AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rains: ಬೆಂಗಳೂರಿನ 226 ಪ್ರದೇಶಗಳಿಗೆ ಮುಳುಗಡೆ ಭೀತಿ; ಕೆಎಸ್‌ಎನ್‌ಡಿಎಂಸಿ ವರದಿ

ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಸಮಿತಿಯ ಇತ್ತೀಚಿನ ವರದಿಯು ಮುಂಬರುವ ಮಾನ್ಸೂನ್ ಋತುವಿಗೆ ಬೆಂಗಳೂರು ಎಷ್ಟು ಕಳಪೆಯಾಗಿ ಸಿದ್ಧವಾಗಿದೆ ಎಂಬುದರ ಮೇಲೆ ಬೆಳಕು ಚೆಲ್ಲಿದೆ.

Bangalore Rains: ಬೆಂಗಳೂರಿನ 226 ಪ್ರದೇಶಗಳಿಗೆ ಮುಳುಗಡೆ ಭೀತಿ; ಕೆಎಸ್‌ಎನ್‌ಡಿಎಂಸಿ ವರದಿ
ಸಾಂದರ್ಭಿಕ ಚಿತ್ರ
Ganapathi Sharma
|

Updated on:May 26, 2023 | 2:47 PM

Share

ಬೆಂಗಳೂರು: ರಾಜ್ಯದಾದ್ಯಂತ ಮುಂಗಾರುಪೂರ್ವ ಮಳೆ (Pre Monsoon Rain) ಆರಂಭವಾಗಿದ್ದು, ಹಲವೆಡೆ ಈಗಾಗಲೇ ಅನೇಕ ಅನಾಹುತಗಳು ಸಂಭವಿಸಿವೆ. ಬೆಂಗಳೂರಿನಲ್ಲಿಯೂ (Bengaluru) ಹಲವೆಡೆ ಕೃತಕ ನೆರೆ ಪರಿಸ್ಥಿತಿ ಉಂಟಾಗಿದೆ. ಕೆಲವು ದಿನಗಳ ಹಿಂದಷ್ಟೇ ಕೆಆರ್ ಸರ್ಕಲ್ ಅಂಡರ್​ಪಾಸ್​​ನಲ್ಲಿ ಕಾರೊಂದು ನೀರಿನಲ್ಲಿ ಮುಳುಗಿ ಯುವತಿಯೊಬ್ಬರು ಮೃತಪಟ್ಟಿದ್ದರು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಮುಂಗಾರು ಮಳೆಗೆ ಬೆಂಗಳೂರು ಹೇಗೆ ಸಿದ್ಧಗೊಂಡಿದೆ ಮತ್ತು ಮಹಾನಗರದಲ್ಲಿ ಪ್ರವಾಹ ಭೀತಿ ಎದುರಿಸುತ್ತಿರುವ ಎಷ್ಟು ಪ್ರದೇಶಗಳಿವೆ ಎಂಬುದನ್ನು ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಸಮಿತಿಯ (KSNDMC) ಪಟ್ಟಿ ಮಾಡಿದೆ.

ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಸಮಿತಿಯ ಇತ್ತೀಚಿನ ವರದಿಯು ಮುಂಬರುವ ಮಾನ್ಸೂನ್ ಋತುವಿಗೆ ಬೆಂಗಳೂರು ಎಷ್ಟು ಕಳಪೆಯಾಗಿ ಸಿದ್ಧವಾಗಿದೆ ಎಂಬುದರ ಮೇಲೆ ಬೆಳಕು ಚೆಲ್ಲಿದೆ. ಈಗಾಗಲೇ ಇನ್ಫೋಸಿಸ್ ಟೆಕ್ಕಿ ಸೇರಿದಂತೆ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ನಗರದಲ್ಲಿ ಪೂರ್ವ ಮುಂಗಾರು ಮಳೆಯ ನಂತರ ಹಲವಾರು ತಗ್ಗು ಪ್ರದೇಶಗಳು ಜಲಾವೃತವಾಗಿವೆ.

ಕೆಎಸ್‌ಎನ್‌ಡಿಎಂಸಿ ವರದಿಯು ಬೆಂಗಳೂರಿನಲ್ಲಿ ದಿನಕ್ಕೆ 70 ಮಿಮೀ ಮಳೆಯಯಾದರೆ ನಗರದಲ್ಲಿ ಎಷ್ಟು ಪ್ರದೇಶಗಳು ಮುಳುಗಡೆಯಾಗಬಹುದು ಎಂಬುದನ್ನು ಅಂದಾಜಿಸಿದೆ. ಕೆಎಸ್‌ಎನ್‌ಡಿಎಂಸಿ ಪ್ರಕಾರ, ದಿನಕ್ಕೆ 70 ಮಿಮೀ ಮಳೆಯಯಾದರೆ ಸುಮಾರು 226 ಪ್ರದೇಶಗಳಲ್ಲಿ ಮುಳುಗಡೆ ಉಂಟಾಗಲಿದೆ. ಬೆಂಗಳೂರು ದಕ್ಷಿಣ ವಲಯ ಇಂತಹ ಅತಿ ಹೆಚ್ಚು ಸಂಭಾವ್ಯ ಮುಳುಗಡೆ ಪ್ರದೇಶಗಳನ್ನು (61) ಹೊಂದಿದೆ. ನಂತರ ಬೆಂಗಳೂರು ಪಶ್ಚಿಮ 40, ದಕ್ಷಿಣದಲ್ಲಿ 40 ಮತ್ತು ಯಲಹಂಕದಲ್ಲಿ 11 ಸಂಭಾವ್ಯ ಮುಳುಗಡೆ ಪ್ರದೇಶಗಳಿವೆ.

ಸಂಭಾವ್ಯ ಮುಳುಗಡೆ ಪ್ರದೇಶ ಎಲ್ಲೆಲ್ಲಿ ಎಷ್ಟು?

ಬೆಂಗಳೂರು ಪೂರ್ವ – 61 ಬೆಂಗಳೂರು ಪಶ್ಚಿಮ – 40 ಬೆಂಗಳೂರು ದಕ್ಷಿಣ – 40 ಯಲಹಂಕ – 11 ಮಹದೇವಪುರ – 24 ಬೊಮ್ಮನಹಳ್ಳಿ – 24 ಆರ್​ಆರ್​​ ನಗರ – 23 ದಾಸರಹಳ್ಳಿ – 3

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:45 pm, Fri, 26 May 23

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ