AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರೆಸ್ಟ್​​ ವಾರೆಂಟ್​ ಎಚ್ಚರಿಗೆ ಬೆನ್ನಲ್ಲೇ ಕೋರ್ಟ್​​ಗೆ ಓಡೋಡಿ ಬಂದ ಸಚಿವ ಮುನಿಯಪ್ಪ

2013ರ ಹಲ್ಲೆ ಅಟ್ರಾಸಿಟಿ ಕೇಸ್​ನಲ್ಲಿ ಜನಪ್ರತಿನಿಧಿಗಳ ಕೋರ್ಟ್‌ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಸಚಿವ ಕೆ.ಹೆಚ್‌.ಮುನಿಯಪ್ಪಗೆ ಜಾಮೀನು ನೀಡಿ ಬುಧವಾರ ಆದೇಶ ಹೊರಡಿಸಿದ್ದಾರೆ. ಅರೆಸ್ಟ್​​ ವಾರೆಂಟ್ ಹೊರಡಿಸುವುದಾಗಿ ಎಚ್ಚರಿಗೆ ಬೆನ್ನಲ್ಲೇ ಸಚಿವ ಮುನಿಯಪ್ಪ ಕೋರ್ಟ್​​ಗೆ ಓಡೋಡಿ ಬಂದಿದ್ದಾರೆ. ಲಕ್ಷ್ಮಿ ನಾರಾಯಣ್ ಗೂ ಜಾಮೀನು ಮಂಜೂರು ಮಾಡಲಾಗಿದೆ.

ಅರೆಸ್ಟ್​​ ವಾರೆಂಟ್​ ಎಚ್ಚರಿಗೆ ಬೆನ್ನಲ್ಲೇ ಕೋರ್ಟ್​​ಗೆ ಓಡೋಡಿ ಬಂದ ಸಚಿವ ಮುನಿಯಪ್ಪ
ಅರೆಸ್ಟ್​​ ವಾರೆಂಟ್​ ಎಚ್ಚರಿಗೆ ಬೆನ್ನಲ್ಲೇ ಕೋರ್ಟ್​​ಗೆ ಓಡೋಡಿ ಬಂದ ಸಚಿವ ಮುನಿಯಪ್ಪ
Ramesha M
| Edited By: |

Updated on:Mar 12, 2025 | 4:45 PM

Share

ಬೆಂಗಳೂರು, ಮಾರ್ಚ್​ 12: 2013ರ ಹಲ್ಲೆ ಅಟ್ರಾಸಿಟಿ ಕೇಸ್​​ಗೆ ಸಂಬಂಧಿಸಿದಂತೆ ರಾಬರ್ಟ್‌ಸನ್‌ ಪೇಟೆ ಪೊಲೀಸರ ಬಿ ರಿಪೋರ್ಟ್ ತಿರಸ್ಕರಿಸಿ‌ ಸಚಿವ ಕೆ.ಹೆಚ್.ಮುನಿಯಪ್ಪಗೆ (KH Muniyappa) ಕೋರ್ಟ್ ಸಮನ್ಸ್ ಜಾರಿಗೊಳಿಸಿತ್ತು. ಹಾಗಾಗಿ ಇಂದು ಕೋರ್ಟ್​ಗೆ ಹಾಜರಾಗಬೇಕಿತ್ತು. ಗೈರಾಗಿದ್ದಕ್ಕೆ ಇತ್ತ ಜಡ್ಜ್ ಸಂತೋಷ್ ಗಜಾನನ ಭಟ್ ಗರಂ ಆಗಿದ್ದರು. ಖುದ್ದು ಹಾಜರಾಗದಿದ್ದರೆ ಅರೆಸ್ಟ್​​ ವಾರೆಂಟ್ ಹೊರಡಿಸುವುದಾಗಿ ಎಚ್ಚರಿಗೆ ಬೆನ್ನಲ್ಲೇ ಕೋರ್ಟ್​​ಗೆ ಸಚಿವ ಮುನಿಯಪ್ಪ ಓಡೋಡಿ ಬಂದಿದ್ದು, ಇದೀಗ ಜಾಮೀನು (Bail) ಮಂಜೂರು ಮಾಡಲಾಗಿದೆ.

2013ರ ಹಲ್ಲೆ ಅಟ್ರಾಸಿಟಿ ಕೇಸ್​​ಗೆ ಸಂಬಂಧಿಸಿದಂತೆ ಸದ್ಯ ಜನಪ್ರತಿನಿಧಿಗಳ ಕೋರ್ಟ್‌ನಿಂದ ಕೆ.ಹೆಚ್‌.ಮುನಿಯಪ್ಪ ಹಾಗೂ ಲಕ್ಷ್ಮೀ ನಾರಾಯಣ್​ಗೆ ಜಾಮೀನು ಮಂಜೂರು ಮಾಡಲಾಗಿದೆ. ಕೋರ್ಟ್‌ಗೆ ಕೆ.ಹೆಚ್‌.ಮುನಿಯಪ್ಪ 50 ಸಾವಿರ ರೂ. ಬಾಂಡ್ ನೀಡಬೇಕಿದೆ.

ಇದನ್ನೂ ಓದಿ: ಡಿಕೆ ಶಿವಕುಮಾರ್ ಹೇಳಿದ್ದು ಸರಿಯಾಗಿದೆ: ಅಧಿಕಾರ ಹಂಚಿಕೆ ಬಗ್ಗೆ ಹೊಸ ಬಾಂಬ್ ಸಿಡಿಸಿದ ಸಚಿವ ಮುನಿಯಪ್ಪ

ಇದನ್ನೂ ಓದಿ
Image
ಮಹಾರಾಷ್ಟ್ರದಲ್ಲಿ RSS ಕಾರ್ಯಕರ್ತರನ್ನ ಪಿಎ ಮಾಡಿಲ್ವಾ? ಸಿಎಂ ತಿರುಗೇಟು
Image
ಜೀವಾ ಆತ್ಮಹತ್ಯೆ: Dysp ಬಂಧನಕ್ಕೆ ಸಿಕ್ಕ ಮಹತ್ವದ ಸಾಕ್ಷ್ಯ ಏನು ಗೊತ್ತಾ?
Image
ಕ್ಷೇತ್ರ ಮರುವಿಂಡಣೆ ವಿರುದ್ಧ ಬೆಂಬಲ ಕೋರಿ ಕರ್ನಾಟಕಕ್ಕೆ ತಮಿಳುನಾಡು ಪತ್ರ
Image
ಮಹಾರಾಷ್ಟ್ರದಲ್ಲಿ ಲಾಡ್ಲೀ ಬಹೆನಾ ಸ್ಕೀಮ್ ಬಂದ್ ಆಗಿದೆ: ಹೆಬ್ಬಾಳ್ಕರ್

2013ರ ಹಲ್ಲೆ ಅಟ್ರಾಸಿಟಿ ಕೇಸ್​​ಗೆ ಸಂಬಂಧಿಸಿದಂತೆ ಸಚಿವ ಕೆ.ಹೆಚ್.ಮುನಿಯಪ್ಪ ವಿರುದ್ಧ ರಾಬರ್ಟ್‌ಸನ್‌ ಪೇಟೆ ಪೊಲೀಸರ ಬಿ ರಿಪೋರ್ಟ್ ಸಲ್ಲಿಸಿದ್ದರು. ಈ ವೇಳೆ ಬಿ ರಿಪೋರ್ಟ್ ತಿರಸ್ಕರಿಸಿದ ಮೇಲೆ ಸಚಿವ ಕೆ.ಹೆಚ್.ಮುನಿಯಪ್ಪಗೆ ಸಮನ್ಸ್ ಜಾರಿಗೊಳಿಸಲಾಗಿತ್ತು. ಈ ಹಿನ್ನೆಲೆ ಇಂದು ಅವರು ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಅವರು ಗೈರಾಗಿದ್ದರು. ಇದು ಜಡ್ಜ್ ಸಂತೋಷ್ ಗಜಾನನ ಭಟ್ ಅವರ ಅಸಮಾಧಾನಕ್ಕೂ ಕಾರಣವಾಗಿದೆ.

ಇದನ್ನೂ ಓದಿ: Karnataka Budget Session: ಐದು-ವರ್ಷ ಅವಧಿಗೆ ತಾನೇ ಮುಖ್ಯಮಂತ್ರಿ ಅಂತ ಹೇಳಿ ಸಿದ್ದರಾಮಯ್ಯ ಅಧಿಕಾರ ಹಂಚಿಕೆ ಕಿತ್ತಾಟಕ್ಕೆ ತೆರೆ ಎಳೆದರೇ?

2013 ರ ವಿಧಾನಸಭಾ ಚುನಾವಣೆಯಲ್ಲಿ ಕೆಜಿಎಫ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ವಿ. ಶಂಕರ್ ಮೇಲೆ ಅಂದಿನ ಸಂಸದರಾಗಿದ್ದ ಮುನಿಯಪ್ಪ ಹಾಗೂ ಅವರ ಬೆಂಬಲಿಗರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:37 pm, Wed, 12 March 25

Follow Us
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಕಲ್ಲಿದ್ದಲು ಟ್ರಕ್
ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಕಲ್ಲಿದ್ದಲು ಟ್ರಕ್
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?