AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಮಳೆಯಿಂದಾಗಿ 13 ಜನರು ಸತ್ತಿದ್ದಾರೆ, ಈಗ ಇಂಥ ಸಂಭ್ರಮ ಬೇಕಿತ್ತೆ? ಕಾಂಗ್ರೆಸ್​ಗೆ ರವಿಕುಮಾರ್​​ ಪ್ರಶ್ನೆ

ಇಂದು ರಾಜ್ಯದಲ್ಲಿ ಮಳೆಯಿಂದಾಗಿ 13 ಜನ ಸಾವನ್ನಪ್ಪಿದ್ದಾರೆ, ಸಾವಿರಾರು ಜನ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಬಂದು ಸಂಭ್ರಮ ಆಚರಿಸಬೇಕಿತ್ತಾ ಎಂದು ಪ್ರಶ್ನಿಸಿದರು.

ಕರ್ನಾಟಕದಲ್ಲಿ ಮಳೆಯಿಂದಾಗಿ 13 ಜನರು ಸತ್ತಿದ್ದಾರೆ, ಈಗ ಇಂಥ ಸಂಭ್ರಮ ಬೇಕಿತ್ತೆ? ಕಾಂಗ್ರೆಸ್​ಗೆ ರವಿಕುಮಾರ್​​ ಪ್ರಶ್ನೆ
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್
TV9 Web
| Edited By: |

Updated on: Aug 03, 2022 | 12:43 PM

Share

ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆಯಿಂದಾಗಿ 13 ಜನ ಮೃತಪಟ್ಟಿದ್ದಾರೆ. ಮಳೆ, (rain) ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾದವರಿಗೆ ಸರ್ಕಾರ ನೆರವು ನೀಡಲಿದೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಹೇಳಿಕೆ ನೀಡಿದರು. ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಭೇಟಿ ನೀಡಲಿದ್ದಾರೆ. ಮಳೆಯಿಂದಾಗಿ ಸಾವಿರಾರರು ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯಕ್ಕೆ ರಾಹುಲ್ ಗಾಂಧಿ ಬಂದಿದ್ದಾರೆ. ಸಿದ್ದರಾಮಯ್ಯ ಜನ್ಮದಿನ ಕಾರ್ಯಕ್ರಮ ಆಚರಿಸಿಕೊಳ್ತಿದ್ದಾರೆ. ಜನ್ಮದಿನ ಮಾಡಿಕೊಳ್ಳಲಿ, ನಾನು ಶುಭ ಕೋರುತ್ತೇನೆ. ರಾಜ್ಯದಲ್ಲಿ ಈಗ ಸೂತಕದ ವಾತಾವರಣ ಇದೆ. ಈ ಸಂದರ್ಭದಲ್ಲಿ ಸಂಭ್ರಮ ಬೇಕಿತ್ತಾ ಎಂದು ರವಿಕುಮಾರ್ ಪ್ರಶ್ನಿಸಿದರು.

ಇದನ್ನೂ ಓದಿ: Karnataka Rains Live: ಕರ್ನಾಟಕದಲ್ಲಿ ಮುಂದುವರೆದ ಮಳೆ: ಸಾವಿರಾರು ವರ್ಷ ಇತಿಹಾಸವಿರೋ ಶ್ರವಣಬೆಳಗೊಳ ಕೋಟೆ ಕುಸಿತ

ನಾವು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಕಾರ್ಯಕ್ರಮ ಆಯೋಜಿಸಿದ್ದೆವು. ಮಂಗಳೂರು ಘಟನೆ ನಡೆದ ಬಳಿಕ ರಾತ್ರಿ ಸುದ್ದಿಗೋಷ್ಟಿ ಕರೆದು ರದ್ದು ಮಾಡಿದೆವು. ಇಂದು 13ಜನ ಸಾವನ್ನಪ್ಪಿದ್ದಾರೆ, ಸಾವಿರಾರು ಜನ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಬಂದು ಸಂಭ್ರಮ ಆಚರಿಸಬೇಕಿತ್ತಾ. ಅದನ್ನು ಸ್ವಲ್ಪ ಯೋಚಿಸಲಿ ಎಂದರು. ಬಿಜೆಪಿಗೆ ಪರ್ಯಾಯವಾಗಿ ಹಿಂದು ಸಂಘಟನೆ ಪಕ್ಷ ಕಟ್ಟುವ ವಿಚಾರ ಹಿನ್ನೆಲೆ ದೇಶದಲ್ಲಿ ಅನೇಕ ಪಕ್ಷಗಳು ಇವೆ. ಆದ್ರೆ ಪಕ್ಷ ಹೊಸದಾಗಿ ರಾಜ್ಯದಲ್ಲಿ ಕಟ್ಟುವ ವಿಚಾರ ನನ್ನ ಗಮನಕ್ಕೆ ಇಲ್ಲ. ಹೊಸ ಪಾರ್ಟಿ ಯಾರೇ ಮಾಡಿದ್ರೂ, ಅದರಲ್ಲಿ ಯಾರು ಇದ್ದಾರೆ, ಎಂಥವರು ಇದ್ದಾರೆ, ಅವರ ಯೋಜನೆ ಏನು ಇದೆಲ್ಲಾ ಮುಖ್ಯವಾಗುತ್ತದೆ ಎಂದು ಹೇಳಿದರು.

ಕರ್ನಾಟಕ 75 ಲಕ್ಷ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಗುರಿ

ಭಾರತವು ಸ್ವಾತಂತ್ರ್ಯ ಪಡೆದು 75 ವರ್ಷಗಳಾದ ಹಿನ್ನೆಲೆಯಲ್ಲಿ ನಡೆಯುತ್ತಿರುವ ‘ಆಜಾದಿ ಕಾ ಅಮೃತ್ ಮಹೋತ್ಸವ್’ (ಸ್ವಾತಂತ್ರ್ಯದ ಅಮೃತ ಮಹೋತ್ಸವ) ಕಾರ್ಯಕ್ರಮಗಳ ಭಾಗವಾಗಿ ದೇಶದ ಎಲ್ಲ ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು. ಭಾರತದ 20 ಕೋಟಿ ಮನೆಗಳಲ್ಲಿ ರಾಷ್ಟ್ರಧ್ವಜ ಪಟಪಟಿಸುವ ನಿರೀಕ್ಷೆಯಿದ್ದು, ಕರ್ನಾಟಕದ 75 ಲಕ್ಷ ಮನೆಗಳ ಮೇಲೆ ಆಗಸ್ಟ್ 15ರಂದು ರಾಷ್ಟ್ರಧ್ವಜ ಹಾರಿಸಲಾಗುವುದು ಎಂದು ಬಿಜೆಪಿ ಕರ್ನಾಟಕ ಘಟಕದ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಹೇಳಿದರು.

ಬೆಂಗಳೂರಿನಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲಾ ನಾಡಹಬ್ಬಗಳಿಂದ ವಿಜೃಂಭಣೆಯಿಂದ ಸ್ವಾತಂತ್ರ್ಯ ದಿನಾಚರಣೆ ಮಾಡಲು ತೀರ್ಮಾನಿಸಲಾಗಿದೆ. 312 ಮಂಡಲಗಳಲ್ಲಿ, 2500 ಶಕ್ತಿ ಕೇಂದ್ರ, ಮಹಾಶಕ್ತಿ ಕೇಂದ್ರಗಳಲ್ಲಿ, ಪಟ್ಟಣ ಪಂಚಾಯತ್, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಧ್ವಜ ಹಾರಿಸುವ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ