AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜು ಯುವತಿಯರೇ ಎಚ್ಚರ! ಸ್ನೇಹಿತನ ಜೊತೆಗಿನ ಫೋಟೋ ಹಿಡಿದು ಯುವತಿಗೆ ಬ್ಲಾಕ್ ಮೇಲ್ ಮಾಡಿದ ಸ್ನೇಹಿತ ಅರೆಸ್ಟ್

ಕಾಲೇಜು ಯುವತಿಯರೇ ಎಚ್ಚರ..ಎಚ್ಚರ! ಒಳ್ಳೆಯವರಂತೆ ನಟಿಸಿ ನಿಮ್ಮ ಜೊತೆ ಸ್ನೇಹ ಬೆಳೆಸಿ ನಿಮ್ಮ ಸೀಕ್ರೆಟ್​ಗಳನ್ನು ತಿಳಿದುಕೊಳ್ಳುವವರಿಂದ ದೂರ ಇರಿ. ಯಾರಿಗೂ ಸೀಕ್ರೆಟ್​ ಹಂಚಿಕೊಳ್ಳಬೇಡಿ. 19 ವರ್ಷದ ಯುವಕ ಪಿಯುಸಿ ವಿದ್ಯಾರ್ಥಿನಿ ಜೊತೆ ಸ್ನೇಹ ಬೆಳೆಸಿ ಆಪ್ತನಾಗಿ ಆಕೆ ತನ್ನ ಸ್ನೇಹಿತನ ಜೊತೆ ತೆಗೆಸಿಕೊಂಡಿದ್ದ ಫೋಟೋ ಹಿಡಿದು ಬ್ಲಾಕ್ ಮೇಲ್ ಮಾಡಿ ಹಣ, ಚಿನ್ನಾಭರಣ ದೋಚಿದ್ದಾನೆ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಕಾಲೇಜು ಯುವತಿಯರೇ ಎಚ್ಚರ! ಸ್ನೇಹಿತನ ಜೊತೆಗಿನ ಫೋಟೋ ಹಿಡಿದು ಯುವತಿಗೆ ಬ್ಲಾಕ್ ಮೇಲ್ ಮಾಡಿದ ಸ್ನೇಹಿತ ಅರೆಸ್ಟ್
ತೇಜಸ್
ರಾಚಪ್ಪಾಜಿ ನಾಯ್ಕ್
| Edited By: |

Updated on:Aug 07, 2024 | 8:12 AM

Share

ಬೆಂಗಳೂರು, ಆಗಸ್ಟ್.07: ಕಾಲ ಕೆಟ್ಟೋಗಿದೆ. ನಾವು ನಂಬಿದ ನಮ್ಮವರಿಂದಲೇ ನಮಗೆ ಮೋಸ ಆಗೋದು, ನಮ್ಮವರೇ ನಮ್ಮ ಬೆನ್ನಿಗೆ ಚೂರಿ ಹಾಕೋದು ಎಂದು ಮೋಸ ಹೋದ ಮೇಧಾವಿಗಳು ಬುದ್ದಿ ಹೇಳೋದನ್ನ ನಾವು ಕೇಳಿರ್ತೀವಿ. ಆದರೆ ಬೆಂಗಳೂರಿನಲ್ಲಿ ಇದೇ ರೀತಿಯ ಘಟನೆಯೊಂದು ನಡೆದಿದೆ. ಕಾಲೇಜು ಯುವತಿಯ ಜೊತೆ ಸ್ನೇಹ ಬೆಳೆಸಿ ಆಪ್ತನಾಗಿ ಅವಳ ಸೀಕ್ರೆಟ್​ಗಳನ್ನು ತಿಳಿದುಕೊಂಡು ಬಳಿಕ ಅವರಿಗೆಯೇ ಬ್ಲಾಕ್ ಮೇಲ್ ಮಾಡಿ ಚಿನ್ನ, ಹಣ ವಸೂಲಿ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ತೇಜಸ್ (19)ನನ್ನು ಸುಬ್ರಹ್ಮಣ್ಯಪುರ ಪೊಲೀಸರು ಬಂಧಿಸಿದ್ದು ಬಂಧಿತನಿಂದ ಮೂರುವರೆ ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಆರೋಪಿ ತೇಜಸ್ ಮೊದ ಮೊದಲು ಒಳ್ಳೆಯವನಂತೆ ನಟಿಸಿ‌ ಪಿಯುಸಿ ಓದುತ್ತಿದ್ದ ಕಾಲೇಜು ಯುವತಿ ಜೊತೆ ಸ್ನೇಹ ಬೆಳೆಸಿದ್ದ. ಕಾಫಿ, ಊಟ, ತಿಂಡಿ ಎಂದು ಕರೆದುಕೊಂಡು ಹೋಗ್ತಿದ್ದ. ಹೋಗ್ತಾ ಹೋಗ್ತಾ ಯುವತಿಯ ಸೀಕ್ರೆಟ್ ಎಲ್ಲವನ್ನೂ ತಿಳಿದುಕೊಂಡಿದ್ದ. ಇದೇ ವೇಳೆ ಯುವತಿ ತನ್ನ ಸ್ನೇಹಿತನ ಜೊತೆ ಇರುವ ಫೋಟೋವನ್ನು ತೆಗೆದು ಕೊಂಡು ಬ್ಲಾಕ್ ಮೇಲ್ ಮಾಡಲು ಶುರು ಮಾಡಿದ್ದ. ಸ್ನೇಹಿತನ ಜೊತೆಗಿನ‌ ಫೋಟೋವನ್ನು ನಿಮ್ಮ ಕುಟುಂಬಸ್ಥರಿಗೆ ಕಳಿಸೋದಾಗಿ ಬೆದರಿಕೆ ಹಾಕಿದ್ದ.

ಇದನ್ನೂ ಓದಿ: ಪತ್ನಿಯನ್ನು ಕೊಂದು ಫೇಸ್‌ಬುಕ್‌ ಲೈವ್‌ ಮಾಡಿದ್ದ ಕ್ರೂರ ಪತಿ ಪೊಲೀಸರಿಂದ ತಪ್ಪಿಸಿಕೊಳ್ಳುವ ಆತುರದಲ್ಲಿ ಬಿದ್ದು ಸಾವು

ಪ್ರೀತಿ ಮಾಡ್ತಿದ್ದೀಯಾ? ನೀನು ಕಾಲೇಜಿಗೆ ಹೋಗದಂತೆ ಮಾಡ್ತಿನಿ ಎಂದು ಬ್ಲಾಕ್ ಮೇಲ್ ಮಾಡಿ ಹೇಳಬಾರದೆಂದರೆ ಹಣ, ಚಿನ್ನ ನೀಡುವಂತೆ ಡಿಮ್ಯಾಂಡ್ ಮಾಡಿದ್ದಾನೆ. ಅಲ್ಲದೆ ಕಾಲೇಜು ಹಾಗೂ ಮನೆ ಬಳಿ ಬಂದು ಯುವತಿಯನ್ನು ಹೆದರಿಸಿದ್ದಾನೆ. ಇದರಿಂದ ಹೆದರಿದ್ದ ಯುವತಿ ಮನೆಯಲ್ಲಿದ್ದ ಚಿನ್ನ ತಂದು ತೇಜಸ್​ಗೆ ನೀಡಿದ್ದಳು. ಹಂತ ಹಂತವಾಗಿ ಆರೋಪಿ ಮೂರುವರೆ ಲಕ್ಷ ಮೌಲ್ಯದ 75 ಗ್ರಾಂ ಚಿನ್ನಾಭರಣ ಸುಲಿಗೆ ಮಾಡಿದ್ದಾನೆ.

ಇನ್ನು ಮನೆಯಲ್ಲಿ ಚಿನ್ನಾಭರಣ ಕಾಣೆಯಾಗಿರೋದು ಯುವತಿ ತಾಯಿ ಗಮನಕ್ಕೆ ಬಂದಿದ್ದು ಮಗಳನ್ನು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಗೆ ಯುವತಿ ತಾಯಿ ದೂರು ನೀಡಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:08 am, Wed, 7 August 24

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ