AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

178 ಮಠಗಳಿಗೆ 142.37 ಕೋಟಿ ರೂ. ಅನುದಾನ ಬಿಡುಗಡೆ: ರಾಜ್ಯ ಸರ್ಕಾರದಿಂದ ಆದೇಶ

ಕನ್ನಡ, ಸಂಸ್ಕೃತಿ ಇಲಾಖೆಯಲ್ಲಿ ಅನುದಾನ ಮೊತ್ತಕ್ಕೆ ಮಿತಿ ಹೇರಲಾಗಿದ್ದು, ಅನುದಾನದ ಗರಿಷ್ಠ ಮೊತ್ತ 2 ಲಕ್ಷ ರೂಪಾಯಿಗೆ ಮಿತಿಗೊಳಿಸಲಾಗಿದೆ. ಕನ್ನಡ, ಸಂಸ್ಕೃತಿ ಇಲಾಖೆಯಿಂದ ವಾರ್ಷಿಕ ಅನುದಾನ‌ ನೀಡಲಾಗುತ್ತಿತ್ತು.

178 ಮಠಗಳಿಗೆ 142.37 ಕೋಟಿ ರೂ. ಅನುದಾನ ಬಿಡುಗಡೆ: ರಾಜ್ಯ ಸರ್ಕಾರದಿಂದ ಆದೇಶ
ಸಂಗ್ರಹ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Jul 22, 2022 | 7:44 AM

Share

ಬೆಂಗಳೂರು: ರಾಜ್ಯದ ವಿವಿಧ ಸಮುದಾಯದ ಮಠ, ದೇವಸ್ಥಾನ, ಸಂಘ ಸಂಸ್ಥೆಗಳು, ಟ್ರಸ್ಟ್​​ಗಳಿಗೆ ರಾಜ್ಯ ಸರ್ಕಾರದಿಂದ ಅನುದಾನ (Grant) ಬಿಡುಗಡೆ ಮಾಡಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. 178 ಮಠಗಳಿಗೆ 108.02 ಕೋಟಿ‌ ರೂ, 59 ದೇವಸ್ಥಾನಗಳಿಗೆ 21.35 ಕೋಟಿ ರೂ, 26 ಸಂಘ ಸಂಸ್ಥೆಗಳು ಮತ್ತು ಟ್ರಸ್ಟ್​​ಗಳಿಗೆ 13 ಕೋಟಿ ರೂ. ಸೇರಿದಂತೆ ಒಟ್ಟು 142.37 ಕೋಟಿ ಅನುದಾನ ಬಿಡುಗಡೆಗೆ ಆರ್ಥಿಕ ಇಲಾಖೆಗೆ ಸಿಎಂ ಸೂಚನೆ ನೀಡಲಾಗಿದೆ. ಚುನಾವಣೆ ಹಿನ್ನೆಲೆ ವಿವಿಧ ಸಮುದಾಯಗಳ ಮಠಗಳು, ದೇವಾಲಯ, ಸಂಘ ಸಂಸ್ಥೆ, ಟ್ರಸ್ಟ್​ಗಳಿಗೆ ಬಜೆಟ್ ಹಂಚಿಕೆ ಜತೆಗೆ ಸಿಎಂ ವಿಶೇಷಾನುದಾನದಡಿ ಹಣ ಬಿಡುಗಡೆ ಮಾಡಲಾಗಿದೆ.

ಕನ್ನಡ ಸಂಸ್ಕೃತಿ ಇಲಾಖೆಯ ಅನುದಾನ ಮೊತ್ತಕ್ಕೆ ಮಿತಿ: ಆರ್ಥಿಕ ನೆರವಿಗೆ ಸರ್ಕಾರದ ಹಲವು ನಿರ್ಬಂಧ

ಕನ್ನಡ, ಸಂಸ್ಕೃತಿ ಇಲಾಖೆಯಲ್ಲಿ ಅನುದಾನ ಮೊತ್ತಕ್ಕೆ ಮಿತಿ ಹೇರಲಾಗಿದ್ದು, ಅನುದಾನದ ಗರಿಷ್ಠ ಮೊತ್ತ 2 ಲಕ್ಷ ರೂಪಾಯಿಗೆ ಮಿತಿಗೊಳಿಸಲಾಗಿದೆ. ಕನ್ನಡ, ಸಂಸ್ಕೃತಿ ಇಲಾಖೆಯಿಂದ ವಾರ್ಷಿಕ ಅನುದಾನ‌ ನೀಡಲಾಗುತ್ತಿತ್ತು. ನೋಂದಾಯಿತ ಸಂಘ- ಸಂಸ್ಥೆಗಳಿಗೆ ನೀಡುತ್ತಿದ್ದ ಅನುದಾನ‌ಕ್ಕೆ ಮಿತಿ ಹೇರಲಾಗಿದೆ. ಅನುದಾನ ಪಡೆಯಲು ಕೆಲವೇ ಸಂಘ, ಸಂಸ್ಥೆ ಏಕಸ್ವಾಮ್ಯ ಸಾಧಿಸಿರುವ ಆರೋಪ ಹಿನ್ನೆಲೆಯಲ್ಲಿ ಮಿತಿ ಹೇರಲಾಗಿದೆ. ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯಿಂದ ನೋಂದಾಯಿತ ಸಂಘ- ಸಂಸ್ಥೆಗಳಿಗೆ ನೀಡುತ್ತಿದ್ದ ವಾರ್ಷಿಕ ಅನುದಾನ‌ದಲ್ಲಿ ಕಡಿತಗೊಳಿಸಲಾಗಿದೆ. ಅನುದಾನ ಪಡೆಯುವಲ್ಲಿ ಕೆಲವೇ ಸಂಘ- ಸಂಸ್ಥೆಗಳು ಏಕಸ್ವಾಮ್ಯ ಸಾಧಿಸಿರುವ ಆರೋಪದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಕನ್ನಡ ಸಂಸ್ಕೃತಿ ಇಲಾಖೆಯ ಅನುದಾನ ಮೊತ್ತಕ್ಕೆ ಮಿತಿ; ಯೋಗ್ಯರಿಗೆ ಪಾರದರ್ಶಕವಾಗಿ ಅನುದಾನ ಹಂಚಿಕೆ ಮಾಡಲು ಆದೇಶ

ಹತ್ತಾರು ವರ್ಷಗಳಿಂದ 10- 15 ಲಕ್ಷ ರೂಪಾಯಿ ಅನುದಾನ ಹಿನ್ನೆಲೆ ಅನುದಾನ ಪಡೆದ ಸಂಸ್ಥೆಗಳಿಗೆ ಈ ಬಾರಿ ನೆರವು ಕಡಿತಗೊಳಿಸಲಾಗಿದೆ. ಆನ್​ಲೈನ್ ಅರ್ಜಿಗೆ ಗರಿಷ್ಠ ₹2 ಲಕ್ಷ ಮಾತ್ರ ಅನುದಾನ ಎಂದು ಹೇಳಲಾಗಿದೆ. ಜಿಲ್ಲಾ ಮಟ್ಟದಲ್ಲಿ ಪರಿಶೀಲಿಸಿ ಅನುದಾನ ಅರ್ಜಿ ಸ್ವೀಕಾರ ಮಾಡಲಾಗುತ್ತದೆ. ಕಾರ್ಯಕ್ರಮ ಆಯೋಜಿಸದೆ ಅನುದಾನ ಪಡೆಯಲು ಯತ್ನಿಸಲಾಗಿದೆ. ಕೊರೊನಾ ಅವಧಿಯ ಅನುದಾನ ಪಡೆಯಲು ಪ್ರಯತ್ನ ಮಾಡಲಾಗಿದೆ. ಯೋಗ್ಯರಿಗೆ ಪಾರದರ್ಶಕವಾಗಿ ಅನುದಾನ ಹಂಚಿಕೆ ಮಾಡಲಿದೆ ಎಂದು ಕನ್ನಡ, ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಸೂಚನೆ ಕೊಟ್ಟಿದ್ದಾರೆ.

Published On - 7:35 am, Fri, 22 July 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ