AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನೆ ನಾಪತ್ತೆಯಾಗಿದ್ದ ಕಲಬುರಗಿ ಯುವತಿ ಮೃತದೇಹ ಇಂದು ನಸುಕಿನಲ್ಲಿ ಬೆಂಗಳೂರಿನ ಮನೆ ಮುಂದೆ ಪತ್ತೆ

ನಿನ್ನೇ (ಆಗಸ್ಟ್ 10) ಅಷ್ಟೇ ಮನೆಯಿಂದ ಕಾಣೆಯಾಗಿದ್ದ 21 ವರ್ಷದ ಯುವತಿ ಮೃತದೇಹ ಇಂದು ನಸುಕಿನ ವೇಳೆ ಬೆಂಗಳೂರಿನ ಮನೆ ಮುಂದೆ ಪತ್ತೆಯಾಗಿದ್ದು, ಈ ಸಾವಿನ ಹಿಂದೆ ಹಲವು ಅನುಮಾನಗಳ ವ್ಯಕ್ತವಾಗಿವೆ.

ನಿನ್ನೆ ನಾಪತ್ತೆಯಾಗಿದ್ದ ಕಲಬುರಗಿ ಯುವತಿ ಮೃತದೇಹ ಇಂದು ನಸುಕಿನಲ್ಲಿ ಬೆಂಗಳೂರಿನ ಮನೆ ಮುಂದೆ ಪತ್ತೆ
ಪ್ರಾತಿನಿಧಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Aug 11, 2023 | 1:05 PM

Share

ಬೆಂಗಳೂರು, (ಆಗಸ್ಟ್, 11): ಕಾಣೆಯಾಗಿದ್ದ ಕಲಬುರಗಿ(Kalaburagi) ಮೂಲದ ಯುವತಿ ಮೃತದೇಹ (Dead Body) ಮರುದಿನ ಮನೆ ಮುಂದೆ ಪತ್ತೆಯಾಗಿದೆ. ಬೆಂಗಳೂರಿನ (Bengaluru) ಮಹದೇವಪುರದ ಲಕ್ಷ್ಮಿ ಸಾಗರ ಲೇಔಟ್​ನಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ ಶೆಲ್ ಪೆಟ್ರೋಲ್ ಬಂಕ್​ವೊಂದರಲ್ಲಿ ಕೆಲಸ ಕೆಲಸ ಮಾಡುತ್ತಿದ್ದ ಕಲಬುರಗಿ ಮಹಾನಂದಾ (21) ಎಂಬ ಯುವತಿ ನಿನ್ನೆ(ಆಗಸ್ಟ್ 10) ಕಾಣೆಯಾಗಿದ್ದಳು. ಆದ್ರೆ, ಮರು ದಿನ ಅಂದರೆ ಇಂದು (ಆಗಸ್ಟ್ 11) ನಸುಕಿನಲ್ಲಿ ಮನೆ ಮುಂದೆ ಯುವತಿಯ ಶವ ಪತ್ತೆಯಾಗಿದ್ದು, ಅಕ್ಕಪಕ್ಕದ ಮನೆಯವರು ಮೃತದೇಹ ನೋಡಿ ಶಾಕ್ ಆಗಿದ್ದಾರೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಘಟನಾ ಸ್ಥಳಕ್ಕೆ ಸೀನ್ ಆಫ್ ಕ್ರೈಮ್ ಅಫೀಸರ್ಸ್ ಮತ್ತು ಮಹದೇವಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಪತ್ತೆಯಾಗಿಲ್ಲ. ಇದರಿಂದ ಯುವತಿ ಸಾವಿನ ಹಿಂದೆ ಹಲವು ಅನುಮಾನಗಳು ಮೂಡಿದ್ದು, ಈ ಬಗ್ಗೆ ಪೊಲಿಸರು ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ: ಒಂದುವರೆ ವರ್ಷದ ಹಿಂದಷ್ಟೇ ಪ್ರೀತಿಸಿ ಮದ್ವೆಯಾಗಿದ್ದ ಯುವತಿ ಅನುಮಾನಾಸ್ಪದ ಸಾವು

ಕಲಬುರಗಿ ಮೂಲದ ಮೂಲದ ಮಹಾನಂದಾ ಹಾಗೂ ಆಕೆಯ ಅಕ್ಕ ಇಬ್ಬರೂ ಶೆಲ್ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದರು. ಆದ್ರೆ, ಮಹಾನಂದಾ ನಿನ್ನೆ ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದಳು. ರಾತ್ರಿ ಊಟಕ್ಕೆ ಎಂದು ಸ್ಟೌ ಮೇಲೆ ಅನ್ನ ಮಾಡಲು ಇಟ್ಟು ಮನೆಯಿಂದ ಹೊರಹೋಗಿದ್ದ ಮಹಾನಂದ ಏಕಾಏಕಿ ಕಾಣೆಯಾಗಿದ್ದಳು. ರಾತ್ರಿಯಾದರೂ ಮನೆಗೆ ತಂಗಿ ಬಾರದ ಹಿನ್ನೆಲೆಯಲ್ಲಿ ಮಹಾನಂದ ಅಕ್ಕ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಆದ್ರೆ, ಮರುದಿನ ನಸುಕಿನಲ್ಲಿ ಮನೆ ಬಳಿ ಮಹಾನಂದಳ ಮೃತದೇಹ ಪತ್ತೆಯಾಗಿದೆ.

ಮಹಾನಂದಾಳ ಕತ್ತಿನ ಭಾಗದಲ್ಲಿ ಗುರುತು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಮಹಾನಂದಳನ್ನ ಕತ್ತು ಹಿಸುಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೊಲೆ ಮಾಡಿದ ಬಳಿಕ ಮನೆ ಬಳಿಗೆ ತಂದು ಎಸೆದು ಹೋಗಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಮಹದೇವಪುರ ಪೊಲೀಸ್ ಠಾಣೆ ಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 11:07 am, Fri, 11 August 23

24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!