AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

108 ಆಂಬುಲೆನ್ಸ್​ ಸರ್ವೀಸ್ ಸಾಫ್ಟ್​​ವೇರ್ ಸಮಸ್ಯೆ, ಸರಿಯಾಗಲು ಇನ್ನೂ ಎರಡು ದಿನ ಬೇಕು: ಆರೋಗ್ಯ ಸಚಿವ ಸುಧಾಕರ

ಈ ಸಾಫ್ಟ್​ವೇರ್​ ರೂಪುಗೊಂಡಿದ್ದು 2008ರಲ್ಲಿ. ಸರ್ವೀಸಸ್​​ನಲ್ಲಿ ಬಳಸಿದ ಬೋರ್ಡ್​ ಸರಿಪಡಿಸಲು ಇನ್ನೂ ಎರಡುಮೂರು ದಿನ ಬೇಕಾಗಬಹುದು. ಅದನ್ನು ತರಿಸಲು ಕ್ರಮವಹಿಸಿದ್ದೇವೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದರು.

108 ಆಂಬುಲೆನ್ಸ್​ ಸರ್ವೀಸ್ ಸಾಫ್ಟ್​​ವೇರ್ ಸಮಸ್ಯೆ, ಸರಿಯಾಗಲು ಇನ್ನೂ ಎರಡು ದಿನ ಬೇಕು: ಆರೋಗ್ಯ ಸಚಿವ ಸುಧಾಕರ
ಆರೋಗ್ಯ ಸಚಿವ ಕೆ ಸುಧಾಕರ
TV9 Web
| Edited By: |

Updated on: Sep 25, 2022 | 1:12 PM

Share

ಬೆಂಗಳೂರು: ಕರ್ನಾಟಕ ಹಲವು ಜಿಲ್ಲೆಗಳಲ್ಲಿ ‘108 ಆಂಬುಲೆನ್ಸ್​’ ಸೇವೆ ಸ್ಥಗಿತಗೊಂಡಿದೆ. ತಾಂತ್ರಿಕ ಕಾರಣಗಳಿಂದಾಗಿ ಸೇವೆಯು ಸ್ಥಗಿತಗೊಂಡಿದೆ. ಕಂಟ್ರೋಲ್​ ರೂಮ್​ನ ಸಾಫ್ಟ್​ವೇರ್ ಹಾಗೂ ಹಾರ್ಡ್​​ವೇರ್ ಸರಿಪಡಿಸಿದ ನಂತರ ಆಂಬುಲೆನ್ಸ್​ ಸೇವೆ ಮರುಸ್ಥಾಪಿಸಲಾಗುವುದು ಎಂದು ಆರೋಗ್ಯ ಸಚಿವ ಡಾ ಕೆ.ಸುಧಾಕರ್ (Health Minister Dr K Sudhakar) ಹೇಳಿದರು. ಏಕಾಏಕಿ ಉದ್ಭವಿಸಿರುವ ಈ ಪರಿಸ್ಥಿತಿಗೆ ತಾಂತ್ರಿಕ ಸಮಸ್ಯೆಯೇ ಮುಖ್ಯ ಕಾರಣ. ಸಾಫ್ಟ್​​ವೇರ್​​​ನ​​ ಮದರ್​ಬೋರ್ಡ್​ ಹಾಳಾಗಿದ್ದು, ಅದರ ಬಿಡಿಭಾಗ ಎಲ್ಲಿಯೂ ಸಿಗುತ್ತಿಲ್ಲ ಎಂದು ಅವರು ವಿವರಿಸಿದರು.

ಈ ಸಾಫ್ಟ್​ವೇರ್​ ರೂಪುಗೊಂಡಿದ್ದು 2008ರಲ್ಲಿ. ಸರ್ವೀಸಸ್​​ನಲ್ಲಿ ಬಳಸಿದ ಬೋರ್ಡ್​ ಸರಿಪಡಿಸಲು ಇನ್ನೂ ಎರಡುಮೂರು ದಿನ ಬೇಕಾಗಬಹುದು. ಅದನ್ನು ತರಿಸಲು ಕ್ರಮವಹಿಸಿದ್ದೇವೆ. ಸದ್ಯಕ್ಕೆ ಕಾಲ್​ಸೆಂಟರ್​ ಮೂಲಕ ಕರೆಗಳನ್ನು ಸ್ವೀಕರಿಸಲು ಕ್ರಮ ತೆಗೆದುಕೊಂಡಿದ್ದೇವೆ. ರೋಗಿಗಳ ಸಂಬಂಧಿಕರ ಫೋನ್​​ ಕರೆಗಳನ್ನು ಸ್ವೀಕರಿಸಲಾಗುತ್ತಿದೆ. ಸಪೋರ್ಟ್​ಗಾಗಿ ಸದ್ಯ ಎಚ್​​ಪಿ ಕಂಪನಿಯ ಎಂಜಿನಿಯರ್​ಗಳನ್ನು ಭೇಟಿ ಮಾಡಿ, ಈ ಬಗ್ಗೆ ಮಾಹಿತಿ ಪಡೆಯಲಾಗಿದೆ. ಅವರ ನೆರವು ಪಡೆಯಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದರು.

108 ಆಂಬುಲೆನ್ಸ್​ ವ್ಯವಸ್ಥೆಯು ತುರ್ತುಸೇವೆಯಾಗುತ್ತದೆ. ಶೀಘ್ರ ಸೇವೆಯ ಮರುಸ್ಥಾಪನೆಗೆ ಕ್ರಮತೆಗೆದುಕೊಂಡಿದ್ದೇವೆ. ಸಂಬಂಧಿಸಿದ ತಂತ್ರಜ್ಞರೊಂದಿಗೆ ಅಧಿಕಾರಿಗಳು ಸಭೆ ನಡೆಸಿ ಶೀಘ್ರ ನಮಗೆ ಮಾಹಿತಿ ನೀಡಲಿದ್ದಾರೆ. ಕಾಲ್​ ಸೆಂಟರ್​ಗೆ ಸ್ವತಃ ನಾನೇ ಹೋಗುತ್ತಿದ್ದೇನೆ. ನಮ್ಮ ಎಂಜಿನಿಯರ್ ಜೊತೆಗೆ ಮಾತನಾಡಿ, ಮಧ್ಯಾಹ್ನದ ಒಳಗೆ ವ್ಯವಸ್ಥೆ ಸರಿಪಡಿಸಲು ಪ್ರಯತ್ನಿಸುತ್ತೇವೆ ಎಂದು ಭರವಸೆ ನೀಡಿದರು.

ಸರ್ವರ್​ನ ಮದರ್​ಬೋರ್ಡ್ ಹಾಳಾಗಿರುವ ಕಾರಣ ಜನರ ಕಾಲ್​ಗೆ ಸ್ಪಂದನೆ ಸಿಗಲು ಸರಾಸರಿ 8 ನಿಮಿಷ ಬೇಕಾಗುತ್ತಿದೆ. ಜನರು ಕಾದುಕಾದು ಬೇಸರಗೊಂಡಿದ್ದಾರೆ. ಪ್ರತಿದಿನ 7ರಿಂದ 8 ಸಾವಿರದಷ್ಟು ಕಾಲ್ ರಿಸೀವ್ ಮಾಡುತ್ತೇವೆ. ಆದರೆ ತಾಂತ್ರಿಕ ದೋಷದಿಂದಾಗಿ ಕೇವಲ 2ರಿಂದ 2,500 ದಷ್ಟು ಜನರಿಗೆ ಮಾತ್ರ ಸೌಲಭ್ಯ ಒದಗಿಸಲಾಗುತ್ತಿದೆ. ಬಾಕಿ 5 ಸಾವಿರ ಕರೆಗಳನ್ನು ಸ್ವೀಕರಿಸಲು ಆಗುತ್ತಿಲ್ಲ ಎಂದು ಹೇಳಿದರು.

Follow Us
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ