AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ಪೋರ್ಟ್​ಗೆ ಬಂದ ಪ್ಲೈಟ್​ನಲ್ಲಿ ಪತ್ತೆಯಾಯ್ತು ಕೋಟಿ ಮೌಲ್ಯದ ಚಿನ್ನ; 2.8 ಕೆಜಿ ಚಿನ್ನದ ಬಿಸ್ಕೆಟ್ ವಶ

ತನಿಖೆಗೆ ಭಯಪಟ್ಟು ಸೀಟ್ ಕೆಳಗಡೆ ಚಿನ್ನ ಅಡಗಿಸಿಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸೀಟ್​ನಲ್ಲಿ ಕುಳಿತಿದ್ದ ಪ್ರಯಾಣಿಕ ಲಿಸ್ಟ್ ಪಡೆದು ಅಧಿಕಾರಿಗಳು ತನಿಖೆಗೆ ಮುಂದಾಗಿದ್ದಾರೆ.

ಏರ್ಪೋರ್ಟ್​ಗೆ ಬಂದ ಪ್ಲೈಟ್​ನಲ್ಲಿ ಪತ್ತೆಯಾಯ್ತು ಕೋಟಿ ಮೌಲ್ಯದ ಚಿನ್ನ; 2.8 ಕೆಜಿ ಚಿನ್ನದ ಬಿಸ್ಕೆಟ್ ವಶ
ಸಾಂದರ್ಭಿಕ ಚಿತ್ರ
TV9 Web
| Updated By: preethi shettigar|

Updated on:Jan 05, 2022 | 12:23 PM

Share

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 2.8 ಕೆಜಿ ಚಿನ್ನವನ್ನು ವಶಪಡಿಸಿಕೊಂಡ ಘಟನೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda international Airport) ನಡೆದಿದೆ. ಏರ್ಪೋಟ್​ಗೆ ಬಂದ ವಿಮಾನದಲ್ಲಿ ಕೋಟಿ ಕೋಟಿ ರೂಪಾಯಿ ಮೌಲ್ಯದ ಚಿನ್ನ (Gold) ಪತ್ತೆಯಾಗಿದೆ.  ವಿಮಾನದ ಸೀಟ್​ ಕೆಳಗಡೆ ಚಿನ್ನವನ್ನು ಅಡಗಿಸಿಟ್ಟು ಕಳ್ಳ ಸಾಗಣಿಕೆ ಮಾಡುತ್ತಿದ್ದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ದುಬೈನಿಂದ ಬಂದ ಇಂಡಿಗೋ ವಿಮಾನದ ಸೀಟ್ ಕೆಳಗಡೆ ಬಿಸ್ಕೆಟ್ ರೂಪದಲ್ಲಿ ಚಿನ್ನವನ್ನು ಅಡಗಿಸಿಟ್ಟು ತರಲಾಗಿತ್ತು.

ಸ್ಮಗ್ಲರ್ಸ್ 24 ಬಿಸ್ಕೆಟ್​ಗಳಲ್ಲಿ ಚಿನ್ನ ಸಾಗಾಟ ಮಾಡುತ್ತಿದ್ದರು. ಪ್ಲೈಟ್ ಚೆಕಿಂಗ್ ವೇಳೆ ಚಿನ್ನ ಪತ್ತೆಯಾಗಿದೆ.  ಚಿನ್ನವನ್ನು ವಶಕ್ಕೆ ಪಡೆದು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ತನಿಖೆಗೆ ಭಯಪಟ್ಟು ಸೀಟ್ ಕೆಳಗಡೆ ಚಿನ್ನ ಅಡಗಿಸಿಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸೀಟ್​ನಲ್ಲಿ ಕುಳಿತಿದ್ದ ಪ್ರಯಾಣಿಕ ಲಿಸ್ಟ್ ಪಡೆದು ಅಧಿಕಾರಿಗಳು ತನಿಖೆಗೆ ಮುಂದಾಗಿದ್ದಾರೆ.

ಬೆಂಗಳೂರು: ಶಾಲೆಯ ಕ್ವಾಟ್ರಸ್​ಗೆ ನುಗ್ಗಿ ಚಿನ್ನಾಭರಣ ದೋಚಿ ಪರಾರಿ ರಾತ್ರಿ ವೇಳೆ ಶಾಲೆಯ ಕ್ವಾಟ್ರಸ್​ಗೆ ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಬೆಂಗಳೂರಿನ ದೊಮ್ಮಲೂರು ಬಳಿಯ ಟಿಐಬಿಎಸ್​ ಶಾಲೆಯಲ್ಲಿ ನಡೆದಿದೆ. ಕಳ್ಳರು ಚಿನ್ನಾಭರಣ ದೋಚುವ ಜೊತೆಗೆ ಅಶ್ಲೀಲ ಚಿತ್ರಗಳನ್ನು ಬರೆದು ವಿಕೃತಿ ಮೆರೆದಿದ್ದಾರೆ. ಜನವರಿ 2ನೇ ತಾರಿಕು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೇರಳ ಮೂಲದ ಶಿಕ್ಷಕಿ ವಾಸವಿದ್ದ ಫ್ಲಾಟ್​ನಲ್ಲಿ ಕಳ್ಳತನ ಮಾಡಲಾಗಿದೆ. ಕಳ್ಳರು 120 ಗ್ರಾಂ ಚಿನ್ನ, ಮೊಬೈಲ್ ಮತ್ತು ನಗದು ಹೊತ್ತೋಯ್ದಿದ್ದಾರೆ.

ಕಳ್ಳತನ ಮಾಡಿದ್ದು, ಈ ವೇಳೆ ಮನೆಯಲ್ಲಿದ್ದ ಗೊಂಬೆ ಮೇಲು ವಿಕೃತಿ ಮೆರೆದು ಬರಹ ಬರೆದಿದ್ದಾರೆ. ಪ್ರತಿಷ್ಟಿತ ಶಾಲೆಯಲ್ಲಿ ನಡೆದ ವಿಕೃತ ಕಳ್ಳತನದಿಂದ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. ಹೊಸ ವರ್ಷಕ್ಕೆ ಶಿಕ್ಷಕಿ ತವರಿಗೆ ಹೋಗಿ ಬಂದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಸದ್ಯ ಸರ್ಜಾಪುರ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು: 28 ಮನೆ, 5 ಕಾರು, ಚಿನ್ನ, ಬೆಳ್ಳಿ; ಎಸಿಬಿ ದಾಳಿ ವೇಳೆ ವಾಸುದೇವ್ ಮನೆಯಲ್ಲಿ ಪತ್ತೆಯಾದ ಆಸ್ತಿ ವಿವರ ಇದು

ಒಂದು ವರ್ಷದಲ್ಲಿ 56 ಚಿನ್ನ ಕದ್ದ ಪ್ರಕರಣಗಳನ್ನು ಪತ್ತೆ ಹಚ್ಚಿದ ರಾಮನಗರ ಪೊಲೀಸ್, 86 ಮಂದಿ ಅರೆಸ್ಟ್

Published On - 12:17 pm, Wed, 5 January 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!