AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ದೀಪಾವಳಿ ಪಟಾಕಿಯಿಂದ ಈವರೆಗೆ 115 ಜನರಿಗೆ ಗಾಯ

ಬೆಂಗಳೂರಿನಲ್ಲಿ ದೀಪಾವಳಿ ಹಬ್ಬದ ಸಮಯದಲ್ಲಿ ಪಟಾಕಿ ಸಿಡಿತದಿಂದ 115 ಜನರು ಗಾಯಗೊಂಡಿದ್ದಾರೆ. ಮಿಂಟೋ ಮತ್ತು ನಾರಾಯಣ ನೇತ್ರಾಲಯಗಳಲ್ಲಿ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ. ಹೆಚ್ಚಿನ ಗಾಯಾಳುಗಳು ಮಕ್ಕಳಾಗಿದ್ದು, ಕಣ್ಣುಗಳಿಗೆ ಗಾಯಗಳಾಗಿವೆ.

ಬೆಂಗಳೂರಿನಲ್ಲಿ ದೀಪಾವಳಿ ಪಟಾಕಿಯಿಂದ ಈವರೆಗೆ 115 ಜನರಿಗೆ ಗಾಯ
ಸಾಂದರ್ಭಿಕ ಚಿತ್ರ
Follow us
Kiran Surya
| Updated By: ವಿವೇಕ ಬಿರಾದಾರ

Updated on:Nov 03, 2024 | 12:55 PM

ಬೆಂಗಳೂರು, ನವೆಂಬರ್​ 03: ಕರ್ನಾಟಕದಾದ್ಯಂತ ಸಂಭ್ರಮ-ಸಡಗರದಿಂದ ದೀಪಾವಳಿ (Deepavali) ಹಬ್ಬವನ್ನು ಆಚರಿಸಲಾಯಿತು. ದೀಪಾವಳಿ ಹಬ್ಬದ (Deepavali Festival) ಸಂಭ್ರಮದಲ್ಲಿ ಪಟಾಕಿ ಸಿಡಿಸುವಾಗ ಹಲವರು ಗಾಯಗೊಂಡಿದ್ದಾರೆ. ಕಳೆದ‌ ವರ್ಷಕ್ಕಿಂತ ಈ ವರ್ಷ ಪಟಾಕಿ ಸಿಡಿತದಿಂದ ಗಾಯಗೊಂಡ ಪ್ರಕರಣ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಈವರಗೆ 115 ಜನರು ಪಟಾಕಿಯಿಂದ ಗಾಯಗೊಂಡಿದ್ದಾರೆ. ಮಿಂಟೋ ಹಾಗೂ ನಾರಾಯಣ ನೇತ್ರಾಲಯ ಆಸ್ಪತ್ರೆಯಲ್ಲಿ ಒಟ್ಟು 115 ಕೇಸ್​ಗಳು ದಾಖಲಾಗಿವೆ.

ನಾರಾಯಣ ನೇತ್ರಾಲಯ ಆಸ್ಪತ್ರೆ ಒಂದರಲ್ಲೇ ಮೂರು ದಿನದಲ್ಲಿ 66 ಕೇಸ್​ಗಳು ದಾಖಲಾಗಿವೆ. ಇದರಲ್ಲಿ 49 ಗಂಡು ಮಕ್ಕಳು, 17 ಹೆಣ್ಣು ಮಕ್ಕಳಿದ್ದಾರೆ. 33 ಜನ ವಯಸ್ಕರಿಗೆ, 33 ಜನ ಮಕ್ಕಳಿಗೆ ಪಟಾಕಿ ಕಿಡಿ ಸಿಡಿದು ಗಾಯವಾಗಿದೆ. 10 ವರ್ಷದೊಳಗಿನ 14 ಮಕ್ಕಳು ಪಟಾಕಿಯಿಂದ ಗಾಯಗೊಂಡಿದ್ದಾರೆ. 10-18 ವರ್ಷದೊಳಗಿನ 19 ಜನ ಮಕ್ಕಳಿಗೆ ಗಾಯವಾಗಿದೆ. ಪಟಾಕಿಯಿಂದ ಗಂಡು ಮಕ್ಕಳೇ ಹೆಚ್ಚು ಗಾಯಗೊಂಡಿದ್ದಾರೆ. ಪಟಾಕಿ ಹೊಡೆಯುವ ವೇಳೆ ಅಕ್ಕಪಕ್ಕದಲ್ಲಿದ್ದ 33 ಮಂದಿಗೆ ಗಾಯವಾಗಿದೆ. ನಾಲ್ಕು ಮಂದಿಗೆ ಈಗಾಗಲೇ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ.

ಆಕ್ಟೋಬರ್ -31 ರಂದು 14 ಕೇಸ್

ನವೆಂಬರ್- 1 ರಂದು 27 ಕೇಸ್

ನವೆಂಬರ್- 2 ರಂದು 25

ಮಿಂಟೋ ಆಸ್ಪತ್ರಗೆ ಇಲ್ಲಿಯವರೆಗೆ 49 ಜನರು ದಾಖಲಾಗಿದ್ದಾರೆ. 49ರಲ್ಲಿ 27 ಮಂದಿ ಪಟಾಕಿ ಸಿಡಿಸುವಾಗ ಗಾಯ ಮಾಡಿಕೊಂಡಿದ್ದಾರೆ. 22 ಮಂದಿ ಅಕ್ಕಪಕ್ಕ ಇದ್ದವರು ಪಟಾಕಿ ಸಿಡಿತಕ್ಕೆ ಒಳಗಾಗಿದ್ದಾರೆ. ಶನಿವಾರ ಒಂದೇ ದಿನ 20 ಮಂದಿ ದಾಖಲಾಗಿದ್ದಾರೆ. 20ರಲ್ಲಿ 15 ಜನ ಮಕ್ಕಳು ಗಾಯಗೊಂಡಿದ್ದಾರೆ.

ಇದನ್ನೂ ಓದಿ: ದೀಪಾವಳಿಯಂದೇ ಚಿಕ್ಕಮಗಳೂರಿನ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ರೋಗಿಗಳು ಶಿಫ್ಟ್‌

35 ಮಂದಿ‌ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ. 14 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪಟಾಕಿಯಿಂದ 32 ಮಕ್ಕಳು ಕಣ್ಣಿಗೆ ಏಟು ಮಾಡಿಕೊಂಡಿದ್ದಾರೆ. 17 ಮಂದಿ ವಯಸ್ಕರೂ ಸಹ ಪಟಾಕಿ‌ ಸಿಡಿತಕ್ಕೆ ಒಳಗಾಗಿದ್ದಾರೆ. 23 ಮಂದಿಗೆ ಪಟಾಕಿಯಿಂದ ಗಂಭೀರ ಸಮಸ್ಯೆಯಾಗಿದೆ. 26 ಮಂದಿಗೆ ಸಣ್ಣ ಪ್ರಮಾಣದ ಗಾಯವಾಗಿದೆ. ನಾಲ್ವರಿಗೆ ಈಗಾಗಲೇ ಸರ್ಜರಿ‌ ಮಾಡಲಾಗಿದೆ. ಇನ್ನೂ 10 ಮಂದಿಗೆ ಸರ್ಜರಿಯ ಅವಶ್ಯಕತೆಯಿದೆ.

ಮಿಂಟೋ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಸುರೇಶ್ ಬಾಬು ಮಾತನಾಡಿ, ಪಟಾಕಿ ಸಿಡಿದು ಗಾಯಗೊಂಡು 49 ಜನರು ಚಿಕಿತ್ಸೆಗೆ ಬಂದಿದ್ದಾರೆ. 49 ಜನರ ಪೈಕಿ ಒಟ್ಟು 10 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಾಲ್ವರಿಗೆ ಸರ್ಜರಿ ಮಾಡಲಾಗಿದೆ. ಅತಿ ಹೆಚ್ಚು ಹೂಕುಂಡ ಹಚ್ಚುವಾಗ ತೊಂದರೆಯಾಗಿದೆ. ಪಟಾಕಿಯಿಂದಾಗಿ ಒಟ್ಟು 32 ಜನ ಮಕ್ಕಳಿಗೆ ಕಣ್ಣಿಗೆ ಗಾಯ. ಇಂದು ಮತ್ತು ನಾಳೆ ಮತ್ತಷ್ಟು ಪ್ರಕರಣ ಬರುವ ಸಾಧ್ಯತೆ ಇದೆ ಎಂದು ಹೇಳಿದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:21 pm, Sun, 3 November 24

ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ