AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನಗರದಲ್ಲಿವೆ 180 ಡೆಡ್ಲಿ ಸ್ಪಾಟ್, ಬಿಬಿಎಂಪಿಗೆ ವರದಿ ಸಲ್ಲಿಸಿದ ಟ್ರಾಫಿಕ್ ಪೊಲೀಸರು

ಬೆಂಗಳೂರಿನ ಮಳೆ ಅವಾಂತರಗಳ ಬಗ್ಗೆ ಎಷ್ಟೇ ವಿರೋಧ ವ್ಯಕ್ತವಾದರೂ ಎಚ್ಚೆತ್ತುಕೊಳ್ಳದೇ ನಿದ್ದೆಗೆ ಜಾರಿದ್ದ ಪಾಲಿಕೆ ಡಿಸಿಎಂ ಡಿಕೆ ಶಿವಕುಮಾರ್ ಸಿಟಿರೌಂಡ್ಸ್ ಬಳಿಕ ಇದೀಗ ನಿಧಾನಕ್ಕೆ ಕಣ್ಣುತೆರೆಯುತ್ತಿದೆ. ಬೆಂಗಳೂರಲ್ಲಿ ಏನೇ ಅವಾಂತರ ಸೃಷ್ಟಿಯಾದರೂ ಪಾಲಿಕೆಗಿಂತ ಮೊದಲೇ ಧಾವಿಸುವ ಟ್ರಾಫಿಕ್ ಪೊಲೀಸರು ಇದೀಗ ಬಿಬಿಎಂಪಿಗೆ ಬೆಂಗಳೂರಿನ 180 ಡೆಡ್ಲಿಸ್ಪಾಟ್​​ಗಳ ವರದಿ ಸಲ್ಲಿಸಿದ್ದಾರೆ. ಮಳೆ ಬಂದಾಗ ಅವಾಂತರ ಸೃಷ್ಟಿಯಾಗುವ ಜಾಗಗಳ ಬಗ್ಗೆ ಫೋಟೋ ಸಮೇತ ದಾಖಲೆ ಕೊಟ್ಟರೂ ಮೌನವಾಗಿದ್ದ ಪಾಲಿಕೆ, ಇದೀಗ ಪೊಲೀಸರ ರಿಪೋರ್ಟ್ ಪರಿಶೀಲಿಸಿ ಕೆಲಸ ಶುರುಮಾಡಲು ಸಜ್ಜಾಗಿದೆ.

ಬೆಂಗಳೂರು: ನಗರದಲ್ಲಿವೆ 180 ಡೆಡ್ಲಿ ಸ್ಪಾಟ್, ಬಿಬಿಎಂಪಿಗೆ ವರದಿ ಸಲ್ಲಿಸಿದ ಟ್ರಾಫಿಕ್ ಪೊಲೀಸರು
ಬೆಂಗಳೂರು: ನಗರದಲ್ಲಿವೆ 180 ಡೆಡ್ಲಿ ಸ್ಪಾಟ್, ಬಿಬಿಎಂಪಿಗೆ ವರದಿ ಸಲ್ಲಿಸಿದ ಟ್ರಾಫಿಕ್ ಪೊಲೀಸರು
ಶಾಂತಮೂರ್ತಿ
ಶಾಂತಮೂರ್ತಿ | Edited By: |

Updated on: Aug 15, 2024 | 6:52 AM

Share

ಬೆಂಗಳೂರು, ಆಗಸ್ಟ್ 15: ರಾಜಧಾನಿ ಬೆಂಗಳೂರಲ್ಲಿ ಎರಡು ದಿನ ಹಿಂದಷ್ಟೇ ರಾತ್ರಿ ಸುರಿದ ಭಾರಿ ಮಳೆ ಅವಾಂತರ ಸೃಷ್ಟಿಸಿತ್ತು. ಬೆಂಗಳೂರಿನ ರಸ್ತೆಗಳು, ಅಂಡರ್ ಪಾಸ್​ಗಳು ಜಲಾವೃತವಾಗಿದ್ದವು. ಮಳೆ ಅವಾಂತರ ಸೃಷ್ಟಿಸಿದ್ದರಿಂದ ಡಿಸಿಎಂ ಡಿಕೆ ಶಿವಕುಮಾರ್ ಸಿಟಿ ರೌಂಡ್ಸ್ ಕೂಡ ಮಾಡಿದ್ದರು. ಇದೀಗ ಇದೇ ವಿಚಾರದ ಬಗ್ಗೆ ಪಾಲಿಕೆಗೆ ಪೊಲೀಸ್ ಇಲಾಖೆ ವರದಿ ನೀಡಿದೆ. ಸದ್ಯ ಮಳೆ ಬಂದು ಅವಾಂತರ ಸೃಷ್ಟಿಯಾದರೂ, ಮರ ಬಿದ್ದು ರಸ್ತೆ ಜಾಮ್ ಆದರೂ ಬಿಬಿಎಂಪಿಗಿಂತ ಮೊದಲೇ ಸ್ಥಳಕ್ಕೆ ಬರುವ ಪೊಲೀಸರು ಇದೀಗ ಬೆಂಗಳೂರಲ್ಲಿ ಪದೇ ಪದೇ ಸಮಸ್ಯೆ ತಂದಿಡುವ ಸ್ಥಳಗಳ ಬಗ್ಗೆ ಪಾಲಿಕೆಗೆ ರಿಪೋರ್ಟ್ ಕೊಟ್ಟಿದ್ದಾರೆ.

ಇನ್ನು ಮಳೆ ಬಂದಾಗ ಅಂಡರ್​​ಪಾಸ್​​ಗಳು, ರಸ್ತೆಗಳು ಜಲಾವೃತವಾಗಿ ಅವಾಂತರ ಸೃಷ್ಟಿಯಾಗುವುದರ ಜೊತೆಗೆ ಟ್ರಾಫಿಕ್ ಜಾಮ್ ಕೂಡ ಉಂಟಾಗುತ್ತಿದೆ. ಈ ಹಿನ್ನೆಲೆ ಪ್ರತಿ ಬಾರಿ ಮಳೆ ಬಂದಾಗ ಸ್ಥಳಕ್ಕೆ ಧಾವಿಸಿ ಪರದಾಡುವ ಪೊಲೀಸರು 180 ಅಪಾಯಕರ ಸ್ಥಳಗಳನ್ನು ಗುರುತಿಸಿದ್ದಾರೆ. ಮಳೆ ಬಂದ ವೇಳೆ ಆಗುವ ಅವಾಂತರಗಳನ್ನು ಫೋಟೋ ಸಮೇತ ಬಿಬಿಎಂಪಿಗೆ ನೀಡಿದ್ದಾರೆ. ಜತಗೆ, ಸಮಸ್ಯೆ ಬಗೆಹರಿಸಲು ಸಲಹೆ ಕೊಟ್ಟಿದ್ದಾರೆ.

ಸದ್ಯ ಮಳೆ ಅವಾಂತರಗಳ ಬಗ್ಗೆ ಪೊಲೀಸರು ಕೊಟ್ಟಿದ್ದ ಜಾಗಗಳ ಪರಿಶೀಲನೆಗೆ ಪಾಲಿಕೆ ಅಧಿಕಾರಿಗಳು ಮುಂದಾಗಿದ್ದಾರೆ. ಮಳೆ ಬಂದರೆ ಸಮಸ್ಯೆಯಾಗುವ ಜಾಗಗಳ ಬಗ್ಗೆ ಪರಿಶೀಲನೆ ನಡೆಸಲು ಹೊರಟಿರುವ ಪಾಲಿಕೆ ಕೆಲವೆಡೆ ಕೆಲಸ ಆರಂಭಿಸಿದೆ. ಈ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸಾಲು ಸಾಲು ರಜೆ; ಊರುಗಳತ್ತ ಮುಖ ಮಾಡಿದ ಸಿಲಿಕಾನ್‌ ಸಿಟಿ ಮಂದಿ

ಒಟ್ಟಿನಲ್ಲಿ ಊರೆಲ್ಲ ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕೊಂಡರು ಎಂಬ ಹಾಗೆ ಮಳೆ ಬಂದು ಅವಾಂತರ ಸೃಷ್ಟಿಯಾದ ನಂತರ ಬಳಿಕ ಇದೀಗ ಡೆಡ್ಲಿ ಸ್ಪಾಟ್​​ಗಳ ಮೇಲೆ ಪಾಲಿಕೆ ನಿಗಾ ಇಡಲು ಹೊರಟಿದೆ. ಸದ್ಯ ಬೆಂಗಳೂರಿನ ಜನರಿಗೆ ಇನ್ನಾದರೂ ಮಳೆ ಸಂಕಷ್ಟದಿಂದ ಮುಕ್ತಿ ಸಿಗುತ್ತಾ ಎಂಬುದನ್ನು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!