AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವಿನಲ್ಲೂ ಸಾರ್ಥಕತೆ ಮೆರದ ಕೃತಿ: 9 ಜನರ ಪ್ರಾಣ ಉಳಿಸಿದ 14 ವರ್ಷದ ಬಾಲಕಿ

ಆಟ ಆಡುವಾಗ ಟೆರೇಸ್ ಮೇಲಿಂದ ಬಿದ್ದು ಮೆದುಳು ನಿಷ್ಕ್ರಯಗೊಂಡಿದ್ದ 14 ವರ್ಷ ಮಗಳ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಪೋಷಕರು ಸಾರ್ಥಕತೆ ಮೆರದಿದ್ದಾರೆ.

ಸಾವಿನಲ್ಲೂ ಸಾರ್ಥಕತೆ ಮೆರದ ಕೃತಿ: 9 ಜನರ ಪ್ರಾಣ ಉಳಿಸಿದ 14 ವರ್ಷದ ಬಾಲಕಿ
ಅಂಗಾಂಗ ದಾನ ಮಾಡಿದ ಕೃತಿ
ವಿವೇಕ ಬಿರಾದಾರ
|

Updated on: May 31, 2023 | 1:57 PM

Share

ಬೆಂಗಳೂರು: ಆಟ ಆಡುವಾಗ ಟೆರೇಸ್ ಮೇಲಿಂದ ಬಿದ್ದು ಮೆದುಳು ನಿಷ್ಕ್ರಿಯಗೊಂಡಿದ್ದ (Brain Dead) 14 ವರ್ಷ ಮಗಳ ಅಂಗಾಂಗಗಳನ್ನು ದಾನ (Organs Donet) ಮಾಡುವ ಮೂಲಕ ಪೋಷಕರು ಸಾರ್ಥಕತೆ ಮೆರದಿದ್ದಾರೆ. ಕೃತಿ ಜೈನ್‌ ಮೃತ ಬಾಲಕಿ. ವೀರೇಂದ್ರ ಕುಮಾರ್‌ ಜೈನ್‌ ಮತ್ತು ಮೋನಿಕಾ ವೀರೇಂದ್ರ ಕುಮಾರ್‌ ಜೈನ್‌ ದಂಪತಿಯ ಪ್ರೀತಿಯ ಮಗಳು ಕೃತಿ ಜೈನ್‌ (14) ಬಾಲ್ಡ್‌ವಿನ್‌ ಬಾಲಕಿಯರ ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದಳು. ಬಾಲಕಿ ಮೇ 24 ರಂದು ಸಂಜೆ ನಗರ ಕಾಟನ್‌ಪೇಟೆಯಲ್ಲಿರುವ ತನ್ನ ಕುಟುಂಬದ ಮನೆಯ ಟೆರೇಸ್‌ನಲ್ಲಿ ತನ್ನ ಸೋದರಸಂಬಂಧಿಗಳೊಂದಿಗೆ ಆಟವಾಡುತ್ತಿದ್ದಳು.

ಈ ವೇಳೆ ಕೃತಿ 8 ರಿಂದ 10 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದಾಳೆ. ತಕ್ಷಣವೇ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ತೀರ್ವವಾಗಿ ಗಾಯಗೊಂಡಿದ್ದ ಕೃತಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೃತಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದೆ ಎಂದು ಮೇ 28 ರಂದು ಬಿಜಿಎಸ್​ ಗ್ಲೆನೆಗಲ್ಸ್ ಗ್ಲೋಬಲ್ ಆಸ್ಪತ್ರೆಯ ವೈದ್ಯರು ಪೋಷಕರಿಗೆ ತಿಳಿಸಿದ್ದಾರೆ.

ಬಳಿಕ ಪೊಷಕರು ಕೃತಿಯ ಅಂಗಾಗಳನ್ನು ದಾನ ಮಾಡಲು ನಿಶ್ಚಯಿಸಿದ್ದಾರೆ. ನಂತರ ಬಿಜಿಎಸ್​​ ಗ್ಲೆನೆಗಲ್ಸ್ ಗ್ಲೋಬಲ್ ಆಸ್ಪತ್ರೆಯು ಕೃತಿಯ ಶ್ವಾಸಕೋಶಗಳು, ಯಕೃತ್ತು, ಮೂತ್ರಪಿಂಡಗಳು, ಹೃದಯ ಕವಾಟಗಳು ಮತ್ತು ಕಾರ್ನಿಯಾಗಳನ್ನು ಯಶಸ್ವಿಯಾಗಿ ಕಸಿ ಮಾಡಿದ್ದಾರೆ. ಶ್ವಾಸಕೋಶವನ್ನು ಚೆನ್ನೈಗೆ ಕಳಸಲಾಯಿತು. ಉಳಿದ ಅಂಗಗಳನ್ನು ರಾಜ್ಯದ ವಿವಿಧ ರೋಗಿಗಳಿಗೆ ಅಳವಡಿಸಲಾಗಿದೆ. ಒಟ್ಟಿನಲ್ಲಿ 9 ರೋಗಿಗಳ ಪ್ರಾಣ ಉಳಿದಿದೆ.

ಈ ಬಗ್ಗೆ ಬಿಜಿಎಸ್ ಗ್ಲೆನೆಗಲ್ಸ್ ಗ್ಲೋಬಲ್ ಆಸ್ಪತ್ರೆಯ ಮುಖ್ಯ ಮುಖ್ಯ ಶೋಕ ಸಮಾಲೋಚಕಿ ಮತ್ತು ಕಸಿ ಸಂವಾಹಕಿ ಸರಳಾ ಅನಂತರಾಜ್ ಮಾತನಾಡಿ ಅವರು ಜೈನ ಕುಟುಂಬಕ್ಕೆ ಕೃತಜ್ಞತೆ ಸಲ್ಲಿಸಿದರು. ಇಂತಹ ದುರಂತದ ಸಂದರ್ಭದಲ್ಲಿ ಕುಟುಂಬದ ಉದಾರತೆ ಗಮನಾರ್ಹವಾದುದು. ಕೃತಿಯ ಅಂಗಾಂಗಳ ಮೂಲಕ 9 ಜೀವಗಳ ಪ್ರಾಣ ಉಳಿದಿದೆ ಎಂದು ಹೇಳಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?