ಸ್ವಸಹಾಯ ಸಂಘಗಳಿಂದ ಸಿದ್ಧವಾಯ್ತು 13 ಲಕ್ಷ ಮಾಸ್ಕ್

ಬೆಂಗಳೂರು: ಕೊರೊನಾ ಇಂಚಿಂಚಾಗಿ ದೇಶದೆಲ್ಲೆಡೆ ಹರಡುತ್ತಿದೆ. ಈ ಸಾಂಕ್ರಮಿಕ ರೋಗಕ್ಕೆ ಪ್ರತಿಯೊಬ್ಬ ಪ್ರಜೆಯೂ ಬೆಚ್ಚಿಬಿದ್ದಿದ್ದಾನೆ. ಈ ಸೋಂಕಿನಿಂದ ನಮನ್ನು ನಾವು ಕಾಪಾಡಿಕೊಳ್ಳಲು ಪ್ರತಿಯೊಬ್ಬರು ಮಾಸ್ಕ್ ಬಳಸುವುದು ಅತಿ ಮುಖ್ಯ. ಹೀಗಾಗಿ ಮಾಸ್ಕ್​ಗಳ ಬೇಡಿಕೆ ಹೆಚ್ಚಿದೆ. ಈ ನಿಟ್ಟಿನಲ್ಲಿ ಸ್ವಸಹಾಯ ಸಂಘಗಳು 13 ಲಕ್ಷ ಮಾಸ್ಕ್ ತಯಾರಿಸಿವೆ. ಮಾಸ್ಕ್​ಗಳ ಅಭಾವ ತಡೆಯಲು ಸಂಜೀವಿನಿ ಸಂಸ್ಥೆಯ ಸಹಯೋಗದಲ್ಲಿ ಮಾಸ್ಕ್ ತಯಾರಿಕೆಯ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಸ್ವಸಹಾಯ ಸಂಘಗಳಿಂದ 13 ಲಕ್ಷ ಮಾಸ್ಕ್ ತಯಾರಿ ಮಾಡಲಾಗಿದೆ. ಅಲ್ಲದೆ ಪಿಪಿಇ ಗೌನ್‌ಗಳನ್ನು ಸಹ ಸಿದ್ಧಪಡಿಸಲಾಗುತ್ತಿದೆ. […]

ಸ್ವಸಹಾಯ ಸಂಘಗಳಿಂದ ಸಿದ್ಧವಾಯ್ತು 13 ಲಕ್ಷ ಮಾಸ್ಕ್
ಸಾಧು ಶ್ರೀನಾಥ್​

Updated on: Apr 22, 2020 | 1:44 PM

ಬೆಂಗಳೂರು: ಕೊರೊನಾ ಇಂಚಿಂಚಾಗಿ ದೇಶದೆಲ್ಲೆಡೆ ಹರಡುತ್ತಿದೆ. ಈ ಸಾಂಕ್ರಮಿಕ ರೋಗಕ್ಕೆ ಪ್ರತಿಯೊಬ್ಬ ಪ್ರಜೆಯೂ ಬೆಚ್ಚಿಬಿದ್ದಿದ್ದಾನೆ. ಈ ಸೋಂಕಿನಿಂದ ನಮನ್ನು ನಾವು ಕಾಪಾಡಿಕೊಳ್ಳಲು ಪ್ರತಿಯೊಬ್ಬರು ಮಾಸ್ಕ್ ಬಳಸುವುದು ಅತಿ ಮುಖ್ಯ. ಹೀಗಾಗಿ ಮಾಸ್ಕ್​ಗಳ ಬೇಡಿಕೆ ಹೆಚ್ಚಿದೆ. ಈ ನಿಟ್ಟಿನಲ್ಲಿ ಸ್ವಸಹಾಯ ಸಂಘಗಳು 13 ಲಕ್ಷ ಮಾಸ್ಕ್ ತಯಾರಿಸಿವೆ.

ಮಾಸ್ಕ್​ಗಳ ಅಭಾವ ತಡೆಯಲು ಸಂಜೀವಿನಿ ಸಂಸ್ಥೆಯ ಸಹಯೋಗದಲ್ಲಿ ಮಾಸ್ಕ್ ತಯಾರಿಕೆಯ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಸ್ವಸಹಾಯ ಸಂಘಗಳಿಂದ 13 ಲಕ್ಷ ಮಾಸ್ಕ್ ತಯಾರಿ ಮಾಡಲಾಗಿದೆ. ಅಲ್ಲದೆ ಪಿಪಿಇ ಗೌನ್‌ಗಳನ್ನು ಸಹ ಸಿದ್ಧಪಡಿಸಲಾಗುತ್ತಿದೆ. ಈ ಮಾಸ್ಕ್​ಗಳನ್ನು ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಖರೀದಿಸಿ ಆ ವ್ಯಾಪ್ತಿಯಲ್ಲಿ ಹಂಚಿಕೆ ಮಾಡಲಾಗುತ್ತಿದೆ ಎಂದು ವಿಧಾನಸೌಧದಲ್ಲಿ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us