AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC: ಮಹಿಳಾ ದಿನಾಚರಣೆಯಂದು ಫ್ರೀಯಾಗಿ ಎಷ್ಟು ಮಹಿಳೆಯರು ಬಿಎಂಟಿಸಿ ಬಸ್​ನಲ್ಲಿ ಪ್ರಯಾಣಿಸಿದರು? ಇಲ್ಲಿದೆ ಅಂಕಿ-ಸಂಖ್ಯೆ

International Woman's Day: ಮಾರ್ಚ್​ 8 ರಂದು ಮಹಿಳಾ ದಿನಾಚರಣೆ ಅಂಗವಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಮಹಿಳೆಯರಿಗೆ ಒಂದು ದಿನ ಉಚಿತ ಪ್ರಯಾಣಕ್ಕಾಗಿ ಅವಕಾಶ ನೀಡಿದ್ದು, ಅಂದು ಬಿಎಂಟಿಸಿ ಬಸ್​ಗಳಲ್ಲಿ ಬರೊಬ್ಬರಿ 21 ಲಕ್ಷ ಮಹಿಳೆಯರು ಸಂಚರಿಸಿದ್ದಾರೆ.

BMTC: ಮಹಿಳಾ ದಿನಾಚರಣೆಯಂದು ಫ್ರೀಯಾಗಿ ಎಷ್ಟು ಮಹಿಳೆಯರು ಬಿಎಂಟಿಸಿ ಬಸ್​ನಲ್ಲಿ ಪ್ರಯಾಣಿಸಿದರು? ಇಲ್ಲಿದೆ ಅಂಕಿ-ಸಂಖ್ಯೆ
ಬಿಎಂಟಿಸಿ ಬಸ್​
ವಿವೇಕ ಬಿರಾದಾರ
|

Updated on:Mar 10, 2023 | 3:21 PM

Share

ಬೆಂಗಳೂರು: ಮಾರ್ಚ್​ 8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ (International Womans Day) ಅಂಗವಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಮಹಿಳೆಯರಿಗೆ ಒಂದು ದಿನ ಉಚಿತ ಪ್ರಯಾಣಕ್ಕಾಗಿ ಅವಕಾಶ ನೀಡಿತ್ತು. ಅಂದು ಬಿಎಂಟಿಸಿ ಬಸ್​ಗಳಲ್ಲಿ ಬರೊಬ್ಬರಿ 21 ಲಕ್ಷ ಮಹಿಳೆಯರು ಸಂಚರಿಸಿದ್ದಾರೆ ಎಂದು ಖಾಸಗಿ ಸುದ್ದಿ ಸಂಸ್ಥೆ ದಿ ಇಂಡಿಯನ್​ ಎಕ್ಸಪ್ರೆಸ್​ ವರದಿ ಮಾಡಿದೆ. ಬೆಂಗಳೂರು ಪಶ್ಚಿಮದಲ್ಲಿ ಅತಿ ಹೆಚ್ಚು 5 ಲಕ್ಷ ಮಹಿಳೆಯರು ಪ್ರಯಾಣಿಸಿದ್ದಾರೆ. ಇನ್ನು ಮಾರ್ಚ್​ 8 ರಂದು ಬಿಎಂಟಿಸಿ ಬಸ್​​ಗಳಲ್ಲಿ 33 ಲಕ್ಷ ಜನ ಸಂಚರಿಸಿದ್ದಾರೆ ಎಂದು ವರದಿಯಾಗಿದೆ.

ಮಾರ್ಚ್​​ 8 ರಂದು ಮಹಿಳಾ ದಿನಾಚರಣೆ ಹಿನ್ನೆಲೆ ಬಿಬಿಎಂಟಿಸಿ ಮಹಿಳೆಯರಿಗೆ ಎಸಿ ವಜ್ರ ಮತ್ತು ವಾಯುವಜ್ರ ಸೇರಿದಂತೆ ಎಲ್ಲ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕಾಗಿ ಅವಕಾಶ ಮಾಡಿಕೊಟ್ಟಿತ್ತು. ಪೂರ್ವ ವಲಯದಲ್ಲಿ 3.4 ಲಕ್ಷಕ್ಕೂ ಹೆಚ್ಚು ಮಹಿಳೆಯರು, ಉತ್ತರ ವಲಯದಲ್ಲಿ 4.7 ಲಕ್ಷ, ದಕ್ಷಿಣ ವಲಯದಲ್ಲಿ 3.8 ಲಕ್ಷ, ಈಶಾನ್ಯ ವಲಯದಲ್ಲಿ 3.9 ಲಕ್ಷ ಮತ್ತು ಕೇಂದ್ರ ವಲಯದಲ್ಲಿ 90,000 ಮಹಿಳೆಯರು ಬಸ್‌ನಲ್ಲಿ ಪ್ರಯಾಣಿಸಿದ್ದಾರೆ.​

ಇದನ್ನೂ ಓದಿ: ಚಾಲಕರ ಜೇಬಿನಿಂದಲೇ ರಿಯಾಯ್ತಿ ಟ್ರಾಫಿಕ್ ದಂಡ ಪಾವತಿಗೆ ಮುಂದಾದ ಬಿಎಂಟಿಸಿ, ಕೆರಳಿ ಕೆಂಡವಾದ ಸಿಬ್ಬಂದಿ!

ಬಿಎಂಟಿಸಿಯಲ್ಲಿ 6,600 ಬಸ್​ಗಳಿದ್ದು, 5,567 ಬಸ್​ಗಳು ಕಾರ್ಯನಿರ್ವಹಿಸುತ್ತಿವೆ. ಪ್ರತಿನಿತ್ಯ ಇವು 10.84 ಲಕ್ಷ ಕಿಮೀ ಕ್ರಮಿಸುತ್ತವೆ. ಇನ್ನು ಪ್ರತಿದಿನ 29 ಲಕ್ಷ ಜನರು ಬಿಎಂಟಿಸಿ ಬಸ್​​ಗಳಲ್ಲಿ ಸಂಚರಿಸುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:20 pm, Fri, 10 March 23

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?