AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ಪೋರ್ಟ್​ಗೆ ಬಂದ ಪ್ಲೈಟ್​ನಲ್ಲಿ ಪತ್ತೆಯಾಯ್ತು ಕೋಟಿ ಮೌಲ್ಯದ ಚಿನ್ನ; 2.8 ಕೆಜಿ ಚಿನ್ನದ ಬಿಸ್ಕೆಟ್ ವಶ

ತನಿಖೆಗೆ ಭಯಪಟ್ಟು ಸೀಟ್ ಕೆಳಗಡೆ ಚಿನ್ನ ಅಡಗಿಸಿಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸೀಟ್​ನಲ್ಲಿ ಕುಳಿತಿದ್ದ ಪ್ರಯಾಣಿಕ ಲಿಸ್ಟ್ ಪಡೆದು ಅಧಿಕಾರಿಗಳು ತನಿಖೆಗೆ ಮುಂದಾಗಿದ್ದಾರೆ.

ಏರ್ಪೋರ್ಟ್​ಗೆ ಬಂದ ಪ್ಲೈಟ್​ನಲ್ಲಿ ಪತ್ತೆಯಾಯ್ತು ಕೋಟಿ ಮೌಲ್ಯದ ಚಿನ್ನ; 2.8 ಕೆಜಿ ಚಿನ್ನದ ಬಿಸ್ಕೆಟ್ ವಶ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jan 05, 2022 | 12:23 PM

Share

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 2.8 ಕೆಜಿ ಚಿನ್ನವನ್ನು ವಶಪಡಿಸಿಕೊಂಡ ಘಟನೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda international Airport) ನಡೆದಿದೆ. ಏರ್ಪೋಟ್​ಗೆ ಬಂದ ವಿಮಾನದಲ್ಲಿ ಕೋಟಿ ಕೋಟಿ ರೂಪಾಯಿ ಮೌಲ್ಯದ ಚಿನ್ನ (Gold) ಪತ್ತೆಯಾಗಿದೆ.  ವಿಮಾನದ ಸೀಟ್​ ಕೆಳಗಡೆ ಚಿನ್ನವನ್ನು ಅಡಗಿಸಿಟ್ಟು ಕಳ್ಳ ಸಾಗಣಿಕೆ ಮಾಡುತ್ತಿದ್ದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ದುಬೈನಿಂದ ಬಂದ ಇಂಡಿಗೋ ವಿಮಾನದ ಸೀಟ್ ಕೆಳಗಡೆ ಬಿಸ್ಕೆಟ್ ರೂಪದಲ್ಲಿ ಚಿನ್ನವನ್ನು ಅಡಗಿಸಿಟ್ಟು ತರಲಾಗಿತ್ತು.

ಸ್ಮಗ್ಲರ್ಸ್ 24 ಬಿಸ್ಕೆಟ್​ಗಳಲ್ಲಿ ಚಿನ್ನ ಸಾಗಾಟ ಮಾಡುತ್ತಿದ್ದರು. ಪ್ಲೈಟ್ ಚೆಕಿಂಗ್ ವೇಳೆ ಚಿನ್ನ ಪತ್ತೆಯಾಗಿದೆ.  ಚಿನ್ನವನ್ನು ವಶಕ್ಕೆ ಪಡೆದು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ತನಿಖೆಗೆ ಭಯಪಟ್ಟು ಸೀಟ್ ಕೆಳಗಡೆ ಚಿನ್ನ ಅಡಗಿಸಿಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸೀಟ್​ನಲ್ಲಿ ಕುಳಿತಿದ್ದ ಪ್ರಯಾಣಿಕ ಲಿಸ್ಟ್ ಪಡೆದು ಅಧಿಕಾರಿಗಳು ತನಿಖೆಗೆ ಮುಂದಾಗಿದ್ದಾರೆ.

ಬೆಂಗಳೂರು: ಶಾಲೆಯ ಕ್ವಾಟ್ರಸ್​ಗೆ ನುಗ್ಗಿ ಚಿನ್ನಾಭರಣ ದೋಚಿ ಪರಾರಿ ರಾತ್ರಿ ವೇಳೆ ಶಾಲೆಯ ಕ್ವಾಟ್ರಸ್​ಗೆ ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಬೆಂಗಳೂರಿನ ದೊಮ್ಮಲೂರು ಬಳಿಯ ಟಿಐಬಿಎಸ್​ ಶಾಲೆಯಲ್ಲಿ ನಡೆದಿದೆ. ಕಳ್ಳರು ಚಿನ್ನಾಭರಣ ದೋಚುವ ಜೊತೆಗೆ ಅಶ್ಲೀಲ ಚಿತ್ರಗಳನ್ನು ಬರೆದು ವಿಕೃತಿ ಮೆರೆದಿದ್ದಾರೆ. ಜನವರಿ 2ನೇ ತಾರಿಕು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೇರಳ ಮೂಲದ ಶಿಕ್ಷಕಿ ವಾಸವಿದ್ದ ಫ್ಲಾಟ್​ನಲ್ಲಿ ಕಳ್ಳತನ ಮಾಡಲಾಗಿದೆ. ಕಳ್ಳರು 120 ಗ್ರಾಂ ಚಿನ್ನ, ಮೊಬೈಲ್ ಮತ್ತು ನಗದು ಹೊತ್ತೋಯ್ದಿದ್ದಾರೆ.

ಕಳ್ಳತನ ಮಾಡಿದ್ದು, ಈ ವೇಳೆ ಮನೆಯಲ್ಲಿದ್ದ ಗೊಂಬೆ ಮೇಲು ವಿಕೃತಿ ಮೆರೆದು ಬರಹ ಬರೆದಿದ್ದಾರೆ. ಪ್ರತಿಷ್ಟಿತ ಶಾಲೆಯಲ್ಲಿ ನಡೆದ ವಿಕೃತ ಕಳ್ಳತನದಿಂದ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. ಹೊಸ ವರ್ಷಕ್ಕೆ ಶಿಕ್ಷಕಿ ತವರಿಗೆ ಹೋಗಿ ಬಂದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಸದ್ಯ ಸರ್ಜಾಪುರ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು: 28 ಮನೆ, 5 ಕಾರು, ಚಿನ್ನ, ಬೆಳ್ಳಿ; ಎಸಿಬಿ ದಾಳಿ ವೇಳೆ ವಾಸುದೇವ್ ಮನೆಯಲ್ಲಿ ಪತ್ತೆಯಾದ ಆಸ್ತಿ ವಿವರ ಇದು

ಒಂದು ವರ್ಷದಲ್ಲಿ 56 ಚಿನ್ನ ಕದ್ದ ಪ್ರಕರಣಗಳನ್ನು ಪತ್ತೆ ಹಚ್ಚಿದ ರಾಮನಗರ ಪೊಲೀಸ್, 86 ಮಂದಿ ಅರೆಸ್ಟ್

Published On - 12:17 pm, Wed, 5 January 22

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?