AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2023ರಲ್ಲಿ ಬೆಂಗಳೂರಲ್ಲಿ 207 ಕೊಲೆಗಳು; ಕ್ಷುಲ್ಲಕ, ಅಕ್ರಮ ಸಂಬಂಧಕ್ಕೆ ಹೆಚ್ಚು ಹತ್ಯೆ ಕೇಸ್ ದಾಖಲು

2023 ರ ಅಪರಾಧ ಕೃತ್ಯಗಳ ಅಂಕಿ ಅಂಶವನ್ನು ಬೆಂಗಳೂರು ಪೊಲೀಸರು(Bengaluru Police) ಬಿಡುಗಡೆಗೊಳಿಸಿದೆ. ಅದರಂತೆ 2022ಕ್ಕೆ ಹೊಲಿಸಿದರೆ 2023ರಲ್ಲಿ ಹೆಚ್ಚು ಕೊಲೆ(Murder)ಗಳು ವರದಿಯಾಗಿದೆ. ಹೌದು, 2022 ರ ವರ್ಷಕ್ಕೆ ಹೋಲಿಸಿದರೆ, 2023 ರಲ್ಲಿಯೇ ಅಧಿಕ ಹತ್ಯೆಯ ಪ್ರಕರಣಗಳು ದಾಖಲಾಗಿದ್ದು, ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.

2023ರಲ್ಲಿ ಬೆಂಗಳೂರಲ್ಲಿ 207 ಕೊಲೆಗಳು; ಕ್ಷುಲ್ಲಕ, ಅಕ್ರಮ ಸಂಬಂಧಕ್ಕೆ ಹೆಚ್ಚು ಹತ್ಯೆ ಕೇಸ್ ದಾಖಲು
ಬೆಂಗಳೂರಿನಲ್ಲಿ 2023 ರಲ್ಲಿ ದಾಖಲಾದ ಅಪರಾಧಗಳ ಸಂಖ್ಯೆ
Follow us
ರಾಚಪ್ಪಾಜಿ ನಾಯ್ಕ್
| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 03, 2024 | 8:02 PM

ಬೆಂಗಳೂರು, ಜ.03: 2023 ರ ಅಪರಾಧ ಕೃತ್ಯಗಳ ಅಂಕಿ ಅಂಶವನ್ನು ಬೆಂಗಳೂರು ಪೊಲೀಸರು(Bengaluru Police) ಬಿಡುಗಡೆಗೊಳಿಸಿದೆ. ಅದರಂತೆ 2022ಕ್ಕೆ ಹೊಲಿಸಿದರೆ 2023ರಲ್ಲಿ ಹೆಚ್ಚು ಕೊಲೆ(Murder)ಗಳು ವರದಿಯಾಗಿದೆ. ಹೌದು, 2022 ರ ವರ್ಷಕ್ಕೆ ಹೋಲಿಸಿದರೆ, 2023 ರಲ್ಲಿಯೇ ಅಧಿಕ ಹತ್ಯೆಯ ಪ್ರಕರಣಗಳು ದಾಖಲಾಗಿದ್ದು, ಅಚ್ಚರಿ ಅಂದರೆ ಈ ಎಲ್ಲಾ ಪ್ರಕರಣಗಳಲ್ಲಿ ಹೆಚ್ಚಾಗಿ ಕ್ಷುಲ್ಲಕ ಮತ್ತು ಅಕ್ರಮ ಸಂಬಂಧಕ್ಕೆ ಕೊಲೆಗಳಾಗಿವೆ ಎಂದು ಬೆಂಗಳೂರು ಪೊಲೀಸರು ಬಿಡುಗಡೆಗೊಳಿಸಿದ ಅಂಕಿ-ಅಂಶಗಳು ಹೇಳುತ್ತಿವೆ.

2022ರಲ್ಲಿ 156 ಕೊಲೆಗಳಾಗಿದ್ರೆ 2023ರಲ್ಲಿ 207 ಕೊಲೆಗಳು

ಇನ್ನು 2023 ರಲ್ಲಿ ದಾಖಲಾದ 207 ಕೊಲೆಗಳಲ್ಲಿ 202 ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.  ಕ್ಷುಲ್ಲಕ ವಿಚಾರಕ್ಕೆ 49, ಅಕ್ರಮ ಸಂಬಂಧಕ್ಕೆ 32 ಹಾಗೂ 7 ರೌಡಿ ಶೀಟರ್​ಗಳ ಕೊಲೆ ನಡೆದಿದೆ. ಇನ್ನುಳಿದಂತೆ 1,692 ಮನೆ ಕಳ್ಳತನ, 5,909 ವಾಹನ ಕಳ್ಳತನ, 673 ರಾಬರಿ, 36 ಡಾಕಾಯಿತಿ, 153 ಸರಗಳ್ಳತನ ವರದಿಯಾಗಿದೆ.

2023ರಲ್ಲಿ 176 ಅತ್ಯಾಚಾರ ಪ್ರಕರಣ ವರದಿಯಾಗಿದ್ದು, 176 ಪ್ರಕರಣಗಳಲ್ಲಿಯೂ ಆರೋಪಿಗಳನ್ನು ಬಂಧಿಸಲಾಗಿದೆ. ಇದರ ಜೊತೆಗೆ 1,135 ಲೈಂಗಿಕ ದೌರ್ಜನ್ಯ ಕೇಸ್​ಗಳು, 1,189 ಕಿಡ್ನಾಪ್ ಕೇಸ್​ಗಳಲ್ಲಿ 981 ಪತ್ತೆಯಾಗಿದೆ. 1007 ವರದಕ್ಷಿಣೆ ಕಿರುಕುಳ ಪ್ರಕರಣಗಳು ಸೇರಿದಂತೆ 17,623 ಸೈಬರ್ ಪ್ರಕರಣಗಳು ವರದಿಯಾಗಿದ್ದು, 1,271 ಪ್ರಕರಣಗಳನ್ನ ಭೇದಿಸಿದ್ದಾರೆ.

ಇದನ್ನೂ ಓದಿ:ಅಪರಾಧ ಕೃತ್ಯ ತಡೆಗೆ ಗೃಹ ಇಲಾಖೆ ದಿಟ್ಟ ಕ್ರಮ: ಬೆಂಗಳೂರಿನಲ್ಲಿ ಹೈ ರೆಸ್ಯೂಲೇಷನ್ ಕ್ಯಾಮೆರಾ ಅಳವಡಿಕೆ

2023 ರಲ್ಲಿ 5,848 ಆಕಸ್ಮಿಕ ಸಾವು ಮತ್ತು ಆತ್ಮಹತ್ಯೆ ಕೇಸ್ ದಾಖಲು ಆಗಿದ್ದು, ಕುಖ್ಯಾತ 324 ರೌಡಿಗಳು ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಇನ್ನು 103 ಕೋಟಿ ಮೌಲ್ಯದ 5,387 ಕೆಜಿ ಡ್ರಗ್ಸ್​ನ್ನು ಪೊಲೀಸರು ಸೀಜ್ ಮಾಡಿದ್ದು, ಡ್ರಗ್ಸ್ ಕೇಸ್ಗಳಲ್ಲಿ 4,399 ಜನರನ್ನ ಬಂಧಿಸಲಾಗಿದೆ. ಇನ್ನುಳಿದಂತೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ 126 ವಿದೇಶಿಗರನ್ನು ಬಂಧಿಸಲಾಗಿದ್ದರೆ, 247 ವಿದೇಶಿಗರನ್ನ ಬೆಂಗಳೂರು ಪೊಲೀಸರು ಗಡಿಪಾರು ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್