AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜು ಯುವತಿಯರೇ ಎಚ್ಚರ! ಸ್ನೇಹಿತನ ಜೊತೆಗಿನ ಫೋಟೋ ಹಿಡಿದು ಯುವತಿಗೆ ಬ್ಲಾಕ್ ಮೇಲ್ ಮಾಡಿದ ಸ್ನೇಹಿತ ಅರೆಸ್ಟ್

ಕಾಲೇಜು ಯುವತಿಯರೇ ಎಚ್ಚರ..ಎಚ್ಚರ! ಒಳ್ಳೆಯವರಂತೆ ನಟಿಸಿ ನಿಮ್ಮ ಜೊತೆ ಸ್ನೇಹ ಬೆಳೆಸಿ ನಿಮ್ಮ ಸೀಕ್ರೆಟ್​ಗಳನ್ನು ತಿಳಿದುಕೊಳ್ಳುವವರಿಂದ ದೂರ ಇರಿ. ಯಾರಿಗೂ ಸೀಕ್ರೆಟ್​ ಹಂಚಿಕೊಳ್ಳಬೇಡಿ. 19 ವರ್ಷದ ಯುವಕ ಪಿಯುಸಿ ವಿದ್ಯಾರ್ಥಿನಿ ಜೊತೆ ಸ್ನೇಹ ಬೆಳೆಸಿ ಆಪ್ತನಾಗಿ ಆಕೆ ತನ್ನ ಸ್ನೇಹಿತನ ಜೊತೆ ತೆಗೆಸಿಕೊಂಡಿದ್ದ ಫೋಟೋ ಹಿಡಿದು ಬ್ಲಾಕ್ ಮೇಲ್ ಮಾಡಿ ಹಣ, ಚಿನ್ನಾಭರಣ ದೋಚಿದ್ದಾನೆ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಕಾಲೇಜು ಯುವತಿಯರೇ ಎಚ್ಚರ! ಸ್ನೇಹಿತನ ಜೊತೆಗಿನ ಫೋಟೋ ಹಿಡಿದು ಯುವತಿಗೆ ಬ್ಲಾಕ್ ಮೇಲ್ ಮಾಡಿದ ಸ್ನೇಹಿತ ಅರೆಸ್ಟ್
ತೇಜಸ್
ರಾಚಪ್ಪಾಜಿ ನಾಯ್ಕ್
| Edited By: |

Updated on:Aug 07, 2024 | 8:12 AM

Share

ಬೆಂಗಳೂರು, ಆಗಸ್ಟ್.07: ಕಾಲ ಕೆಟ್ಟೋಗಿದೆ. ನಾವು ನಂಬಿದ ನಮ್ಮವರಿಂದಲೇ ನಮಗೆ ಮೋಸ ಆಗೋದು, ನಮ್ಮವರೇ ನಮ್ಮ ಬೆನ್ನಿಗೆ ಚೂರಿ ಹಾಕೋದು ಎಂದು ಮೋಸ ಹೋದ ಮೇಧಾವಿಗಳು ಬುದ್ದಿ ಹೇಳೋದನ್ನ ನಾವು ಕೇಳಿರ್ತೀವಿ. ಆದರೆ ಬೆಂಗಳೂರಿನಲ್ಲಿ ಇದೇ ರೀತಿಯ ಘಟನೆಯೊಂದು ನಡೆದಿದೆ. ಕಾಲೇಜು ಯುವತಿಯ ಜೊತೆ ಸ್ನೇಹ ಬೆಳೆಸಿ ಆಪ್ತನಾಗಿ ಅವಳ ಸೀಕ್ರೆಟ್​ಗಳನ್ನು ತಿಳಿದುಕೊಂಡು ಬಳಿಕ ಅವರಿಗೆಯೇ ಬ್ಲಾಕ್ ಮೇಲ್ ಮಾಡಿ ಚಿನ್ನ, ಹಣ ವಸೂಲಿ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ತೇಜಸ್ (19)ನನ್ನು ಸುಬ್ರಹ್ಮಣ್ಯಪುರ ಪೊಲೀಸರು ಬಂಧಿಸಿದ್ದು ಬಂಧಿತನಿಂದ ಮೂರುವರೆ ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಆರೋಪಿ ತೇಜಸ್ ಮೊದ ಮೊದಲು ಒಳ್ಳೆಯವನಂತೆ ನಟಿಸಿ‌ ಪಿಯುಸಿ ಓದುತ್ತಿದ್ದ ಕಾಲೇಜು ಯುವತಿ ಜೊತೆ ಸ್ನೇಹ ಬೆಳೆಸಿದ್ದ. ಕಾಫಿ, ಊಟ, ತಿಂಡಿ ಎಂದು ಕರೆದುಕೊಂಡು ಹೋಗ್ತಿದ್ದ. ಹೋಗ್ತಾ ಹೋಗ್ತಾ ಯುವತಿಯ ಸೀಕ್ರೆಟ್ ಎಲ್ಲವನ್ನೂ ತಿಳಿದುಕೊಂಡಿದ್ದ. ಇದೇ ವೇಳೆ ಯುವತಿ ತನ್ನ ಸ್ನೇಹಿತನ ಜೊತೆ ಇರುವ ಫೋಟೋವನ್ನು ತೆಗೆದು ಕೊಂಡು ಬ್ಲಾಕ್ ಮೇಲ್ ಮಾಡಲು ಶುರು ಮಾಡಿದ್ದ. ಸ್ನೇಹಿತನ ಜೊತೆಗಿನ‌ ಫೋಟೋವನ್ನು ನಿಮ್ಮ ಕುಟುಂಬಸ್ಥರಿಗೆ ಕಳಿಸೋದಾಗಿ ಬೆದರಿಕೆ ಹಾಕಿದ್ದ.

ಇದನ್ನೂ ಓದಿ: ಪತ್ನಿಯನ್ನು ಕೊಂದು ಫೇಸ್‌ಬುಕ್‌ ಲೈವ್‌ ಮಾಡಿದ್ದ ಕ್ರೂರ ಪತಿ ಪೊಲೀಸರಿಂದ ತಪ್ಪಿಸಿಕೊಳ್ಳುವ ಆತುರದಲ್ಲಿ ಬಿದ್ದು ಸಾವು

ಪ್ರೀತಿ ಮಾಡ್ತಿದ್ದೀಯಾ? ನೀನು ಕಾಲೇಜಿಗೆ ಹೋಗದಂತೆ ಮಾಡ್ತಿನಿ ಎಂದು ಬ್ಲಾಕ್ ಮೇಲ್ ಮಾಡಿ ಹೇಳಬಾರದೆಂದರೆ ಹಣ, ಚಿನ್ನ ನೀಡುವಂತೆ ಡಿಮ್ಯಾಂಡ್ ಮಾಡಿದ್ದಾನೆ. ಅಲ್ಲದೆ ಕಾಲೇಜು ಹಾಗೂ ಮನೆ ಬಳಿ ಬಂದು ಯುವತಿಯನ್ನು ಹೆದರಿಸಿದ್ದಾನೆ. ಇದರಿಂದ ಹೆದರಿದ್ದ ಯುವತಿ ಮನೆಯಲ್ಲಿದ್ದ ಚಿನ್ನ ತಂದು ತೇಜಸ್​ಗೆ ನೀಡಿದ್ದಳು. ಹಂತ ಹಂತವಾಗಿ ಆರೋಪಿ ಮೂರುವರೆ ಲಕ್ಷ ಮೌಲ್ಯದ 75 ಗ್ರಾಂ ಚಿನ್ನಾಭರಣ ಸುಲಿಗೆ ಮಾಡಿದ್ದಾನೆ.

ಇನ್ನು ಮನೆಯಲ್ಲಿ ಚಿನ್ನಾಭರಣ ಕಾಣೆಯಾಗಿರೋದು ಯುವತಿ ತಾಯಿ ಗಮನಕ್ಕೆ ಬಂದಿದ್ದು ಮಗಳನ್ನು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಗೆ ಯುವತಿ ತಾಯಿ ದೂರು ನೀಡಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:08 am, Wed, 7 August 24

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!