AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವಿನಲ್ಲೂ ಸಾರ್ಥಕತೆ ಮೆರದ ಕೃತಿ: 9 ಜನರ ಪ್ರಾಣ ಉಳಿಸಿದ 14 ವರ್ಷದ ಬಾಲಕಿ

ಆಟ ಆಡುವಾಗ ಟೆರೇಸ್ ಮೇಲಿಂದ ಬಿದ್ದು ಮೆದುಳು ನಿಷ್ಕ್ರಯಗೊಂಡಿದ್ದ 14 ವರ್ಷ ಮಗಳ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಪೋಷಕರು ಸಾರ್ಥಕತೆ ಮೆರದಿದ್ದಾರೆ.

ಸಾವಿನಲ್ಲೂ ಸಾರ್ಥಕತೆ ಮೆರದ ಕೃತಿ: 9 ಜನರ ಪ್ರಾಣ ಉಳಿಸಿದ 14 ವರ್ಷದ ಬಾಲಕಿ
ಅಂಗಾಂಗ ದಾನ ಮಾಡಿದ ಕೃತಿ
Follow us
ವಿವೇಕ ಬಿರಾದಾರ
|

Updated on: May 31, 2023 | 1:57 PM

ಬೆಂಗಳೂರು: ಆಟ ಆಡುವಾಗ ಟೆರೇಸ್ ಮೇಲಿಂದ ಬಿದ್ದು ಮೆದುಳು ನಿಷ್ಕ್ರಿಯಗೊಂಡಿದ್ದ (Brain Dead) 14 ವರ್ಷ ಮಗಳ ಅಂಗಾಂಗಗಳನ್ನು ದಾನ (Organs Donet) ಮಾಡುವ ಮೂಲಕ ಪೋಷಕರು ಸಾರ್ಥಕತೆ ಮೆರದಿದ್ದಾರೆ. ಕೃತಿ ಜೈನ್‌ ಮೃತ ಬಾಲಕಿ. ವೀರೇಂದ್ರ ಕುಮಾರ್‌ ಜೈನ್‌ ಮತ್ತು ಮೋನಿಕಾ ವೀರೇಂದ್ರ ಕುಮಾರ್‌ ಜೈನ್‌ ದಂಪತಿಯ ಪ್ರೀತಿಯ ಮಗಳು ಕೃತಿ ಜೈನ್‌ (14) ಬಾಲ್ಡ್‌ವಿನ್‌ ಬಾಲಕಿಯರ ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದಳು. ಬಾಲಕಿ ಮೇ 24 ರಂದು ಸಂಜೆ ನಗರ ಕಾಟನ್‌ಪೇಟೆಯಲ್ಲಿರುವ ತನ್ನ ಕುಟುಂಬದ ಮನೆಯ ಟೆರೇಸ್‌ನಲ್ಲಿ ತನ್ನ ಸೋದರಸಂಬಂಧಿಗಳೊಂದಿಗೆ ಆಟವಾಡುತ್ತಿದ್ದಳು.

ಈ ವೇಳೆ ಕೃತಿ 8 ರಿಂದ 10 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದಾಳೆ. ತಕ್ಷಣವೇ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ತೀರ್ವವಾಗಿ ಗಾಯಗೊಂಡಿದ್ದ ಕೃತಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೃತಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದೆ ಎಂದು ಮೇ 28 ರಂದು ಬಿಜಿಎಸ್​ ಗ್ಲೆನೆಗಲ್ಸ್ ಗ್ಲೋಬಲ್ ಆಸ್ಪತ್ರೆಯ ವೈದ್ಯರು ಪೋಷಕರಿಗೆ ತಿಳಿಸಿದ್ದಾರೆ.

ಬಳಿಕ ಪೊಷಕರು ಕೃತಿಯ ಅಂಗಾಗಳನ್ನು ದಾನ ಮಾಡಲು ನಿಶ್ಚಯಿಸಿದ್ದಾರೆ. ನಂತರ ಬಿಜಿಎಸ್​​ ಗ್ಲೆನೆಗಲ್ಸ್ ಗ್ಲೋಬಲ್ ಆಸ್ಪತ್ರೆಯು ಕೃತಿಯ ಶ್ವಾಸಕೋಶಗಳು, ಯಕೃತ್ತು, ಮೂತ್ರಪಿಂಡಗಳು, ಹೃದಯ ಕವಾಟಗಳು ಮತ್ತು ಕಾರ್ನಿಯಾಗಳನ್ನು ಯಶಸ್ವಿಯಾಗಿ ಕಸಿ ಮಾಡಿದ್ದಾರೆ. ಶ್ವಾಸಕೋಶವನ್ನು ಚೆನ್ನೈಗೆ ಕಳಸಲಾಯಿತು. ಉಳಿದ ಅಂಗಗಳನ್ನು ರಾಜ್ಯದ ವಿವಿಧ ರೋಗಿಗಳಿಗೆ ಅಳವಡಿಸಲಾಗಿದೆ. ಒಟ್ಟಿನಲ್ಲಿ 9 ರೋಗಿಗಳ ಪ್ರಾಣ ಉಳಿದಿದೆ.

ಈ ಬಗ್ಗೆ ಬಿಜಿಎಸ್ ಗ್ಲೆನೆಗಲ್ಸ್ ಗ್ಲೋಬಲ್ ಆಸ್ಪತ್ರೆಯ ಮುಖ್ಯ ಮುಖ್ಯ ಶೋಕ ಸಮಾಲೋಚಕಿ ಮತ್ತು ಕಸಿ ಸಂವಾಹಕಿ ಸರಳಾ ಅನಂತರಾಜ್ ಮಾತನಾಡಿ ಅವರು ಜೈನ ಕುಟುಂಬಕ್ಕೆ ಕೃತಜ್ಞತೆ ಸಲ್ಲಿಸಿದರು. ಇಂತಹ ದುರಂತದ ಸಂದರ್ಭದಲ್ಲಿ ಕುಟುಂಬದ ಉದಾರತೆ ಗಮನಾರ್ಹವಾದುದು. ಕೃತಿಯ ಅಂಗಾಂಗಳ ಮೂಲಕ 9 ಜೀವಗಳ ಪ್ರಾಣ ಉಳಿದಿದೆ ಎಂದು ಹೇಳಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!