AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ಪೋರ್ಟ್​ಗೆ ಬಂದ ಪ್ಲೈಟ್​ನಲ್ಲಿ ಪತ್ತೆಯಾಯ್ತು ಕೋಟಿ ಮೌಲ್ಯದ ಚಿನ್ನ; 2.8 ಕೆಜಿ ಚಿನ್ನದ ಬಿಸ್ಕೆಟ್ ವಶ

ತನಿಖೆಗೆ ಭಯಪಟ್ಟು ಸೀಟ್ ಕೆಳಗಡೆ ಚಿನ್ನ ಅಡಗಿಸಿಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸೀಟ್​ನಲ್ಲಿ ಕುಳಿತಿದ್ದ ಪ್ರಯಾಣಿಕ ಲಿಸ್ಟ್ ಪಡೆದು ಅಧಿಕಾರಿಗಳು ತನಿಖೆಗೆ ಮುಂದಾಗಿದ್ದಾರೆ.

ಏರ್ಪೋರ್ಟ್​ಗೆ ಬಂದ ಪ್ಲೈಟ್​ನಲ್ಲಿ ಪತ್ತೆಯಾಯ್ತು ಕೋಟಿ ಮೌಲ್ಯದ ಚಿನ್ನ; 2.8 ಕೆಜಿ ಚಿನ್ನದ ಬಿಸ್ಕೆಟ್ ವಶ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jan 05, 2022 | 12:23 PM

Share

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 2.8 ಕೆಜಿ ಚಿನ್ನವನ್ನು ವಶಪಡಿಸಿಕೊಂಡ ಘಟನೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda international Airport) ನಡೆದಿದೆ. ಏರ್ಪೋಟ್​ಗೆ ಬಂದ ವಿಮಾನದಲ್ಲಿ ಕೋಟಿ ಕೋಟಿ ರೂಪಾಯಿ ಮೌಲ್ಯದ ಚಿನ್ನ (Gold) ಪತ್ತೆಯಾಗಿದೆ.  ವಿಮಾನದ ಸೀಟ್​ ಕೆಳಗಡೆ ಚಿನ್ನವನ್ನು ಅಡಗಿಸಿಟ್ಟು ಕಳ್ಳ ಸಾಗಣಿಕೆ ಮಾಡುತ್ತಿದ್ದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ದುಬೈನಿಂದ ಬಂದ ಇಂಡಿಗೋ ವಿಮಾನದ ಸೀಟ್ ಕೆಳಗಡೆ ಬಿಸ್ಕೆಟ್ ರೂಪದಲ್ಲಿ ಚಿನ್ನವನ್ನು ಅಡಗಿಸಿಟ್ಟು ತರಲಾಗಿತ್ತು.

ಸ್ಮಗ್ಲರ್ಸ್ 24 ಬಿಸ್ಕೆಟ್​ಗಳಲ್ಲಿ ಚಿನ್ನ ಸಾಗಾಟ ಮಾಡುತ್ತಿದ್ದರು. ಪ್ಲೈಟ್ ಚೆಕಿಂಗ್ ವೇಳೆ ಚಿನ್ನ ಪತ್ತೆಯಾಗಿದೆ.  ಚಿನ್ನವನ್ನು ವಶಕ್ಕೆ ಪಡೆದು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ತನಿಖೆಗೆ ಭಯಪಟ್ಟು ಸೀಟ್ ಕೆಳಗಡೆ ಚಿನ್ನ ಅಡಗಿಸಿಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸೀಟ್​ನಲ್ಲಿ ಕುಳಿತಿದ್ದ ಪ್ರಯಾಣಿಕ ಲಿಸ್ಟ್ ಪಡೆದು ಅಧಿಕಾರಿಗಳು ತನಿಖೆಗೆ ಮುಂದಾಗಿದ್ದಾರೆ.

ಬೆಂಗಳೂರು: ಶಾಲೆಯ ಕ್ವಾಟ್ರಸ್​ಗೆ ನುಗ್ಗಿ ಚಿನ್ನಾಭರಣ ದೋಚಿ ಪರಾರಿ ರಾತ್ರಿ ವೇಳೆ ಶಾಲೆಯ ಕ್ವಾಟ್ರಸ್​ಗೆ ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಬೆಂಗಳೂರಿನ ದೊಮ್ಮಲೂರು ಬಳಿಯ ಟಿಐಬಿಎಸ್​ ಶಾಲೆಯಲ್ಲಿ ನಡೆದಿದೆ. ಕಳ್ಳರು ಚಿನ್ನಾಭರಣ ದೋಚುವ ಜೊತೆಗೆ ಅಶ್ಲೀಲ ಚಿತ್ರಗಳನ್ನು ಬರೆದು ವಿಕೃತಿ ಮೆರೆದಿದ್ದಾರೆ. ಜನವರಿ 2ನೇ ತಾರಿಕು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೇರಳ ಮೂಲದ ಶಿಕ್ಷಕಿ ವಾಸವಿದ್ದ ಫ್ಲಾಟ್​ನಲ್ಲಿ ಕಳ್ಳತನ ಮಾಡಲಾಗಿದೆ. ಕಳ್ಳರು 120 ಗ್ರಾಂ ಚಿನ್ನ, ಮೊಬೈಲ್ ಮತ್ತು ನಗದು ಹೊತ್ತೋಯ್ದಿದ್ದಾರೆ.

ಕಳ್ಳತನ ಮಾಡಿದ್ದು, ಈ ವೇಳೆ ಮನೆಯಲ್ಲಿದ್ದ ಗೊಂಬೆ ಮೇಲು ವಿಕೃತಿ ಮೆರೆದು ಬರಹ ಬರೆದಿದ್ದಾರೆ. ಪ್ರತಿಷ್ಟಿತ ಶಾಲೆಯಲ್ಲಿ ನಡೆದ ವಿಕೃತ ಕಳ್ಳತನದಿಂದ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. ಹೊಸ ವರ್ಷಕ್ಕೆ ಶಿಕ್ಷಕಿ ತವರಿಗೆ ಹೋಗಿ ಬಂದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಸದ್ಯ ಸರ್ಜಾಪುರ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು: 28 ಮನೆ, 5 ಕಾರು, ಚಿನ್ನ, ಬೆಳ್ಳಿ; ಎಸಿಬಿ ದಾಳಿ ವೇಳೆ ವಾಸುದೇವ್ ಮನೆಯಲ್ಲಿ ಪತ್ತೆಯಾದ ಆಸ್ತಿ ವಿವರ ಇದು

ಒಂದು ವರ್ಷದಲ್ಲಿ 56 ಚಿನ್ನ ಕದ್ದ ಪ್ರಕರಣಗಳನ್ನು ಪತ್ತೆ ಹಚ್ಚಿದ ರಾಮನಗರ ಪೊಲೀಸ್, 86 ಮಂದಿ ಅರೆಸ್ಟ್

Published On - 12:17 pm, Wed, 5 January 22

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ