AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಶೇ. 28ರಷ್ಟು ಮಳೆ ಕೊರತೆ, 195 ತಾಲೂಕು ಬರಪೀಡಿತ- ಹಿಂಗಾರು ಮಳೆಯೂ ಕಡಿಮೆಯೇ: ಕಂದಾಯ ಸಚಿವ ಕೃಷ್ಣ ಭೈರೇಗೌಡ ಆತಂಕ

 Revenue Minister Krishna Byregowda -ಕರ್ನಾಟಕದಲ್ಲಿ ಶೇ. 28ರಷ್ಟು ಮಳೆ ಕೊರತೆ, 195 ತಾಲೂಕುಗಳು ಬರಪೀಡಿತ- ಹಿಂಗಾರು ಮಳೆಯೂ ಕಡಿಮೆಯೇ: ಕಂದಾಯ ಸಚಿವ ಕೃಷ್ಣ ಭೈರೇಗೌಡ ನೀಡಿದರು ಆತಂಕಕಾರಿ ಮಾಹಿತಿ

ಕರ್ನಾಟಕದಲ್ಲಿ ಶೇ. 28ರಷ್ಟು ಮಳೆ ಕೊರತೆ, 195 ತಾಲೂಕು ಬರಪೀಡಿತ- ಹಿಂಗಾರು ಮಳೆಯೂ ಕಡಿಮೆಯೇ: ಕಂದಾಯ ಸಚಿವ ಕೃಷ್ಣ ಭೈರೇಗೌಡ ಆತಂಕ
ಶೇ. 28ರಷ್ಟು ಮಳೆ ಕೊರತೆ, 195 ತಾಲೂಕುಗಳು ಬರಪೀಡಿತ- ಹಿಂಗಾರು ಮಳೆಯೂ ಕಡಿಮೆಯೇ
ಪ್ರಸನ್ನ ಗಾಂವ್ಕರ್​
| Edited By: ಸಾಧು ಶ್ರೀನಾಥ್​|

Updated on: Oct 05, 2023 | 4:25 PM

Share

ಬೆಂಗಳೂರು, ಅಕ್ಟೋಬರ್​ 5: ಹಿಂಗಾರು ಮಳೆಯೂ (Karnataka rains) ಕಡಿಮೆಯಾಗಲಿದ್ದು, ಕರ್ನಾಟಕ ರಾಜ್ಯವು ಪ್ರಸಕ್ತ ಸಾಲಿನಲ್ಲಿ ಬಹುತೇಕ ಬರಗಾಲ ಎದುರಿಸುತ್ತಿದೆ. ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು (Revenue Minister Krishna Byregowda) ರಾಜ್ಯದಲ್ಲಿ ಬರಗಾಲದ (Drought) ಹಾಲಿ ಸ್ಥಿತಿ ಮತ್ತು ಅದಕ್ಕೆ ಹಾಲಿ ಕಾಂಗ್ರೆಸ್​​ ಸರ್ಕಾರ ತೆಗೆದುಕೊಂಡಿರುವ ನೀತಿ ನಿರ್ಧಾರಗಳ ಬಗ್ಗೆ ವಿಧಾನಸೌಧದಲ್ಲಿಂದು ಸುದ್ದಿಗಾರರ ಎದುರು ಮಾಹಿತಿ ಹಂಚಿಕೊಂಡರು.

ಕರ್ನಾಟಕದಲ್ಲಿ ಶೇಕಡಾ 28ರಷ್ಟು ಮಳೆ ಕೊರತೆಯಾಗಿದೆ. ಕೇಂದ್ರ ಕೇಳಿದ ಎಲ್ಲಾ ಅಂಕಿ ಅಂಶಗಳನ್ನು ನಾವು ಕೊಟ್ಟಿದ್ದೇವೆ. ವರದಿ ಬಗ್ಗೆ ಕೇಂದ್ರದ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಬಳಿ 4,800 ಕೋಟಿ ಪರಿಹಾರ ಕೇಳಿದ್ದೇವೆ. ಮಾರ್ಗಸೂಚಿ ಪ್ರಕಾರ ಇಷ್ಟೇ ಪರಿಹಾರ ಕೇಳಲು ಆಗುವುದು. ನಮಗಿಂತ ಬೇರೆ ರಾಜ್ಯಗಳಲ್ಲೂ ಅಧಿಕ ಮಳೆ ಕೊರತೆ ಆಗಿದೆ. ಆದ್ರೆ ನಾವು‌ ಮಾತ್ರ ಬರಪೀಡಿತ ತಾಲೂಕು ಘೋಷಣೆ ಮಾಡಿದ್ದು ಕೇಂದ್ರ ಸರ್ಕಾರ ನಮ್ಮ ಮನವಿಗೆ ಸ್ಪಂದಿಸುವ ವಿಶ್ವಾಸ ಇದೆ ಎಂದು ವಿಧಾನಸೌಧದಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.

ಈ ಬಾರಿ ರಾಜ್ಯದಲ್ಲಿ ನಮಗೆ ಆಹಾರ ಕೊರತೆ ಆಗುತ್ತೆ. ಯಾವುದು ಎಷ್ಟು ಅಂತ ಲೆಕ್ಕ ಹಾಕುತ್ತಿದ್ದೇವೆ. ಹಿಂಗಾರು ಕೂಡ ವಾಡಿಕೆಗಿಂತ ಕಡಿಮೆ ಮಳೆ ಆಗಲಿದೆ. ರಾಜ್ಯದಲ್ಲಿ ೨೮ % ಮಳೆ ಕೊರತೆಯಾಗಿದೆ. ನಾವು ಕೊಟ್ಟ ಬರದ ವರದಿ ಬಗ್ಗೆ ಕೇಂದ್ರ ಅಧಿಕಾರಿಗಳು ಗುಡ್ ಅಂದಿದ್ದಾರೆ. ಅವರು ಕೇಳಿದ ಎಲ್ಲ ಅಂಕಿ ಅಂಶಗಳನ್ನು ‌ನಾವು ಕೊಟ್ಟಿದ್ದೇವೆ. ಮಳೆ ಅಳತೆ‌ ಮಾಡುವ ವ್ಯವಸ್ಥೆ ನಮ್ಮಲ್ಲಿ ಚೆನ್ನಾಗಿದೆ. ನಿಖರವಾದ ಅಂಕಿಅಂಶಗಳನ್ನು ‌ನಾವು ಕೊಟ್ಟಿದ್ದೇವೆ. ನ್ಯಾಯೂತವಾಗಿ ಕೇಂದ್ರ ಸರ್ಕಾರ ಸ್ಪಂದಿಸುವ ಕೆಲಸ ಕೇಂದ್ರ ಮಾಡುತ್ತೆ. ನಮ್ಮ ಮನವಿಗೆ ಸ್ಪಂದನೆ ಮಾಡ್ತಾರೆ ಎಂಬ ಭರವಸೆ ಇದೆ ಅವರು ವಿಶ್ವಾಸ ವ್ಯಕ್ತಪಡಿಸಿದರು.

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್