AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲಿ ಇದ್ದರೂ ಆಕ್ಟೀವ್! ಪರಪ್ಪನ ಅಗ್ರಹಾರ ಜೈಲಿನಿಂದ 19 ನಟೋರಿಯಸ್ ರೌಡಿಶೀಟರ್ಸ್ ಶಿಫ್ಟ್

ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದುಕೊಂಡು ತನ್ನ ಶಿಷ್ಯಂದಿರ ಮೂಲಕ ಬೇರೆ ಬೇರೆ ಕೆಲಸಗಳಿಗೆ ರೌಡಿಶೀಟರ್​ಗಳು ಸ್ಕೆಚ್ ಹಾಕುತ್ತಿರುವುದು ತಿಳಿದುಬಂದಿದೆ.

ಜೈಲಿನಲ್ಲಿ ಇದ್ದರೂ ಆಕ್ಟೀವ್! ಪರಪ್ಪನ ಅಗ್ರಹಾರ ಜೈಲಿನಿಂದ 19 ನಟೋರಿಯಸ್ ರೌಡಿಶೀಟರ್ಸ್ ಶಿಫ್ಟ್
ಪರಪ್ಪನ ಅಗ್ರಹಾರ ಜೈಲು
TV9 Web
| Edited By: |

Updated on: Aug 17, 2021 | 2:39 PM

Share

ಬೆಂಗಳೂರು: ಅಪರಾಧಿಗಳಿಗೆ ತಕ್ಕ ಶಿಕ್ಷೆ ನೀಡುವ ಸಲುವಾಗಿ ಅವರನ್ನು ಜೈಲಿಗೆ ಅಟ್ಟಲಾಗುತ್ತದೆ. ಆದರೆ ಜೈಲಿನಲ್ಲಿದ್ದುಕೊಂಡೆ ಕೆಲ ರೌಡಿಶೀಟರ್​ಗಳು (Rowdy Sheeters) ಅಪರಾಧ ಕೆಲಸಗಳನ್ನು ಮಾಡುವುದು ಬೆಳಕಿಗೆ ಬಂದಿದೆ. ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದುಕೊಂಡು ತನ್ನ ಶಿಷ್ಯಂದಿರ ಮೂಲಕ ಬೇರೆ ಬೇರೆ ಕೆಲಸಗಳಿಗೆ ರೌಡಿಶೀಟರ್​ಗಳು ಸ್ಕೆಚ್ ಹಾಕುತ್ತಿರುವುದು ತಿಳಿದುಬಂದಿದೆ. ಹೀಗಾಗಿ ರೌಡಿಸಂ ಮಟ್ಟ ಹಾಕಲು ಖಾಕಿ ಮುಂದಾಗಿದ್ದು, ಬೆಂಗಳೂರು ಕೇಂದ್ರ ಕಾರಾಗೃಹದಿಂದ ರಾಜ್ಯದ ಬೇರೆ ಬೇರೆ ಜೈಲುಗಳಿಗೆ ರೌಡಿಶೀಟರ್​ಗಳನ್ನ ಶಿಫ್ಟ್ ಮಾಡುತ್ತಿದ್ದಾರೆ.

ಜೈಲಿನಲ್ಲಿದ್ದು ಆಕ್ಟಿವ್ ಆಗಿದ್ದ 19 ರೌಡಿಶೀಟರ್​ಗಳನ್ನು ಪರಪ್ಪನ ಅಗ್ರಹಾರ ಜೈಲಿನಿಂದ (Parappana Agrahara Jail) ಬೇರೆ ಬೇರೆ ಜಿಲ್ಲೆಯ ಜೈಲುಗಳಿಗೆ ಸ್ಥಳಾಂತರ ಮಾಡಲು ಖಾಕಿ ನಿರ್ಧರಿಸಿದೆ. ಕಲಬುರಗಿ, ಬೆಳಗಾವಿ, ಧಾರವಾಡ, ಶಿವಮೊಗ್ಗ, ಮೈಸೂರು, ವಿಜಯಪುರ, ಬಳ್ಳಾರಿ ಜೈಲುಗಳಿಗೆ ರೌಡಿಶೀಟರ್​ಗಳನ್ನ ಸ್ಥಳಾಂತರ ಮಾಡಲಾಗುತ್ತಿದೆ.

ವಿಲ್ಸನ್ ಗಾರ್ಡನ್ ನಾಗ, ಪೂರ್ಣೇಶ, ಕಾರ್ಣಿಕ್ ರಾಜ್, ಕಮಲ್ನ ಕಲಬುರಗಿ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ಇನ್ನು ದಿನೇಶ್, ವಿಲ್ಸನ್ ಗಾರ್ಡನ್ ಶಿವ, ಪ್ರದೀಪ್ನನ್ನ ಬೆಳಗಾವಿ ಜಿಲ್ಲೆಗೆ ಸ್ಥಳಾಂತರ ಮಾಡಲಾಗುತ್ತಿದೆ. ಮಹಮ್ಮದ್ ಖಲೀಲುಲ್ಲ ಅಲಿಯಾಸ್ ಬಾಂಬೆ ಸಲೀಂ, ಸುನೀಲ್, ಅರುಣ್ನನ್ನು ಧಾರವಾಡ ಜೈಲಿಗೆ ಕಳುಹಿಸಲಾಗುತ್ತದೆ. ಶಿವಮೊಗ್ಗ ಜೈಲಿಗೆ ನವೀನ್ ಅಲಿಯಾಸ್ ಬಂಡೆ ನವೀನ್, ಅರುಣ್ ಎಂ, ಸತೀಶನನ್ನ ಶಿಫ್ಟ್ ಮಾಡಿಲಾಗುವುದು.

ಮೈಸೂರು ಜೈಲಿಗೆ ಕಾರ್ತಿಕ್, ಆನಂದ್, ವಿಜಯಪುರ ಜೈಲಿಗೆ ದೇವರಾಜ್, ಧನಶೇಖರ್ ಮತ್ತು ಬಳ್ಳಾರಿ ಜೈಲಿಗೆ ಜಾರ್ಜ್, ಶರವಣನನ್ನು ಶಿಫ್ಟ್ ಮಾಡಲಾಗುತ್ತದೆ.

ಇದನ್ನೂ ಓದಿ

ತಾಲಿಬಾನ್ ಉಗ್ರರು ನನ್ನ ಕೊಂದರೂ ದೇವರ ಸೇವೆಯೆಂದು ಭಾವಿಸುವೆ; ಅಫ್ಘಾನ್ ತೊರೆಯಲೊಪ್ಪದ ಹಿಂದೂ ಅರ್ಚಕ

‘ತಾಲಿಬಾನ್​​ ಉಗ್ರರಿಗಾಗಿ ಕಾಯುತ್ತಿದ್ದೇನೆ..ಅವರು ಕೊಲ್ಲಲು ಬರುತ್ತಾರೆ‘; ಅಫ್ಘಾನಿಸ್ತಾನದ ಮೊದಲ ಮಹಿಳಾ ಮೇಯರ್ ಅಸಹಾಯಕತೆ​​

(19 Rowdy Sheeters will be shifted to different districts from Bengaluru Parappana Agrahara Jail)

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ