AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನೈಸ್​ ರಸ್ತೆ ​ಬಳಿಯ ಪೊದೆಯಲ್ಲಿ 2000 ಮುಖಬೆಲೆಯ ಕಂತೆ ಕಂತೆ ನಕಲಿ ನೋಟ್​ ಪತ್ತೆ

ದೇಶದಲ್ಲಿ ಎರಡು ಸಾವಿರ ಮುಖಬೆಲೆಯ ಪಿಂಕ್​ ನೋಟುಗಳು ಬ್ಯಾನ್​ ಆದ ಬೆನ್ನಲ್ಲೇ ನಗರದ ಕನಕಪುರ ರಸ್ತೆಯಲ್ಲಿ ಎರಡು ಸಾವಿರ ಮುಖಬೆಲೆಯ 10 ಕೋಟಿ ರೂ. ನಕಲಿ ನೋಟುಗಳು ಪತ್ತೆಯಾಗಿವೆ.

ಬೆಂಗಳೂರು: ನೈಸ್​ ರಸ್ತೆ ​ಬಳಿಯ ಪೊದೆಯಲ್ಲಿ 2000 ಮುಖಬೆಲೆಯ ಕಂತೆ ಕಂತೆ ನಕಲಿ ನೋಟ್​ ಪತ್ತೆ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Jul 26, 2023 | 1:51 PM

Share

ಬೆಂಗಳೂರು ಜು.26: ದೇಶದಲ್ಲಿ ಎರಡು ಸಾವಿರ ಮುಖಬೆಲೆಯ (2000 Rs Note) ಪಿಂಕ್​ ನೋಟುಗಳು ಬ್ಯಾನ್​ ಆದ ಬೆನ್ನಲ್ಲೇ ನಗರದ ಕನಕಪುರ ರಸ್ತೆಯಲ್ಲಿ ಎರಡು ಸಾವಿರ ಮುಖಬೆಲೆಯ 10 ಕೋಟಿ ರೂ. ನಕಲಿ ನೋಟುಗಳು (Fake Note) ಪತ್ತೆಯಾಗಿವೆ. ತಲಘಟ್ಟಪುರ ಠಾಣೆ ವ್ಯಾಪ್ತಿಯಲ್ಲಿ ಕಂತೆ ಕಂತೆ ನಕಲಿನೋಟುಗಳು ಸಿಕ್ಕಿದ್ದು, ನಕಲಿ ನೋಟುಗಳಿದ್ದ ಬ್ಯಾಗ್​​ನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

ಕನಕಪುರ ರಸ್ತೆಗೆ ಹೊಂದುಕೊಂಡಿರುವ ನೈಸ್​ ರಸ್ತೆ ಬಳಿಯ ಪೊದೆಯಲ್ಲಿ ಸೂಟ್​ಕೇಸ್​​ನಲ್ಲಿ ಜೆರಾಕ್ಸ್​​ ನೋಟುಗಳು ಪತ್ತೆಯಾಗಿವೆ. ಇದನ್ನು ಕಂಡ ಸ್ಥಳೀಯರು ದಂಗಾಗಿದ್ದಾರೆ. ನಂತರ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಜೆರಾಕ್ಸ್​ ಮಾಡಿಸಿದ ನಕಲಿ ನೋಟುಗಳು ಎಂದು ತಿಳಿದಿದೆ. ಸದ್ಯ ಪೊಲೀಸರು ಜೆರಾಕ್ಸ್​​ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ. ಜೆರಾಕ್ಸ್​ ನೋಟುಗಳು ಅಲ್ಲಿಗೆ ಹೇಗೆ ಬಂದವು? ಎಂಬುವುದರ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ: 2,000 ರೂ ನೋಟುಗಳು ಇನ್ನೂ ಇವೆಯೇ? ಸೆಪ್ಟಂಬರ್ 30ರ ಡೆಡ್​ಲೈನ್ ವಿಸ್ತರಣೆ ಆಗೊಲ್ಲ; ಬೇಗ ಮರಳಿಸಿಬಿಡಿ

2,000 ರೂ ನೋಟುಗಳನ್ನು ಮೇ 19ರಂದು ಚಲಾವಣೆಯಿಂದ ಹಿಂಪಡೆಯುವ ನಿರ್ಧಾರ ಪ್ರಕಟಿಸಲಾಗಿತ್ತು. ಅದಕ್ಕಿಂತಲೂ ಮುಂಚಿನಿಂದಲೇ ಸರ್ಕಾರ ಈ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಆರಂಭಿಸಿತ್ತು ಎನ್ನುತ್ತವೆ ವರದಿಗಳು. ಎಟಿಎಂಗಳಲ್ಲಿ ಬಹಳ ತಿಂಗಳುಗಳಿಂದ 2,000 ರೂ ಮುಖಬೆಲೆಯ ನೋಟುಗಳು ಬರುತ್ತಿಲ್ಲ. ಆರ್​ಬಿಐ ಕೂಡ 2,000 ರೂ ನೋಟುಗಳ ಮುದ್ರಣ ನಿಲ್ಲಿಸಿತ್ತು. ಬ್ಯಾಂಕುಗಳೂ ಕೂಡ 2,000 ರೂ. ನೋಟುಗಳ ವಿತರಣೆ ನಿಲ್ಲಿಸಿದ್ದವೆನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!