ದ್ವಿತೀಯ ಪಿಯುಸಿ ಎರಡನೇ ಪೂರಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಬಿಎಂಟಿಸಿಯಲ್ಲೂ ಉಚಿತ ಪ್ರಯಾಣ

Second PU 2nd Supplementary Exam: ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆ ಆಗಸ್ಟ್ 21 ರಿಂದ ಸೆಪ್ಟೆಂಬರ್ 2 ರ ವರೆಗೆ ನಡೆಯಲಿದೆ. ಈಗಾಗಲೇ ಕೆಎಸ್​ಆರ್​ಟಿಸಿ, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ಪ್ರಯಾಣದ ಅವಕಾಶ ಕಲ್ಪಿಸಿದ್ದು, ಇದೀಗ ಬಿಎಂಟಿಸಿ ಕೂಡ ಉಚಿತ ಪ್ರಯಾಣಕ್ಕೆ ಅವಕಾಶ ನೀಡುತ್ತಿದೆ.

ದ್ವಿತೀಯ ಪಿಯುಸಿ ಎರಡನೇ ಪೂರಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಬಿಎಂಟಿಸಿಯಲ್ಲೂ ಉಚಿತ ಪ್ರಯಾಣ
ದ್ವಿತೀಯ ಪಿಯುಸಿ ಎರಡನೇ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಲ್ಲೂ ಉಚಿತ ಪ್ರಯಾಣ (ಸಾಂದರ್ಭಿಕ ಚಿತ್ರ)
Follow us
| Updated By: Rakesh Nayak Manchi

Updated on: Aug 18, 2023 | 8:09 PM

ಬೆಂಗಳೂರು, ಆಗಸ್ಟ್ 18: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಆಗಸ್ಟ್ 21 ರಿಂದ ಸೆಪ್ಟೆಂಬರ್ 2ರ ವರೆಗೆ ನಡೆಸುವ ದ್ವಿತೀಯ ಪಿಯುಸಿ ಎರಡನೇ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಿಎಂಟಿಸಿ (BMTC) ಉಚಿತ ಪ್ರಯಾಣದ ಅವಕಾಶ ನೀಡುತ್ತಿದೆ. ಕೆಎಸ್​ಆರ್​ಟಿಸಿ (KSRTC) ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವುದಾಗಿ ಹೇಳಿದ ಬೆನ್ನಲ್ಲೇ ಬಿಎಂಟಿಸಿ ಈ ನಿರ್ಧಾರ ಕೈಗೊಂಡಿದೆ.

ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಸಹಕಾರಕ್ಕಾಗಿ ಉಚಿತ ಸಾರಿಗೆ ಸೇವೆ ನೀಡಲಾಗುತ್ತಿದೆ. ವಿದ್ಯಾರ್ಥಿ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೂ ಉಚಿತ ಸಾರಿಗೆ ಸೇವೆ ನೀಡಲಾಗುತ್ತದೆ ಎಂದು ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನ ತೋರಿಸಿ ಬಿಎಂಟಿಸಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು. ಇದು ಸಾಮಾನ್ಯ ಬಿಎಂಟಿಸಿ ಬಸ್​ಗಳಲ್ಲಿ ಮಾತ್ರ ಅನ್ವಯವಾಗುತ್ತದೆ ಎಂದು ಪ್ರಕಟಣೆಯಲ್ಲಿ ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ: ಬಿಎಂಟಿಸಿ ಬಸ್​ನಲ್ಲಿ ಕಂಡೆಕ್ಟರ್, ಪುರುಷ ಪ್ರಯಾಣಿಕರಿಂದ ವಿದ್ಯಾರ್ಥಿನಿಗೆ ಕಿರುಕುಳ

ಇತ್ತೀಚೆಗೆ, ಕೆಎಸ್ಆರ್​​ಟಿಸಿ ಕೂಡ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್​ಆರ್​​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿ ಪ್ರಕಟಣೆ ಹೊರಡಿಸಿತ್ತು. ಪರೀಕ್ಷಾ ಪ್ರವೇಶಪತ್ರ ತೋರಿಸಿ ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ನಿಗಮದ ನಗರ ಹೊರ ವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ತಿಳಿಸಿದೆ.

ಸಿಬಿಎಸ್​ಇ 12ನೇ ತರಗತಿ ಪೂರಕ ಪರೀಕ್ಷೆಯು ಜುಲೈ 27 ರಂದು ನಡೆದಿದ್ದು, ಆಗಸ್ಟ್ 01 ರಂದು ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟಗೊಂಡಿತ್ತು. 2ನೇ ಬಾರಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಉಪನ್ಯಾಸಕರ ವಿರೋಧದ ನಡುವೆಯೂ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2ನೇ ಪೂರಕ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಮಾಡಿತ್ತು. 2022-23ನೇ ಸಾಲಿನಲ್ಲಿ ಹಾಗೂ ಅದಕ್ಕಿಂತ ಹಿಂದೆ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ಅರ್ಹರಾಗಿದ್ದಾರೆ.

ಮತ್ತಷ್ಟು ಶೈಕ್ಷಣಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ