ಅರೆಸ್ಟ್ ವಾರೆಂಟ್ ಎಚ್ಚರಿಗೆ ಬೆನ್ನಲ್ಲೇ ಕೋರ್ಟ್ಗೆ ಓಡೋಡಿ ಬಂದ ಸಚಿವ ಮುನಿಯಪ್ಪ
2013ರ ಹಲ್ಲೆ ಅಟ್ರಾಸಿಟಿ ಕೇಸ್ನಲ್ಲಿ ಜನಪ್ರತಿನಿಧಿಗಳ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಸಚಿವ ಕೆ.ಹೆಚ್.ಮುನಿಯಪ್ಪಗೆ ಜಾಮೀನು ನೀಡಿ ಬುಧವಾರ ಆದೇಶ ಹೊರಡಿಸಿದ್ದಾರೆ. ಅರೆಸ್ಟ್ ವಾರೆಂಟ್ ಹೊರಡಿಸುವುದಾಗಿ ಎಚ್ಚರಿಗೆ ಬೆನ್ನಲ್ಲೇ ಸಚಿವ ಮುನಿಯಪ್ಪ ಕೋರ್ಟ್ಗೆ ಓಡೋಡಿ ಬಂದಿದ್ದಾರೆ. ಲಕ್ಷ್ಮಿ ನಾರಾಯಣ್ ಗೂ ಜಾಮೀನು ಮಂಜೂರು ಮಾಡಲಾಗಿದೆ.

ಬೆಂಗಳೂರು, ಮಾರ್ಚ್ 12: 2013ರ ಹಲ್ಲೆ ಅಟ್ರಾಸಿಟಿ ಕೇಸ್ಗೆ ಸಂಬಂಧಿಸಿದಂತೆ ರಾಬರ್ಟ್ಸನ್ ಪೇಟೆ ಪೊಲೀಸರ ಬಿ ರಿಪೋರ್ಟ್ ತಿರಸ್ಕರಿಸಿ ಸಚಿವ ಕೆ.ಹೆಚ್.ಮುನಿಯಪ್ಪಗೆ (KH Muniyappa) ಕೋರ್ಟ್ ಸಮನ್ಸ್ ಜಾರಿಗೊಳಿಸಿತ್ತು. ಹಾಗಾಗಿ ಇಂದು ಕೋರ್ಟ್ಗೆ ಹಾಜರಾಗಬೇಕಿತ್ತು. ಗೈರಾಗಿದ್ದಕ್ಕೆ ಇತ್ತ ಜಡ್ಜ್ ಸಂತೋಷ್ ಗಜಾನನ ಭಟ್ ಗರಂ ಆಗಿದ್ದರು. ಖುದ್ದು ಹಾಜರಾಗದಿದ್ದರೆ ಅರೆಸ್ಟ್ ವಾರೆಂಟ್ ಹೊರಡಿಸುವುದಾಗಿ ಎಚ್ಚರಿಗೆ ಬೆನ್ನಲ್ಲೇ ಕೋರ್ಟ್ಗೆ ಸಚಿವ ಮುನಿಯಪ್ಪ ಓಡೋಡಿ ಬಂದಿದ್ದು, ಇದೀಗ ಜಾಮೀನು (Bail) ಮಂಜೂರು ಮಾಡಲಾಗಿದೆ.
2013ರ ಹಲ್ಲೆ ಅಟ್ರಾಸಿಟಿ ಕೇಸ್ಗೆ ಸಂಬಂಧಿಸಿದಂತೆ ಸದ್ಯ ಜನಪ್ರತಿನಿಧಿಗಳ ಕೋರ್ಟ್ನಿಂದ ಕೆ.ಹೆಚ್.ಮುನಿಯಪ್ಪ ಹಾಗೂ ಲಕ್ಷ್ಮೀ ನಾರಾಯಣ್ಗೆ ಜಾಮೀನು ಮಂಜೂರು ಮಾಡಲಾಗಿದೆ. ಕೋರ್ಟ್ಗೆ ಕೆ.ಹೆಚ್.ಮುನಿಯಪ್ಪ 50 ಸಾವಿರ ರೂ. ಬಾಂಡ್ ನೀಡಬೇಕಿದೆ.
ಇದನ್ನೂ ಓದಿ: ಡಿಕೆ ಶಿವಕುಮಾರ್ ಹೇಳಿದ್ದು ಸರಿಯಾಗಿದೆ: ಅಧಿಕಾರ ಹಂಚಿಕೆ ಬಗ್ಗೆ ಹೊಸ ಬಾಂಬ್ ಸಿಡಿಸಿದ ಸಚಿವ ಮುನಿಯಪ್ಪ
2013ರ ಹಲ್ಲೆ ಅಟ್ರಾಸಿಟಿ ಕೇಸ್ಗೆ ಸಂಬಂಧಿಸಿದಂತೆ ಸಚಿವ ಕೆ.ಹೆಚ್.ಮುನಿಯಪ್ಪ ವಿರುದ್ಧ ರಾಬರ್ಟ್ಸನ್ ಪೇಟೆ ಪೊಲೀಸರ ಬಿ ರಿಪೋರ್ಟ್ ಸಲ್ಲಿಸಿದ್ದರು. ಈ ವೇಳೆ ಬಿ ರಿಪೋರ್ಟ್ ತಿರಸ್ಕರಿಸಿದ ಮೇಲೆ ಸಚಿವ ಕೆ.ಹೆಚ್.ಮುನಿಯಪ್ಪಗೆ ಸಮನ್ಸ್ ಜಾರಿಗೊಳಿಸಲಾಗಿತ್ತು. ಈ ಹಿನ್ನೆಲೆ ಇಂದು ಅವರು ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಅವರು ಗೈರಾಗಿದ್ದರು. ಇದು ಜಡ್ಜ್ ಸಂತೋಷ್ ಗಜಾನನ ಭಟ್ ಅವರ ಅಸಮಾಧಾನಕ್ಕೂ ಕಾರಣವಾಗಿದೆ.
2013 ರ ವಿಧಾನಸಭಾ ಚುನಾವಣೆಯಲ್ಲಿ ಕೆಜಿಎಫ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ವಿ. ಶಂಕರ್ ಮೇಲೆ ಅಂದಿನ ಸಂಸದರಾಗಿದ್ದ ಮುನಿಯಪ್ಪ ಹಾಗೂ ಅವರ ಬೆಂಬಲಿಗರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:37 pm, Wed, 12 March 25