AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವಿನಲ್ಲೂ ಸಾರ್ಥಕತೆ ಮೆರದ ಕೃತಿ: 9 ಜನರ ಪ್ರಾಣ ಉಳಿಸಿದ 14 ವರ್ಷದ ಬಾಲಕಿ

ಆಟ ಆಡುವಾಗ ಟೆರೇಸ್ ಮೇಲಿಂದ ಬಿದ್ದು ಮೆದುಳು ನಿಷ್ಕ್ರಯಗೊಂಡಿದ್ದ 14 ವರ್ಷ ಮಗಳ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಪೋಷಕರು ಸಾರ್ಥಕತೆ ಮೆರದಿದ್ದಾರೆ.

ಸಾವಿನಲ್ಲೂ ಸಾರ್ಥಕತೆ ಮೆರದ ಕೃತಿ: 9 ಜನರ ಪ್ರಾಣ ಉಳಿಸಿದ 14 ವರ್ಷದ ಬಾಲಕಿ
ಅಂಗಾಂಗ ದಾನ ಮಾಡಿದ ಕೃತಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: May 31, 2023 | 1:57 PM

Share

ಬೆಂಗಳೂರು: ಆಟ ಆಡುವಾಗ ಟೆರೇಸ್ ಮೇಲಿಂದ ಬಿದ್ದು ಮೆದುಳು ನಿಷ್ಕ್ರಿಯಗೊಂಡಿದ್ದ (Brain Dead) 14 ವರ್ಷ ಮಗಳ ಅಂಗಾಂಗಗಳನ್ನು ದಾನ (Organs Donet) ಮಾಡುವ ಮೂಲಕ ಪೋಷಕರು ಸಾರ್ಥಕತೆ ಮೆರದಿದ್ದಾರೆ. ಕೃತಿ ಜೈನ್‌ ಮೃತ ಬಾಲಕಿ. ವೀರೇಂದ್ರ ಕುಮಾರ್‌ ಜೈನ್‌ ಮತ್ತು ಮೋನಿಕಾ ವೀರೇಂದ್ರ ಕುಮಾರ್‌ ಜೈನ್‌ ದಂಪತಿಯ ಪ್ರೀತಿಯ ಮಗಳು ಕೃತಿ ಜೈನ್‌ (14) ಬಾಲ್ಡ್‌ವಿನ್‌ ಬಾಲಕಿಯರ ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದಳು. ಬಾಲಕಿ ಮೇ 24 ರಂದು ಸಂಜೆ ನಗರ ಕಾಟನ್‌ಪೇಟೆಯಲ್ಲಿರುವ ತನ್ನ ಕುಟುಂಬದ ಮನೆಯ ಟೆರೇಸ್‌ನಲ್ಲಿ ತನ್ನ ಸೋದರಸಂಬಂಧಿಗಳೊಂದಿಗೆ ಆಟವಾಡುತ್ತಿದ್ದಳು.

ಈ ವೇಳೆ ಕೃತಿ 8 ರಿಂದ 10 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದಾಳೆ. ತಕ್ಷಣವೇ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ತೀರ್ವವಾಗಿ ಗಾಯಗೊಂಡಿದ್ದ ಕೃತಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೃತಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದೆ ಎಂದು ಮೇ 28 ರಂದು ಬಿಜಿಎಸ್​ ಗ್ಲೆನೆಗಲ್ಸ್ ಗ್ಲೋಬಲ್ ಆಸ್ಪತ್ರೆಯ ವೈದ್ಯರು ಪೋಷಕರಿಗೆ ತಿಳಿಸಿದ್ದಾರೆ.

ಬಳಿಕ ಪೊಷಕರು ಕೃತಿಯ ಅಂಗಾಗಳನ್ನು ದಾನ ಮಾಡಲು ನಿಶ್ಚಯಿಸಿದ್ದಾರೆ. ನಂತರ ಬಿಜಿಎಸ್​​ ಗ್ಲೆನೆಗಲ್ಸ್ ಗ್ಲೋಬಲ್ ಆಸ್ಪತ್ರೆಯು ಕೃತಿಯ ಶ್ವಾಸಕೋಶಗಳು, ಯಕೃತ್ತು, ಮೂತ್ರಪಿಂಡಗಳು, ಹೃದಯ ಕವಾಟಗಳು ಮತ್ತು ಕಾರ್ನಿಯಾಗಳನ್ನು ಯಶಸ್ವಿಯಾಗಿ ಕಸಿ ಮಾಡಿದ್ದಾರೆ. ಶ್ವಾಸಕೋಶವನ್ನು ಚೆನ್ನೈಗೆ ಕಳಸಲಾಯಿತು. ಉಳಿದ ಅಂಗಗಳನ್ನು ರಾಜ್ಯದ ವಿವಿಧ ರೋಗಿಗಳಿಗೆ ಅಳವಡಿಸಲಾಗಿದೆ. ಒಟ್ಟಿನಲ್ಲಿ 9 ರೋಗಿಗಳ ಪ್ರಾಣ ಉಳಿದಿದೆ.

ಈ ಬಗ್ಗೆ ಬಿಜಿಎಸ್ ಗ್ಲೆನೆಗಲ್ಸ್ ಗ್ಲೋಬಲ್ ಆಸ್ಪತ್ರೆಯ ಮುಖ್ಯ ಮುಖ್ಯ ಶೋಕ ಸಮಾಲೋಚಕಿ ಮತ್ತು ಕಸಿ ಸಂವಾಹಕಿ ಸರಳಾ ಅನಂತರಾಜ್ ಮಾತನಾಡಿ ಅವರು ಜೈನ ಕುಟುಂಬಕ್ಕೆ ಕೃತಜ್ಞತೆ ಸಲ್ಲಿಸಿದರು. ಇಂತಹ ದುರಂತದ ಸಂದರ್ಭದಲ್ಲಿ ಕುಟುಂಬದ ಉದಾರತೆ ಗಮನಾರ್ಹವಾದುದು. ಕೃತಿಯ ಅಂಗಾಂಗಳ ಮೂಲಕ 9 ಜೀವಗಳ ಪ್ರಾಣ ಉಳಿದಿದೆ ಎಂದು ಹೇಳಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್