AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಪ್ರವಾಹಕ್ಕೆ ಸಿಲುಕುವ 209 ಪ್ರದೇಶಗಳಿವೆ, ಬಿಬಿಎಂಪಿಯ ಯಾವ ವಲಯದಲ್ಲಿ ಹೆಚ್ಚಾಗಿದೆ ನೋಡಿ

58 ಅತಿ ಸೂಕ್ಷ್ಮ ಮತ್ತು 151 ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ. ಅಲ್ಲದೆ ಚರಂಡಿಗಳಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆರ್. ಅಶೋಕ್ ತಿಳಿಸಿದ್ದಾರೆ.

ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಪ್ರವಾಹಕ್ಕೆ ಸಿಲುಕುವ 209 ಪ್ರದೇಶಗಳಿವೆ, ಬಿಬಿಎಂಪಿಯ ಯಾವ ವಲಯದಲ್ಲಿ ಹೆಚ್ಚಾಗಿದೆ ನೋಡಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 11, 2021 | 11:54 AM

Share

ಬೆಂಗಳೂರು: ರಾಜ್ಯರಾಜಧಾನಿ ಬೆಂಗಳೂರು ನಗರದಲ್ಲಿ ಮಳೆಗಾಲ ಕಾಲಿಟ್ಟು ಧೋ ಅಂತಾ ಮಳೆ ಶುರವಾದರೆ ಮುಗಿಯಿತು ಬಹುತೇಕ ಬೆಂಗಳೂರು ನಗರ ತೇಲಾಡತೊಡಗುತ್ತದೆ. ಮಳೆಗಾಲದಲ್ಲಿ ಅನೇಕ ಪ್ರದೇಶಗಳಲ್ಲಿ ಪ್ರವಾಹದ ಭೀತಿ ಹೆಚ್ಚು ಇರುತ್ತದೆ. ಅದರಲ್ಲಿ 209 ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸ್ಥಳಗಳನ್ನು ಗುರುತಿಸಲಾಗಿದೆ. ಹೀಗಾಗಿ ಈ ಪ್ರದೇಶಗಳಲ್ಲಿ ಅಪಾಯವನ್ನು ತಡೆಗಟ್ಟಲು ಬಿಬಿಎಂಪಿ ಈ ಬಾರಿ ಪೂರ್ವ ಸಿದ್ಧತೆ ನಡೆಸುತ್ತಿದೆ. ಈ ಬಾರಿ ಈಗಾಗಲೇ ಸುರೊದಿರುವ ಮುಂಗಾರು ಮಳೆಯಿಂದಾಗಿ ಅನೇಕ ರಸ್ತೆಗಳು ಹದಗೆಟ್ಟಿದ್ದು, ಅನೇಕ ತಗ್ಗು ಪ್ರದೇಶಗಳು ಮುಳುಗಡೆಯಾಗಿವೆ.

ಕಂದಾಯ ಸಚಿವ ಆರ್. ಅಶೋಕ್ ಅವರು ಈ ನಿಟ್ಟಿನಲ್ಲಿ ಸೋಮವಾರ ಬಿಬಿಎಂಪಿ ಉನ್ನತಾಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದರು. ಮಳೆ ಪ್ರವಾಹಕ್ಕೆ ತುತ್ತಾಗುವ ನಗರದಾದ್ಯಂತ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸ್ಥಳಗಳನ್ನು ಗುರುತಿಸಲಾಗಿದೆ. ಅವುಗಳಲ್ಲಿ 58 ಅತಿ ಸೂಕ್ಷ್ಮ ಮತ್ತು 151 ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ. ಅಲ್ಲದೆ ಚರಂಡಿಗಳಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಅಲ್ಲದೆ ಅಧಿಕ ಮಳೆಯ ಸಮಯದಲ್ಲಿ ಸಾರ್ವಜನಿಕರಿಗೆ ಹಾನಿಯಾಗದಂತೆ ನೋಡಿಕೊಳ್ಳಲು, ಸದೃಢವಲ್ಲದ, ಪೆಡಸು ಮರಗಳನ್ನು ಗುರುತಿಸಲು ಮತ್ತು ಅದನ್ನು ಕತ್ತರಿಸಲು ಅಧಿಕಾರಿಗಳಿಗೆ ಕಂದಾಯ ಸಚಿವ ಆರ್. ಅಶೋಕ್ ಸೂಚಿಸಿದ್ದಾರೆ.

ಚರಂಡಿ ಕಾಮಗಾರಿಗೆ ಹೆಚ್ಚು ಒತ್ತು ಚರಂಡಿಗಳಲ್ಲಿ ನೀರು ನಿಲ್ಲುವ ಬಗ್ಗೆ ಹೆಚ್ಚಿನ ನಿಗಾವಹಿಸಿದ್ದು, ಈಗಾಗಲೇ ನಗರದಲ್ಲಿನ ಅನೇಕ ಚರಂಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಬಿಬಿಎಂಪಿ ಅಧಿಕಾರಿಗಳ ಪ್ರಕಾರ, ಬೆಂಗಳೂರಿನ ಪೂರ್ವ ವಲಯದಲ್ಲಿ 38 ಅತಿ ಸೂಕ್ಷ್ಮ ವಲಗಳಿವೆ. ದಾಸರಹಳ್ಳಿಯಲ್ಲಿ 37 ಮತ್ತು ರಾಜರಾಜೇಶ್ವರಿಯಲ್ಲಿ 32 ಸೂಕ್ಷ್ಮ ಪ್ರವಾಹ ವಲಯಗಳಿವೆ ಎಂದು ತಿಳಿಸಿದ್ದಾರೆ.

ಬಿಬಿಎಂಪಿ ವಾರ್ಡ್​ಗಳಿಗೆ ಅನುಗುಣವಾಗಿ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗಿದೆ. ಮುಚ್ಚಿರುವ ಚರಂಡಿಗಳನ್ನು ತರೆದು,ನೀರು ಸರಗಾವಾಗಿ ಹರಿಯುವುದಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಅಲ್ಲದೆ ರಸ್ತೆಗಳ ಮೇಲೆ ನೀರು ನಿಲ್ಲುವುದನ್ನು ತಡೆಯಲು ಮತ್ತು ಚರಂಡಿಗಳನ್ನು ಸ್ವಚ್ಛಗೊಳಿಸಲು ನಿರ್ಧರಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ.

ಮಳೆಗಾಲದಲ್ಲಿ ಹಗಲಿರುಳು ಕೆಲಸ ಮಾಡಬೇಕಾಗುತ್ತದೆ: ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟ ಆಯುಕ್ತ ಗೌರವ್ ಗುಪ್ತಾ ನಗರ ಪ್ರವಾಹಕ್ಕೆ ಒಳಗಾಗದಂತೆ ನೋಡಿಕೊಳ್ಳಲು ಕಾರ್ಯಪಡೆ ತಂಡಗಳು ಮತ್ತು ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಮಳೆಗಾಲದಲ್ಲಿ ಹಗಲಿರುಳು ಕೆಲಸ ಮಾಡಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಮನವರಿಕೆ ಮಾಡಲಾಯಿತು. ಪ್ರಧಾನ ಕಚೇರಿಯಲ್ಲಿ ಮತ್ತು ಕ್ಷೇತ್ರ ಮಟ್ಟದಲ್ಲಿ ಕೆಲಸ ನಿರ್ವಹಿಸುವ ಎಲ್ಲಾ ಅಧಿಕಾರಿಗಳು ಸರಿಯಾದ ಮಾಹಿತಿಯನ್ನು ಬೆಂಗಳೂರಿಗರಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಯಿತು.

ಇದನ್ನೂ ಓದಿ: ಕೊರೊನಾ ಆತಂಕ: ಬೆಂಗಳೂರಿನ ಎಲ್ಲಾ ಕ್ಷೇತ್ರದಲ್ಲೂ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ನಿರ್ಧಾರ: ಆರ್. ಅಶೋಕ್

ಪ್ರವಾಹ ಪೀಡಿತ ಪ್ರದೇಶಗಳಿಗೆ ಮಮತಾ ಬ್ಯಾನರ್ಜಿ ಭೇಟಿ; ಮೊಣಕಾಲು ಮಟ್ಟದ ನೀರಿದ್ದರೂ ಸೀರೆ ಎತ್ತಿ ಹಿಡಿದು ಹೆಜ್ಜೆ ಹಾಕಿದ ದೀದಿ

Published On - 11:40 am, Wed, 11 August 21

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?