AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಟ್ಟ ಮೊದಲು ಬಾರಿಗೆ ಸರ್ಕಾರದಿಂದ ತೃತೀಯ ಲಿಂಗಿಗಳ ಆಶ್ರಯ ಜಾಗ: ನಮ್ಮನೆ ಸುಮ್ಮನೆಗೆ ಭೂಮಿ ಪೂಜೆ ಮಾಡಿದ ಅಶೋಕ್

ರಾಜ್ಯ ಸರ್ಕಾರ ತೃತೀಯ ಲಿಂಗಿಗಳಿಗೆ ಸಮಾಜದಲ್ಲಿ ಆಶ್ರಯ ಕಲ್ಪಿಸುವ ನಿಟ್ಟಿನಲ್ಲಿ 20 ಗುಂಟೆ ಜಮೀನು ಮಂಜೂರು ಮಾಡಿದ್ದು, ಆ ಸೇವಾ ಕಾರ್ಯಕ್ಕೆ ಇಂದು ಕಂದಾಯ ಸಚಿವ ಆರ್.ಅಶೋಕ್ ಚಾಲನೆ ನೀಡಿದರು.

ಮೊಟ್ಟ ಮೊದಲು ಬಾರಿಗೆ ಸರ್ಕಾರದಿಂದ ತೃತೀಯ ಲಿಂಗಿಗಳ ಆಶ್ರಯ ಜಾಗ: ನಮ್ಮನೆ ಸುಮ್ಮನೆಗೆ ಭೂಮಿ ಪೂಜೆ ಮಾಡಿದ ಅಶೋಕ್
ನಮ್ಮನೆ ಸುಮ್ಮನೆ ಭೂಮಿ ಪೂಜೆ ನೆರವೇರಿಸಿದ ಗಣ್ಯರು.
TV9 Web
| Edited By: |

Updated on:Nov 02, 2022 | 10:46 PM

Share

ಬೆಂಗಳೂರು: ಮೊಟ್ಟಮೊದಲು ಬಾರಿಗೆ ರಾಜ್ಯ ಸರ್ಕಾರ (State Government) ತೃತೀಯ ಲಿಂಗಿಗಳಿಗೆ (transgenders) ಸಮಾಜದಲ್ಲಿ ಆಶ್ರಯ ಕಲ್ಪಿಸುವ ನಿಟ್ಟಿನಲ್ಲಿ 20 ಗುಂಟೆ ಜಮೀನು ಮಂಜೂರು ಮಾಡಿದ್ದು, ಆ ಸೇವಾ ಕಾರ್ಯಕ್ಕೆ ಇಂದು ಕಂದಾಯ ಸಚಿವ ಆರ್.ಅಶೋಕ್ ಚಾಲನೆ ನೀಡಿದರು. ತೃತೀಯ ಲಿಂಗಿಗಳು ಅಂದರೆ ಸೆಕ್ಸ್ ವರ್ಕರ್ಸ್, ಸಿಗ್ನಲ್‌ಗಳ ಬಳಿ ಭಿಕ್ಷೆ ಬೇಡುವವರು, ಸಮಾಜದಲ್ಲಿ ಅವರು ಇರೋಕೆ ನಾಲಾಯಕ್ಕೂ ಅಂತ ಕೀಳಾಗಿ ಕಾಣೋರೆ ಹೆಚ್ಚು. ಸಮಾಜದಲ್ಲಿ ಪುರುಷರಿಗೆ ಮಹಿಳೆಯರಿಗೆ ಹೇಗೆ ಸ್ಥಾನ‌ಮಾನವಿದೆಯೋ ಅದೇ ರೀತಿ ತೃತೀಯ ಲಿಂಗಿಗಳಿಗೂ ಸಮಾಜದಲ್ಲಿ ಸೂಕ್ತ ಸ್ಥಾನ ಮಾನ ಸಿಗಬೇಕು ಅನ್ನೋ ನಿಟ್ಟಿನಲ್ಲಿ ಸಿಎಂ ಬೊಮ್ಮಾಯಿ ಸರ್ಕಾರ ಮೊಟ್ಟ ಮೊದಲ ಬಾರಿಗೆ ತೃತೀಯ ಲಿಂಗಿಗಳಿಗೆ ಆಶ್ರಯ ಕಲ್ಪಿಸಲು ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿಯಲ್ಲಿ ಸುಮಾರು 20 ಗುಂಟೆ ಜಾಗ ಮಂಜೂರು‌ ಮಾಡಿದೆ. ಇಂದು ಆ ಜಾಗದಲ್ಲಿ ನಮ್ಮನೆ ಸುಮ್ಮನೆ ಎಂಬ ಹೆಸರಿನಲ್ಲಿ ತೃತೀಯ ಲಿಂಗಿಗಳ ಆಶ್ರಮ ನಿರ್ಮಾಣಕ್ಕೆ ಕಂದಾಯ ಸಚಿವ ಆರ್.ಅಶೋಕ್ ಭೂಮಿ ಪೂಜೆ ನೆರವೇರಿಸಿದರು.

ಇನ್ನೂ ಬಿಡಿಎ ಅಧ್ಯಕ್ಷ ಹಾಗೂ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್, ಪದ್ಮಶ್ರೀ ಪುರಸ್ಕೃತೆ ಜೋಗತಿ ಮಂಜಮ್ಮ, ಸಾಲು ಮರದ ತಿಮ್ಮಕ್ಕ, ಸಂತೋಷ್ ಗುರೂಜಿ ಸಮ್ಮುಖದಲ್ಲಿ ಭೂಮಿ ಪೂಜೆ ನೆರವೇರಿಸಲಾಯಿತು. ಬಳಿಕ ಮಾತನಾಡಿದ ಸಚಿವ ಆರ್.ಅಶೋಕ್, ನಮ್ಮಂತೆಯೇ ಅವರಿಗೂ ಒಂದು ಜೀವನವಿದೆ. ಅವರಿಗೂ ಸಮಾಜದಲ್ಲಿ ಸ್ಥಾನಮಾನ ಸಿಗಬೇಕು. ಇಂದು ತೃತೀಯ ಲಿಂಗಿಯಾದ್ರು ಮೆಕಾನಿಕಲ್, ಇಂಜಿನಿಯರಿಂಗ್ ಮಾಡಿ ಡಾಕ್ಟರೇಟ್ ಪಡೆದು ಅನಾಥಾಶ್ರಮ ನಡೆಸುತ್ತಿರೋ ಡಾ. ನಕ್ಷತ್ರ ಅವರ ಸಾಧನೆ ಎಲ್ಲರೂ ಹೆಮ್ಮೆ ಪಡುವಂತಹ ವಿಷಯ ಎಂದು ಹೇಳಿದರು.

ಅವರ ಸಾಧನೆ, ತೃತೀಯ ಲಿಂಗಿಗಳ ಮೇಲಿನ ಕಾಳಜಿ ನೋಡಿ ಖುದ್ದು ನಾನೇ ಆಶ್ರಮ ನಿರ್ಮಾಣಕ್ಕೆ 20 ಗುಂಟೆ ಜಮೀನು ಮಂಜೂರು ಮಾಡಿದ್ದು, ಅವರ ಆಶ್ರಯಕ್ಕಿಂತಲೇ ಈ ಆಶ್ರಮ ನಿರ್ಮಾಣದ ಪೂಜೆ ನೆರವೇರಿಸಿದ್ದೀನೆ ಶೀಘ್ರದಲ್ಲೆ ಸ್ಥಳೀಯ ಶಾಸಕರ ನೆರವು ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಆಶ್ರಮ ಹಾಗೂ ಶಾಲಾ ಕಾಲೇಜು ನಿರ್ಮಾಣ ಮಾಡುವುದಾಗಿ ತಿಳಿಸಿದರು. ಒಟ್ಟಾರೆ ಸಮಾಜದಲ್ಲಿ ಉನ್ನತ ಸ್ಥಾನಮಾನ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತೃತೀಯ ಲಿಂಗದವರಿಗೆ ಪ್ರೋತ್ಸಾಹ ನೀಡುತ್ತಿರುವ ಈ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ವರದಿ: ವಿನಾಯಕ್ ಗುರವ್, ಟಿವಿ9, ನೆಲಮಂಗಲ

Published On - 10:37 pm, Wed, 2 November 22

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?