AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನೈಸ್​ ರಸ್ತೆ ​ಬಳಿಯ ಪೊದೆಯಲ್ಲಿ 2000 ಮುಖಬೆಲೆಯ ಕಂತೆ ಕಂತೆ ನಕಲಿ ನೋಟ್​ ಪತ್ತೆ

ದೇಶದಲ್ಲಿ ಎರಡು ಸಾವಿರ ಮುಖಬೆಲೆಯ ಪಿಂಕ್​ ನೋಟುಗಳು ಬ್ಯಾನ್​ ಆದ ಬೆನ್ನಲ್ಲೇ ನಗರದ ಕನಕಪುರ ರಸ್ತೆಯಲ್ಲಿ ಎರಡು ಸಾವಿರ ಮುಖಬೆಲೆಯ 10 ಕೋಟಿ ರೂ. ನಕಲಿ ನೋಟುಗಳು ಪತ್ತೆಯಾಗಿವೆ.

ಬೆಂಗಳೂರು: ನೈಸ್​ ರಸ್ತೆ ​ಬಳಿಯ ಪೊದೆಯಲ್ಲಿ 2000 ಮುಖಬೆಲೆಯ ಕಂತೆ ಕಂತೆ ನಕಲಿ ನೋಟ್​ ಪತ್ತೆ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on: Jul 26, 2023 | 1:51 PM

Share

ಬೆಂಗಳೂರು ಜು.26: ದೇಶದಲ್ಲಿ ಎರಡು ಸಾವಿರ ಮುಖಬೆಲೆಯ (2000 Rs Note) ಪಿಂಕ್​ ನೋಟುಗಳು ಬ್ಯಾನ್​ ಆದ ಬೆನ್ನಲ್ಲೇ ನಗರದ ಕನಕಪುರ ರಸ್ತೆಯಲ್ಲಿ ಎರಡು ಸಾವಿರ ಮುಖಬೆಲೆಯ 10 ಕೋಟಿ ರೂ. ನಕಲಿ ನೋಟುಗಳು (Fake Note) ಪತ್ತೆಯಾಗಿವೆ. ತಲಘಟ್ಟಪುರ ಠಾಣೆ ವ್ಯಾಪ್ತಿಯಲ್ಲಿ ಕಂತೆ ಕಂತೆ ನಕಲಿನೋಟುಗಳು ಸಿಕ್ಕಿದ್ದು, ನಕಲಿ ನೋಟುಗಳಿದ್ದ ಬ್ಯಾಗ್​​ನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

ಕನಕಪುರ ರಸ್ತೆಗೆ ಹೊಂದುಕೊಂಡಿರುವ ನೈಸ್​ ರಸ್ತೆ ಬಳಿಯ ಪೊದೆಯಲ್ಲಿ ಸೂಟ್​ಕೇಸ್​​ನಲ್ಲಿ ಜೆರಾಕ್ಸ್​​ ನೋಟುಗಳು ಪತ್ತೆಯಾಗಿವೆ. ಇದನ್ನು ಕಂಡ ಸ್ಥಳೀಯರು ದಂಗಾಗಿದ್ದಾರೆ. ನಂತರ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಜೆರಾಕ್ಸ್​ ಮಾಡಿಸಿದ ನಕಲಿ ನೋಟುಗಳು ಎಂದು ತಿಳಿದಿದೆ. ಸದ್ಯ ಪೊಲೀಸರು ಜೆರಾಕ್ಸ್​​ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ. ಜೆರಾಕ್ಸ್​ ನೋಟುಗಳು ಅಲ್ಲಿಗೆ ಹೇಗೆ ಬಂದವು? ಎಂಬುವುದರ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ: 2,000 ರೂ ನೋಟುಗಳು ಇನ್ನೂ ಇವೆಯೇ? ಸೆಪ್ಟಂಬರ್ 30ರ ಡೆಡ್​ಲೈನ್ ವಿಸ್ತರಣೆ ಆಗೊಲ್ಲ; ಬೇಗ ಮರಳಿಸಿಬಿಡಿ

2,000 ರೂ ನೋಟುಗಳನ್ನು ಮೇ 19ರಂದು ಚಲಾವಣೆಯಿಂದ ಹಿಂಪಡೆಯುವ ನಿರ್ಧಾರ ಪ್ರಕಟಿಸಲಾಗಿತ್ತು. ಅದಕ್ಕಿಂತಲೂ ಮುಂಚಿನಿಂದಲೇ ಸರ್ಕಾರ ಈ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಆರಂಭಿಸಿತ್ತು ಎನ್ನುತ್ತವೆ ವರದಿಗಳು. ಎಟಿಎಂಗಳಲ್ಲಿ ಬಹಳ ತಿಂಗಳುಗಳಿಂದ 2,000 ರೂ ಮುಖಬೆಲೆಯ ನೋಟುಗಳು ಬರುತ್ತಿಲ್ಲ. ಆರ್​ಬಿಐ ಕೂಡ 2,000 ರೂ ನೋಟುಗಳ ಮುದ್ರಣ ನಿಲ್ಲಿಸಿತ್ತು. ಬ್ಯಾಂಕುಗಳೂ ಕೂಡ 2,000 ರೂ. ನೋಟುಗಳ ವಿತರಣೆ ನಿಲ್ಲಿಸಿದ್ದವೆನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ