​ ಮದರ್​ಬೋರ್ಡ್​ ಹಾಳಾಗಿದ್ದು, ಅದರ ಬಿಡಿಭಾಗ ಎಲ್ಲಿಯೂ ಸಿಗುತ್ತಿಲ್ಲ ಎಂದು ಅವರು ವಿವರಿಸಿದರು.

ಈ ಸಾಫ್ಟ್​ವೇರ್​ ರೂಪುಗೊಂಡಿದ್ದು 2008ರಲ್ಲಿ. ಸರ್ವೀಸಸ್​​ನಲ್ಲಿ ಬಳಸಿದ ಬೋರ್ಡ್​ ಸರಿಪಡಿಸಲು ಇನ್ನೂ ಎರಡುಮೂರು ದಿನ ಬೇಕಾಗಬಹುದು. ಅದನ್ನು ತರಿಸಲು ಕ್ರಮವಹಿಸಿದ್ದೇವೆ. ಸದ್ಯಕ್ಕೆ ಕಾಲ್​ಸೆಂಟರ್​ ಮೂಲಕ ಕರೆಗಳನ್ನು ಸ್ವೀಕರಿಸಲು ಕ್ರಮ ತೆಗೆದುಕೊಂಡಿದ್ದೇವೆ. ರೋಗಿಗಳ ಸಂಬಂಧಿಕರ ಫೋನ್​​ ಕರೆಗಳನ್ನು ಸ್ವೀಕರಿಸಲಾಗುತ್ತಿದೆ. ಸಪೋರ್ಟ್​ಗಾಗಿ ಸದ್ಯ ಎಚ್​​ಪಿ ಕಂಪನಿಯ ಎಂಜಿನಿಯರ್​ಗಳನ್ನು ಭೇಟಿ ಮಾಡಿ, ಈ ಬಗ್ಗೆ ಮಾಹಿತಿ ಪಡೆಯಲಾಗಿದೆ. ಅವರ ನೆರವು ಪಡೆಯಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದರು.

108 ಆಂಬುಲೆನ್ಸ್​ ವ್ಯವಸ್ಥೆಯು ತುರ್ತುಸೇವೆಯಾಗುತ್ತದೆ. ಶೀಘ್ರ ಸೇವೆಯ ಮರುಸ್ಥಾಪನೆಗೆ ಕ್ರಮತೆಗೆದುಕೊಂಡಿದ್ದೇವೆ. ಸಂಬಂಧಿಸಿದ ತಂತ್ರಜ್ಞರೊಂದಿಗೆ ಅಧಿಕಾರಿಗಳು ಸಭೆ ನಡೆಸಿ ಶೀಘ್ರ ನಮಗೆ ಮಾಹಿತಿ ನೀಡಲಿದ್ದಾರೆ. ಕಾಲ್​ ಸೆಂಟರ್​ಗೆ ಸ್ವತಃ ನಾನೇ ಹೋಗುತ್ತಿದ್ದೇನೆ. ನಮ್ಮ ಎಂಜಿನಿಯರ್ ಜೊತೆಗೆ ಮಾತನಾಡಿ, ಮಧ್ಯಾಹ್ನದ ಒಳಗೆ ವ್ಯವಸ್ಥೆ ಸರಿಪಡಿಸಲು ಪ್ರಯತ್ನಿಸುತ್ತೇವೆ ಎಂದು ಭರವಸೆ ನೀಡಿದರು.

ಸರ್ವರ್​ನ ಮದರ್​ಬೋರ್ಡ್ ಹಾಳಾಗಿರುವ ಕಾರಣ ಜನರ ಕಾಲ್​ಗೆ ಸ್ಪಂದನೆ ಸಿಗಲು ಸರಾಸರಿ 8 ನಿಮಿಷ ಬೇಕಾಗುತ್ತಿದೆ. ಜನರು ಕಾದುಕಾದು ಬೇಸರಗೊಂಡಿದ್ದಾರೆ. ಪ್ರತಿದಿನ 7ರಿಂದ 8 ಸಾವಿರದಷ್ಟು ಕಾಲ್ ರಿಸೀವ್ ಮಾಡುತ್ತೇವೆ. ಆದರೆ ತಾಂತ್ರಿಕ ದೋಷದಿಂದಾಗಿ ಕೇವಲ 2ರಿಂದ 2,500 ದಷ್ಟು ಜನರಿಗೆ ಮಾತ್ರ ಸೌಲಭ್ಯ ಒದಗಿಸಲಾಗುತ್ತಿದೆ. ಬಾಕಿ 5 ಸಾವಿರ ಕರೆಗಳನ್ನು ಸ್ವೀಕರಿಸಲು ಆಗುತ್ತಿಲ್ಲ ಎಂದು ಹೇಳಿದರು.

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ