AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bomb Threat: ಬೆಂಗಳೂರಿನಲ್ಲಿ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ!

Bengaluru Schools Bomb threat: ಬೆಂಗಳೂರಿನಲ್ಲಿ 15 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಕಿಡಿಕೇಡಿಗಳು ಇಮೇಲ್​ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ. ವಿಷಯ ತಿಳಿದಯುತ್ತಿದ್ದಂತೆಯೇ ಶಾಲೆಗೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಡಿಸಿಎಂ ಡಿಕೆ ಶಿವಕುಮಾರ್ ಸಹ ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

Bomb Threat: ಬೆಂಗಳೂರಿನಲ್ಲಿ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ!
ಪ್ರಾತಿನಿಧಿಕ ಚಿತ್ರ
ಶಿವಪ್ರಸಾದ್​ ಬಿ.
| Edited By: |

Updated on:Dec 01, 2023 | 10:32 AM

Share

ಬೆಂಗಳೂರು, (ಡಿಸೆಂಬರ್ 01): ಸಿಲಿಕಾನ್ ಸಿಟಿ ಬೆಂಗಳೂರಿನ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ(Bomb Threat) ಹಾಕಲಾಗಿದೆ. ಬೆಂಗಳೂರು, (ಡಿಸೆಂಬರ್ 01): ಸಿಲಿಕಾನ್ ಸಿಟಿ ಬೆಂಗಳೂರಿನ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಬಸವೇಶ್ವರ ನಗರದ ಖಾಸಗಿ ಶಾಲೆಗಳಿಗೆ ಹಾಗೂ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಗೂ ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ. ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಿದ್ದಾರೆ. ಇನ್ನು ಆತಂಕಗೊಂಡ ಪೋಷಕರು ಶಾಲೆ ಬಳಿ ಓಡೋಡಿ ಬಂದು ತಮ್ಮ-ತಮ್ಮ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದಾರೆ.

ಕಳೆದ 1 ವರ್ಷದಿಂದ ನಿರಂತರವಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.  ಕಳೆದ ವರ್ಷ ಒಂದೇ ದಿನ 30 ಶಾಲೆಗಳಿಗೆ ಇ-ಮೇಲ್ ಬೆದರಿಕೆ ಹಾಕಲಾಗಿತ್ತು. ಆದರೂ ಸಹ ಈವರೆಗೂ ಬಾಂಬ್ ಬೆದರಿಕೆ ಹಾಕಿರುವವರ ಬಂಧನವಾಗಿಲ್ಲ. ಇದೀಗ ಮತ್ತೆ ಅದೇ ಚಾಳಿ ಮುಂದುವರೆಸಿದ್ದಾರೆ. ಇನ್ನು ಇ-ಮೇಲ್ ಬಾಂಬ್​​​ ಬೆದರಿಕೆ ಸಂದೇಶ ಬಂದ ಹಿನ್ನೆಲೆಯುಲ್ಲಿ ಸದಾಶಿವನಗರದಲ್ಲಿರುವ ನೀವ್ ಅಕಾಡೆಮಿ ಶಾಲೆಗೆ ರಜೆ ನೀಡಲಾಗಿದೆ. ನೀವ್ ಅಕಾಡೆಮಿ ಶಾಲೆಗೆ ಇಂದು ಆಡಳಿತ ಮಂಡಳಿ ರಜೆ ಘೋಷಿಸಿದೆ.

ಇದನ್ನೂ ಓದಿ: ಬೆಂಗಳೂರು: ಕೆಲಸದಿಂದ ತೆಗೆದಿದ್ದಕ್ಕೆ ಕಂಪನಿಗೆ ಯುವತಿಯಿಂದ ಬಾಂಬ್ ಬೆದರಿಕೆ ಕರೆ, ಮುಂದೇನಾಯ್ತು?

ಹುಸಿ ಬಾಂಬ್ ಬೆದರಿಕೆ ಎಂದ ನಗರ ಪೊಲೀಸ್ ಆಯುಕ್ತರು

ಇನ್ನು ಈ ಬಾಂಬ್ ಬೆದರಿಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಹಾಕಿದ್ದಾರೆ. ಶಾಲೆಗಳಿಗೆ ಬಾಂಬ್ ಪತ್ತೆ ದಳ, ನಿಷ್ಕ್ರಿಯ ದಳವನ್ನು ಕಳಿಸಿದ್ದೇವೆ. ಬೆದರಿಕೆ ಬಂದಿರುವ ಶಾಲೆಗಳಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಾರೆ. ಯಾವುದೇ ರೀತಿಯ ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಶಾಲೆಗೆ ಡಿಕೆ ಶಿವಕುಮಾರ್ ಭೇಟಿ

ಮಾಧ್ಯಮಗಳಲ್ಲಿನ ಸುದ್ದಿ ನೋಡಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸದಾಶಿವನಗರದಲ್ಲಿರುವ ನ್ಯೂ ಅಕಾಡೆಮಿ ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿನ ಸುದ್ದಿ ನೋಡಿ ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದಿರುವೆ. ಮನೆಯ ಬಳಿಯೇ ಇರುವ ಶಾಲೆ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಗರ ಪೊಲೀಸ್ ಕಮಿಷನರ್​ ಬಳಿಯೂ ಮಾಹಿತಿ ಪಡೆದಿದ್ದೇನೆ. ಯಾರು ಕೂಡ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:48 am, Fri, 1 December 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು