AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಶಾಲಾ ಕಟ್ಟಡದಿಂದ ಹಾರಿ 17 ವರ್ಷದ ಬಾಲಕ ಸಾವು

ಬೆಂಗಳೂರಿನಲ್ಲಿ ಮಕ್ಕಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೀಗ ರಿಚರ್ಡ್ಸ್ ಟೌನ್‌ನಲ್ಲಿ 17 ವರ್ಷದ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದಿಂದ ಹಾರಿ ಸಾವನ್ನಪ್ಪಿದ್ದಾನೆ. ಈ ಘಟನೆ ಅ.13ರಂದು ನಡೆದಿದ್ದು, ವಿದ್ಯಾರ್ಥಿಯ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಸಿಸಿಟಿವಿ ಪರಿಶೀಲಿಸಿ, ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು: ಶಾಲಾ ಕಟ್ಟಡದಿಂದ ಹಾರಿ 17 ವರ್ಷದ ಬಾಲಕ ಸಾವು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Oct 14, 2025 | 12:07 PM

Share

ಬೆಂಗಳೂರು, ಅ.14: ಬೆಂಗಳೂರಿನಲ್ಲಿ (Bengaluru) ದಿನದಿಂದ ದಿನಕ್ಕೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲೂ ಮಕ್ಕಳು ಹೆಚ್ಚಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.  ಸಣ್ಣ ಪುಟ್ಟ ವಿಚಾರಗಳಿಗೆ ಆತ್ಮಹತ್ಯೆಯ ದಾರಿಯನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಇದೀಗ ಬೆಂಗಳೂರಿನ ಪೂರ್ವ ಭಾಗದ ರಿಚರ್ಡ್ಸ್ ಟೌನ್‌ನಲ್ಲಿ ಸೋಮವಾರದಂದು (ಅ.13) 17 ವರ್ಷದ ಬಾಲಕನೊಬ್ಬ ತನ್ನ ಶಾಲಾ ಕಟ್ಟಡದಿಂದ ಹಾರಿ ಸಾವನ್ನಪ್ಪಿದ್ದಾನೆ. ಮೃತನ್ನು 12ನೇ ತರಗತಿಯ ವಿಜ್ಞಾನ ವಿದ್ಯಾರ್ಥಿ ಎಂದು ಹೇಳಲಾಗಿದೆ.  ಬೆಳಿಗ್ಗೆ 8.20ರ ಸುಮಾರಿಗೆ ಶಾಲಾ ಕಟ್ಟಡದಿಂದ ಹಾರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ಇಲ್ಲಿಯವರೆಗೆ ತಿಳಿದು ಬಂದಿಲ್ಲ.  ವಿದ್ಯಾರ್ಥಿಯ ಸಾವನ್ನು ಅಹಜ ಸಾವು ಎಂದು ವರದಿ (ಯುಡಿಆರ್) ಮಾಡಲಾಗಿದೆ. ಈಗಾಗಲೇ ಪೊಲೀಸರು ಶಾಲೆಯ ಸಿಸಿಟಿವಿಯನ್ನು ಪರಿಶೀಲನೆ ಮಾಡಿದ್ದು, ವಿದ್ಯಾರ್ಥಿ ಸಾವಿಗೆ ಕಾರಣ ಏನು ಎಂಬುದನ್ನು ತನಿಖೆ ನಡೆಸುತ್ತಿದ್ದಾರೆ.

ಶಾಲೆಯ ಆಡಳಿತ ಮಂಡಳಿ ವಿದ್ಯಾರ್ಥಿಯ ಮನೆಯವರಿಗೆ ಕಳಿಸಿದ ಪತ್ರದ ಪ್ರಕಾರ, ಶಾಲೆಯಲ್ಲಿ ಮಕ್ಕಳ ಬೆಳಗಿನ ಅಸೆಂಬ್ಲಿ ಸಮಯದಲ್ಲಿ ವಿದ್ಯಾರ್ಥಿ ಶಾಲೆಯ ಎರಡನೇ ಮಹಡಿಯಿಂದ ಹಾರಿದ್ದಾನೆ ಎಂದು ಹೇಳಲಾಗಿದೆ. ವಿದ್ಯಾರ್ಥಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಹೇಳಿದ್ದಾರೆ ಎಂದು ಈ ಪತ್ರದಲ್ಲಿ ತಿಳಿಸಲಾಗಿದೆ. ಶಾಲೆಯ ಶಿಕ್ಷಕರು ಹೇಳಿರುವಂತೆ, ತುಂಬಾ ಚುಟುವಟಿಕೆಯಿಂದ ಇರುವ ವಿದ್ಯಾರ್ಥಿ, ಶಾಲೆಯ ಎಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದ, ಪ್ರತಿಭಾನ್ವಿತ ಕ್ರೀಡಾಪಟು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸೋಷಿಯಲ್ ಮೀಡಿಯಾದಿಂದ ಹೆಚ್ಚಿದ ಅಪರಾಧ, ಕಳೆದ ವರ್ಷಕ್ಕಿಂತ ಶೇ 21 ಹೆಚ್ಚಳ

ಇನ್ನು ವಿದ್ಯಾರ್ಥಿಯ ಸಾವಿನ ಸುದ್ದಿಯಿಂದ ಮನೆಯವರು ಕೂಡ ತುಂಬಾ ಅಘಾತಕ್ಕೆ ಒಳಲಾಗಿದ್ದು, ಮಂಗಳವಾರ ಶಾಲೆಗೂ ರಜೆಯನ್ನು ನೀಡಲಾಗಿದೆ. ವಿದ್ಯಾರ್ಥಿಯ ಸಾವಿಗೆ ಕಾರಣವೇನು? ಮೇಲ್ನೋಟಕ್ಕೆ ಆತ್ಮಹತ್ಯೆಯಾಗಿದ್ದರು, ನಿಜವಾದ ಕಾರಣ ತನಿಖೆಯಿಂದ ತಿಳಿಯಬೇಕಿದೆ ಎಂದು ಪೊಲೀಸರು ಹೇಳಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:35 am, Tue, 14 October 25

Follow Us
ಬನಶಂಕರಿಯಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷ ಇಂದು ಕಾರ್ಯಾಚರಣೆ
ಬನಶಂಕರಿಯಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷ ಇಂದು ಕಾರ್ಯಾಚರಣೆ
ಬಾಗಲಕೋಟೆಯಲ್ಲಿ ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ
ಬಾಗಲಕೋಟೆಯಲ್ಲಿ ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ
ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​​!
ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​​!
ಸರ್ಕಾರಿ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ ಅತಿಥಿ ಉಪನ್ಯಾಸಕರು
ಸರ್ಕಾರಿ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ ಅತಿಥಿ ಉಪನ್ಯಾಸಕರು
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ