AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಪ್ರಮಾಣವಚನ ಸಮಾರಂಭದ ಬಳಿಕ ಸಂಗ್ರಹವಾಯ್ತು ಟನ್​ಗಟ್ಟಲೆ​ ಕಸ

ಶನಿವಾರ (ಮೇ.20) ರಂದು ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಮಾಣ ವಚನ ಸಮಾರಂಭದ ಬಳಿಕ ಸಂಗ್ರಹಿಸಲಾದ ಕಸ ಎಷ್ಟು ಗೊತ್ತಾ? ಇಲ್ಲಿದೆ ಓದಿ.

ಸಿಎಂ ಪ್ರಮಾಣವಚನ ಸಮಾರಂಭದ ಬಳಿಕ ಸಂಗ್ರಹವಾಯ್ತು ಟನ್​ಗಟ್ಟಲೆ​ ಕಸ
ಬಿಬಿಎಂಪಿ
ವಿವೇಕ ಬಿರಾದಾರ
|

Updated on: May 22, 2023 | 9:17 AM

Share

ಬೆಂಗಳೂರು: ಶನಿವಾರ (ಮೇ.20) ರಂದು ನಗರದ ಕಂಠೀರವ ಕ್ರೀಡಾಂಗಣದಲ್ಲಿ (Kanteerava Sports Ground) ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಅವರ ಅದ್ಧೂರಿ ಪ್ರಮಾಣ ವಚನ (Swearing in Ceremony) ಸಮಾರಂಭದಲ್ಲಿ ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. ಸಮಾರಂಭ ಮುಗಿದ ಬಳಿಕ ಕ್ರೀಡಾಂಗಣದ ಸುತ್ತಲಿನ ರಸ್ತೆಗಳಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಪ್ಯಾಕೆಟ್‌ಗಳು, ಬಾಟಲಿಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಂಗ್ರಹಿಸಲಾಗಿದೆ. ಅಧಿಕಾರಿಗಳ ಪ್ರಕಾರ, ಕ್ರೀಡಾಂಗಣದ ಬಳಿ 15 ಟನ್ ತ್ಯಾಜ್ಯ ಸಂಗ್ರಹವಾಗಿದೆ. ಇನ್ನು ಬೀದಿಗಳಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಪ್ಯಾಕೆಟ್‌ಗಳು, ಬಾಟಲಿಗಳ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದವು.

ಈ ಕಾರ್ಯಕ್ರಮದಲ್ಲಿ ಸುಮಾರು 1.2 ಲಕ್ಷ ಜನರು ಭಾಗವಹಿಸಿದ್ದರು. ನಾವು 50 ಡಸ್ಟ್‌ಬಿನ್‌ಗಳನ್ನು ಇರಿಸಿದ್ದೇವು. ಆದರೂ ಕೂಡ ಸಾಕಷ್ಟು ಕಸದ ರಾಶಿ ಇತ್ತು. ಮಜ್ಜಿಗೆ ಪ್ಯಾಕೆಟ್‌ಗಳು, ಪ್ಲಾಸ್ಟಿಕ್ ನೀರು ಮತ್ತು ಜ್ಯೂಸ್ ಬಾಟಲಿಗಳು, ಟೆಟ್ರಾ ಪ್ಯಾಕ್‌ಗಳು ಹೆಚ್ಚಾಗಿ ಸಂಗ್ರಹಿಸಲಾಗಿದೆ ಎಂದು ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣಾ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಲ್ಲದೇ ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ ಸುರಿದ ಭಾರೀ ಮಳೆಯೂ ತ್ಯಾಜ್ಯ ಸಂಗ್ರಹಕ್ಕೆ ಕಾರಣವಾಯಿತು. ಬಿರುಗಾಳಿ ಸಹಿತ ಮಳೆಗೆ ಮರದ ಕೊಂಬೆಗಳು ಮುರಿದು ಬಿದ್ದಿದ್ದವು. ಇದು ಕೂಡ ಸಂಗ್ರಹವಾದ ದೊಡ್ಡ ಪ್ರಮಾಣದ ಕಸವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಸಾವು ಪ್ರಕರಣ: ಬಿಬಿಎಂಪಿ ಅಧಿಕಾರಿಗಳ ವಿರುದ್ಧ ದೂರು ದಾಖಲು

ಇದಲ್ಲದೆ, ಕ್ವೀನ್ಸ್ ರಸ್ತೆಯಲ್ಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಚೇರಿ ಬಳಿ ಸುಮಾರು 3 ಟನ್ ಕಸ ಸಂಗ್ರಹಿಸಲಾಯಿತು. ಅಂದು ಹೆಚ್ಚಿನ ತ್ಯಾಜ್ಯ ಉತ್ಪತ್ತಿಯಾಗುವ ನಿರೀಕ್ಷೆಯಿತ್ತು. ಈ ಹಿನ್ನೆಲೆ ವಲಯ ಬಿಬಿಎಂಪಿ ಅಧಿಕಾರಿಗಳು ಹೆಚ್ಚುವರಿ ಕಾಂಪ್ಯಾಕ್ಟರ್ ಸಿದ್ಧಪಡಿಸಿದ್ದರು. “ನಾವು ಶನಿವಾರದಂದು ಮಿಶ್ರಿತ (ವಣ ಮತ್ತು ಹಸಿ ತ್ಯಾಜ್ಯ) ಸಂಗ್ರಹಿಸಿದ್ದೇವೆ ಎಂದರು.

ಬ್ಯಾನರ್ ಮತ್ತು ಕಟೌಟ್‌ಗಳನ್ನು ಹಾಕಲು ಟೆಂಡರ್ ಪಡೆದಿದ್ದ ಕಂಪನಿಯು ಅವುಗಳನ್ನು ತೆರುವುಗೊಳಿಸುವ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರಿಂದ ಬಿಬಿಎಂಪಿಗೆ ಸ್ವಲ್ಪ ಕೆಲಸ ಕಡಿಮೆಯಾಗಿದೆ. ಸಮಾರಂಭದಲ್ಲಿ ಬೃಹತ್ ಪ್ರಮಾಣದ ಹೂವುಗಳನ್ನು ಸಹ ಬಳಸಲಾಯಿತು. ಈ ಹೂವುಗಳನ್ನು ಮಹಿಳೆಯೊಬ್ಬರು ಸ್ವಯಂಪ್ರೇರಿತವಾಗಿ ಸಂಗ್ರಹಿಸಿದ್ದು, ಅಗರಬತ್ತಿಯ ಸುಗಂಧಕ್ಕಾಗಿ ಮರುಬಳಕೆ ಮಾಡುತ್ತಾರೆ ಎಂದು ಅಧಿಕಾರಿಗಳು ವರದಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!