AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜು ಯುವತಿಯರೇ ಎಚ್ಚರ! ಸ್ನೇಹಿತನ ಜೊತೆಗಿನ ಫೋಟೋ ಹಿಡಿದು ಯುವತಿಗೆ ಬ್ಲಾಕ್ ಮೇಲ್ ಮಾಡಿದ ಸ್ನೇಹಿತ ಅರೆಸ್ಟ್

ಕಾಲೇಜು ಯುವತಿಯರೇ ಎಚ್ಚರ..ಎಚ್ಚರ! ಒಳ್ಳೆಯವರಂತೆ ನಟಿಸಿ ನಿಮ್ಮ ಜೊತೆ ಸ್ನೇಹ ಬೆಳೆಸಿ ನಿಮ್ಮ ಸೀಕ್ರೆಟ್​ಗಳನ್ನು ತಿಳಿದುಕೊಳ್ಳುವವರಿಂದ ದೂರ ಇರಿ. ಯಾರಿಗೂ ಸೀಕ್ರೆಟ್​ ಹಂಚಿಕೊಳ್ಳಬೇಡಿ. 19 ವರ್ಷದ ಯುವಕ ಪಿಯುಸಿ ವಿದ್ಯಾರ್ಥಿನಿ ಜೊತೆ ಸ್ನೇಹ ಬೆಳೆಸಿ ಆಪ್ತನಾಗಿ ಆಕೆ ತನ್ನ ಸ್ನೇಹಿತನ ಜೊತೆ ತೆಗೆಸಿಕೊಂಡಿದ್ದ ಫೋಟೋ ಹಿಡಿದು ಬ್ಲಾಕ್ ಮೇಲ್ ಮಾಡಿ ಹಣ, ಚಿನ್ನಾಭರಣ ದೋಚಿದ್ದಾನೆ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಕಾಲೇಜು ಯುವತಿಯರೇ ಎಚ್ಚರ! ಸ್ನೇಹಿತನ ಜೊತೆಗಿನ ಫೋಟೋ ಹಿಡಿದು ಯುವತಿಗೆ ಬ್ಲಾಕ್ ಮೇಲ್ ಮಾಡಿದ ಸ್ನೇಹಿತ ಅರೆಸ್ಟ್
ತೇಜಸ್
ರಾಚಪ್ಪಾಜಿ ನಾಯ್ಕ್
| Edited By: |

Updated on:Aug 07, 2024 | 8:12 AM

Share

ಬೆಂಗಳೂರು, ಆಗಸ್ಟ್.07: ಕಾಲ ಕೆಟ್ಟೋಗಿದೆ. ನಾವು ನಂಬಿದ ನಮ್ಮವರಿಂದಲೇ ನಮಗೆ ಮೋಸ ಆಗೋದು, ನಮ್ಮವರೇ ನಮ್ಮ ಬೆನ್ನಿಗೆ ಚೂರಿ ಹಾಕೋದು ಎಂದು ಮೋಸ ಹೋದ ಮೇಧಾವಿಗಳು ಬುದ್ದಿ ಹೇಳೋದನ್ನ ನಾವು ಕೇಳಿರ್ತೀವಿ. ಆದರೆ ಬೆಂಗಳೂರಿನಲ್ಲಿ ಇದೇ ರೀತಿಯ ಘಟನೆಯೊಂದು ನಡೆದಿದೆ. ಕಾಲೇಜು ಯುವತಿಯ ಜೊತೆ ಸ್ನೇಹ ಬೆಳೆಸಿ ಆಪ್ತನಾಗಿ ಅವಳ ಸೀಕ್ರೆಟ್​ಗಳನ್ನು ತಿಳಿದುಕೊಂಡು ಬಳಿಕ ಅವರಿಗೆಯೇ ಬ್ಲಾಕ್ ಮೇಲ್ ಮಾಡಿ ಚಿನ್ನ, ಹಣ ವಸೂಲಿ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ತೇಜಸ್ (19)ನನ್ನು ಸುಬ್ರಹ್ಮಣ್ಯಪುರ ಪೊಲೀಸರು ಬಂಧಿಸಿದ್ದು ಬಂಧಿತನಿಂದ ಮೂರುವರೆ ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಆರೋಪಿ ತೇಜಸ್ ಮೊದ ಮೊದಲು ಒಳ್ಳೆಯವನಂತೆ ನಟಿಸಿ‌ ಪಿಯುಸಿ ಓದುತ್ತಿದ್ದ ಕಾಲೇಜು ಯುವತಿ ಜೊತೆ ಸ್ನೇಹ ಬೆಳೆಸಿದ್ದ. ಕಾಫಿ, ಊಟ, ತಿಂಡಿ ಎಂದು ಕರೆದುಕೊಂಡು ಹೋಗ್ತಿದ್ದ. ಹೋಗ್ತಾ ಹೋಗ್ತಾ ಯುವತಿಯ ಸೀಕ್ರೆಟ್ ಎಲ್ಲವನ್ನೂ ತಿಳಿದುಕೊಂಡಿದ್ದ. ಇದೇ ವೇಳೆ ಯುವತಿ ತನ್ನ ಸ್ನೇಹಿತನ ಜೊತೆ ಇರುವ ಫೋಟೋವನ್ನು ತೆಗೆದು ಕೊಂಡು ಬ್ಲಾಕ್ ಮೇಲ್ ಮಾಡಲು ಶುರು ಮಾಡಿದ್ದ. ಸ್ನೇಹಿತನ ಜೊತೆಗಿನ‌ ಫೋಟೋವನ್ನು ನಿಮ್ಮ ಕುಟುಂಬಸ್ಥರಿಗೆ ಕಳಿಸೋದಾಗಿ ಬೆದರಿಕೆ ಹಾಕಿದ್ದ.

ಇದನ್ನೂ ಓದಿ: ಪತ್ನಿಯನ್ನು ಕೊಂದು ಫೇಸ್‌ಬುಕ್‌ ಲೈವ್‌ ಮಾಡಿದ್ದ ಕ್ರೂರ ಪತಿ ಪೊಲೀಸರಿಂದ ತಪ್ಪಿಸಿಕೊಳ್ಳುವ ಆತುರದಲ್ಲಿ ಬಿದ್ದು ಸಾವು

ಪ್ರೀತಿ ಮಾಡ್ತಿದ್ದೀಯಾ? ನೀನು ಕಾಲೇಜಿಗೆ ಹೋಗದಂತೆ ಮಾಡ್ತಿನಿ ಎಂದು ಬ್ಲಾಕ್ ಮೇಲ್ ಮಾಡಿ ಹೇಳಬಾರದೆಂದರೆ ಹಣ, ಚಿನ್ನ ನೀಡುವಂತೆ ಡಿಮ್ಯಾಂಡ್ ಮಾಡಿದ್ದಾನೆ. ಅಲ್ಲದೆ ಕಾಲೇಜು ಹಾಗೂ ಮನೆ ಬಳಿ ಬಂದು ಯುವತಿಯನ್ನು ಹೆದರಿಸಿದ್ದಾನೆ. ಇದರಿಂದ ಹೆದರಿದ್ದ ಯುವತಿ ಮನೆಯಲ್ಲಿದ್ದ ಚಿನ್ನ ತಂದು ತೇಜಸ್​ಗೆ ನೀಡಿದ್ದಳು. ಹಂತ ಹಂತವಾಗಿ ಆರೋಪಿ ಮೂರುವರೆ ಲಕ್ಷ ಮೌಲ್ಯದ 75 ಗ್ರಾಂ ಚಿನ್ನಾಭರಣ ಸುಲಿಗೆ ಮಾಡಿದ್ದಾನೆ.

ಇನ್ನು ಮನೆಯಲ್ಲಿ ಚಿನ್ನಾಭರಣ ಕಾಣೆಯಾಗಿರೋದು ಯುವತಿ ತಾಯಿ ಗಮನಕ್ಕೆ ಬಂದಿದ್ದು ಮಗಳನ್ನು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಗೆ ಯುವತಿ ತಾಯಿ ದೂರು ನೀಡಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:08 am, Wed, 7 August 24

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ