AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ಪೋರ್ಟ್​ಗೆ ಬಂದ ಪ್ಲೈಟ್​ನಲ್ಲಿ ಪತ್ತೆಯಾಯ್ತು ಕೋಟಿ ಮೌಲ್ಯದ ಚಿನ್ನ; 2.8 ಕೆಜಿ ಚಿನ್ನದ ಬಿಸ್ಕೆಟ್ ವಶ

ತನಿಖೆಗೆ ಭಯಪಟ್ಟು ಸೀಟ್ ಕೆಳಗಡೆ ಚಿನ್ನ ಅಡಗಿಸಿಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸೀಟ್​ನಲ್ಲಿ ಕುಳಿತಿದ್ದ ಪ್ರಯಾಣಿಕ ಲಿಸ್ಟ್ ಪಡೆದು ಅಧಿಕಾರಿಗಳು ತನಿಖೆಗೆ ಮುಂದಾಗಿದ್ದಾರೆ.

ಏರ್ಪೋರ್ಟ್​ಗೆ ಬಂದ ಪ್ಲೈಟ್​ನಲ್ಲಿ ಪತ್ತೆಯಾಯ್ತು ಕೋಟಿ ಮೌಲ್ಯದ ಚಿನ್ನ; 2.8 ಕೆಜಿ ಚಿನ್ನದ ಬಿಸ್ಕೆಟ್ ವಶ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jan 05, 2022 | 12:23 PM

Share

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 2.8 ಕೆಜಿ ಚಿನ್ನವನ್ನು ವಶಪಡಿಸಿಕೊಂಡ ಘಟನೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda international Airport) ನಡೆದಿದೆ. ಏರ್ಪೋಟ್​ಗೆ ಬಂದ ವಿಮಾನದಲ್ಲಿ ಕೋಟಿ ಕೋಟಿ ರೂಪಾಯಿ ಮೌಲ್ಯದ ಚಿನ್ನ (Gold) ಪತ್ತೆಯಾಗಿದೆ.  ವಿಮಾನದ ಸೀಟ್​ ಕೆಳಗಡೆ ಚಿನ್ನವನ್ನು ಅಡಗಿಸಿಟ್ಟು ಕಳ್ಳ ಸಾಗಣಿಕೆ ಮಾಡುತ್ತಿದ್ದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ದುಬೈನಿಂದ ಬಂದ ಇಂಡಿಗೋ ವಿಮಾನದ ಸೀಟ್ ಕೆಳಗಡೆ ಬಿಸ್ಕೆಟ್ ರೂಪದಲ್ಲಿ ಚಿನ್ನವನ್ನು ಅಡಗಿಸಿಟ್ಟು ತರಲಾಗಿತ್ತು.

ಸ್ಮಗ್ಲರ್ಸ್ 24 ಬಿಸ್ಕೆಟ್​ಗಳಲ್ಲಿ ಚಿನ್ನ ಸಾಗಾಟ ಮಾಡುತ್ತಿದ್ದರು. ಪ್ಲೈಟ್ ಚೆಕಿಂಗ್ ವೇಳೆ ಚಿನ್ನ ಪತ್ತೆಯಾಗಿದೆ.  ಚಿನ್ನವನ್ನು ವಶಕ್ಕೆ ಪಡೆದು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ತನಿಖೆಗೆ ಭಯಪಟ್ಟು ಸೀಟ್ ಕೆಳಗಡೆ ಚಿನ್ನ ಅಡಗಿಸಿಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸೀಟ್​ನಲ್ಲಿ ಕುಳಿತಿದ್ದ ಪ್ರಯಾಣಿಕ ಲಿಸ್ಟ್ ಪಡೆದು ಅಧಿಕಾರಿಗಳು ತನಿಖೆಗೆ ಮುಂದಾಗಿದ್ದಾರೆ.

ಬೆಂಗಳೂರು: ಶಾಲೆಯ ಕ್ವಾಟ್ರಸ್​ಗೆ ನುಗ್ಗಿ ಚಿನ್ನಾಭರಣ ದೋಚಿ ಪರಾರಿ ರಾತ್ರಿ ವೇಳೆ ಶಾಲೆಯ ಕ್ವಾಟ್ರಸ್​ಗೆ ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಬೆಂಗಳೂರಿನ ದೊಮ್ಮಲೂರು ಬಳಿಯ ಟಿಐಬಿಎಸ್​ ಶಾಲೆಯಲ್ಲಿ ನಡೆದಿದೆ. ಕಳ್ಳರು ಚಿನ್ನಾಭರಣ ದೋಚುವ ಜೊತೆಗೆ ಅಶ್ಲೀಲ ಚಿತ್ರಗಳನ್ನು ಬರೆದು ವಿಕೃತಿ ಮೆರೆದಿದ್ದಾರೆ. ಜನವರಿ 2ನೇ ತಾರಿಕು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೇರಳ ಮೂಲದ ಶಿಕ್ಷಕಿ ವಾಸವಿದ್ದ ಫ್ಲಾಟ್​ನಲ್ಲಿ ಕಳ್ಳತನ ಮಾಡಲಾಗಿದೆ. ಕಳ್ಳರು 120 ಗ್ರಾಂ ಚಿನ್ನ, ಮೊಬೈಲ್ ಮತ್ತು ನಗದು ಹೊತ್ತೋಯ್ದಿದ್ದಾರೆ.

ಕಳ್ಳತನ ಮಾಡಿದ್ದು, ಈ ವೇಳೆ ಮನೆಯಲ್ಲಿದ್ದ ಗೊಂಬೆ ಮೇಲು ವಿಕೃತಿ ಮೆರೆದು ಬರಹ ಬರೆದಿದ್ದಾರೆ. ಪ್ರತಿಷ್ಟಿತ ಶಾಲೆಯಲ್ಲಿ ನಡೆದ ವಿಕೃತ ಕಳ್ಳತನದಿಂದ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. ಹೊಸ ವರ್ಷಕ್ಕೆ ಶಿಕ್ಷಕಿ ತವರಿಗೆ ಹೋಗಿ ಬಂದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಸದ್ಯ ಸರ್ಜಾಪುರ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು: 28 ಮನೆ, 5 ಕಾರು, ಚಿನ್ನ, ಬೆಳ್ಳಿ; ಎಸಿಬಿ ದಾಳಿ ವೇಳೆ ವಾಸುದೇವ್ ಮನೆಯಲ್ಲಿ ಪತ್ತೆಯಾದ ಆಸ್ತಿ ವಿವರ ಇದು

ಒಂದು ವರ್ಷದಲ್ಲಿ 56 ಚಿನ್ನ ಕದ್ದ ಪ್ರಕರಣಗಳನ್ನು ಪತ್ತೆ ಹಚ್ಚಿದ ರಾಮನಗರ ಪೊಲೀಸ್, 86 ಮಂದಿ ಅರೆಸ್ಟ್

Published On - 12:17 pm, Wed, 5 January 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್